ಆ್ಯಪ್ನಗರ

ರಾಹುಕಾಲದಲ್ಲಿ ಬಜೆಟ್ ಮಂಡಿಸಿದ ಸಿಎಂ

ರಾಹುಕಾಲದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದರು.

ವಿಕ ಸುದ್ದಿಲೋಕ 19 Mar 2016, 4:38 am
ಬೆಂಗಳೂರು: ರಾಹುಕಾಲದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದರು.
Vijaya Karnataka Web news/karnataka/budget
ರಾಹುಕಾಲದಲ್ಲಿ ಬಜೆಟ್ ಮಂಡಿಸಿದ ಸಿಎಂ


ವಿಧಾನಸಭೆಯಲ್ಲಿ ‘ವಂದೇ ಮಾತರಂ’ ಗೀತೆ ಹಾಡಿದ ನಂತರ ಸಿಎಂ ಸಿದ್ದರಾಮಯ್ಯ ಬಜೆಟ್ ಭಾಷಣ ಆರಂಭಿಸಲು ಮುಂದಾದರು. ಆಗ ಎದ್ದು ನಿಂತ ಜೆಡಿಎಸ್ ಸದಸ್ಯ ವೈ.ಎಸ್.ವಿ. ದತ್ತ ‘‘ಮುಖ್ಯಮಂತ್ರಿ ಸಿದ್ದರಾಮಯ್ಯ ವೈಚಾರಿಕತೆ ಮನೋಭಾವ ಪ್ರದರ್ಶಿಸಿದ್ದಾರೆ. ರಾಹುಕಾಲದಲ್ಲಿ ಬಜೆಟ್ ಮಂಡಿಸಿರುವುದಕ್ಕೆ ಅಭಿನಂದನೆಗಳು,’’ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಹರ್ಷ ವ್ಯಕ್ತಪಡಿಸಿದರು.

ಈ ನಡುವೆ ‘‘ರಾಹುಕಾಲ, ಗುಳಿಕ ಕಾಲ ನೋಡೋರು ನಿಮ್ಮಲ್ಲೇ (ಜೆಡಿಎಸ್) ಜಾಸ್ತಿ,’’ ಎಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಹಾಸ್ಯ ಚಟಾಕಿ ಹಾರಿಸಿದಾಗ, ಇಡೀ ಸದನ ನಗೆಗಡಲಲ್ಲಿ ಮುಳುಗಿತು. ಆಗ ನಗುತ್ತಲೇ ಎದ್ದು ನಿಂತ ಸಿಎಂ ‘‘ರಾಹುಕಾಲ, ಗುಳಿಕ ಕಾಲದ ಬಗ್ಗೆ ನನಗೆ ನಂಬಿಕೆ ಇಲ್ಲ. ಅಭಿನಂದನೆ ಸಲ್ಲಿಸಿದ ಎಲ್ಲರಿಗೂ ನನ್ನ ಧನ್ಯವಾದಗಳು,’’ ಎಂದು ಹೇಳಿ ಸಭಾಧ್ಯಕ್ಷರ ಸೂಚನೆ ಮೇರೆಗೆ ಬಜೆಟ್ ಭಾಷಣ ಪ್ರಾರಂಭಿಸಿದರು. ಸಾಮಾನ್ಯವಾಗಿ ಗುಳಿಕ ಕಾಲದಲ್ಲಿ ಬಜೆಟ್ ಮಂಡಿಸುವುದು ಸಹಜ. ಆದರೆ, ರಾಹುಕಾಲದಲ್ಲಿ ಬಜೆಟ್ ಮಂಡಿಸಿರುವುದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು ಎನ್ನಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ