ಆ್ಯಪ್ನಗರ

ಕರ್ನಾಟಕ: ನ.3ಕ್ಕೆ ಮೂರು ಲೋಕಸಬಾ, 2 ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ

ರಾಜ್ಯದ ಶಿವಮೊಗ್ಗ, ಬಳ್ಳಾರಿ ಹಾಗೂ ಮಂಡ್ಯದಲ್ಲಿ ನ.3 ರಂದು ಲೋಕಸಭೆಗೆ ಉಪಚುನಾವಣೆ ನಡೆಯಲಿದೆ.

Vijaya Karnataka Web 6 Oct 2018, 3:59 pm
ಹೊಸದಿಲ್ಲಿ: ರಾಜ್ಯದ ಶಿವಮೊಗ್ಗ, ಬಳ್ಳಾರಿ ಹಾಗೂ ಮಂಡ್ಯದಲ್ಲಿ ನ.3 ರಂದು ಲೋಕಸಭೆಗೆ ಉಪಚುನಾವಣೆ ನಡೆಯಲಿದೆ.
Vijaya Karnataka Web vote


ಬಳ್ಳಾರಿ ಲೋಕಸಭೆ ಸದಸ್ಯರಾಗಿದ್ದ ಶ್ರೀರಾಮುಲು, ಶಿವಮೊಗ್ಗದ ಸಂಸದರಾಗಿದ್ದ ಬಿ.ಎಸ್‌. ಯಡಿಯೂರಪ್ಪ ಹಾಗೂ ಮಂಡ್ಯದಿಂದ ಆಯ್ಕೆಯಾಗಿದ್ದ ಎಚ್‌ ಡಿ ಕುಮಾರಸ್ವಾಮಿ ಅವರು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಲೋಕಸಭೆ ಸ್ಥಾನಗಳು ತೆರವಾಗಿದ್ದವು. ಇದೀಗ ಪಂಚರಾಜ್ಯಗಳ ಚುನಾವಣೆ ಜತೆಗೆ, ತೆರವಾದ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.


ಇದರೊಂದಿಗೆ ಜಮಖಂಡಿ ಸಂಸದ ಸಿದ್ದು ನ್ಯಾಮೆಗೌಡ ನಿಧನಗೊಂಡಿದ್ದರಿಂದ ಜಮಖಂಡಿ ಲೋಕಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಒಪ ರಾವತ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ