ಆ್ಯಪ್ನಗರ

ಇನ್ನೊಂದು ವಾರ ಸಂಪುಟವಿಲ್ಲ

ಹೊಸ ಸಂಪುಟ ರಚನೆ ಪ್ರಕ್ರಿಯೆಗೆ ಇನ್ನೂ ಒಂದು ವಾರ ವಿಳಂಬವಾಗಲಿದ್ದು, ಮೊದಲ ಹಂತದಲ್ಲಿ 20 ಸಚಿವರು ಪ್ರಮಾಣ ಸ್ವೀಕರಿಸುವ ಸಾಧ್ಯತೆ ಇದೆ...

Vijaya Karnataka Web 31 Jul 2019, 5:00 am
ಬೆಂಗಳೂರು: ಹೊಸ ಸಂಪುಟ ರಚನೆ ಪ್ರಕ್ರಿಯೆಗೆ ಇನ್ನೂ ಒಂದು ವಾರ ವಿಳಂಬವಾಗಲಿದ್ದು, ಮೊದಲ ಹಂತದಲ್ಲಿ 20 ಸಚಿವರು ಪ್ರಮಾಣ ಸ್ವೀಕರಿಸುವ ಸಾಧ್ಯತೆ ಇದೆ.
Vijaya Karnataka Web 2907-2-2-21


ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಆಗಸ್ಟ್‌ 7ರ ವರೆಗೂ ಸಂಸತ್‌ ಕಲಾಪದಲ್ಲಿ ಬ್ಯುಸಿ ಇರುವ ಕಾರಣಕ್ಕೆ ರಾಜ್ಯ ಸರಕಾರದ ಸಂಪುಟ ರಚನೆ ವಿಚಾರಕ್ಕೆ ಗಮನ ನೀಡುತ್ತಿಲ್ಲಎಂದು ಬಿಜೆಪಿ ಮೂಲಗಳು ತಿಳಿಸಿವೆ.

5ಕ್ಕೆ ದಿಲ್ಲಿಗೆ

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಯಡಿಯೂರಪ್ಪ,''ಸಂಪುಟ ವಿಸ್ತರಣೆ ಹಾಗೂ ಬರ ಪರಿಹಾರಕ್ಕೆ ಹೆಚ್ಚಿನ ಅನುದಾನ ನೀಡುವಂತೆ ವರಿಷ್ಠರ ಜತೆ ಚರ್ಚೆ ನಡೆಸಲು ಆಗಸ್ಟ್‌ 5, 6ರಂದು ದಿಲ್ಲಿಗೆ ಭೇಟಿ ನೀಡುತ್ತಿದ್ದೇನೆ,'' ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ