ಆ್ಯಪ್ನಗರ

ಮುಂದಿನ ನಾಲ್ಕು ದಿನದೊಳಗೆ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ: ಯಡಿಯೂರಪ್ಪ

ವಾಲ್ಮೀಕಿ ಸಮುದಾಯಕ್ಕೆ ಫೆಬ್ರವರಿಯೊಳಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ವಾಲ್ಮೀಕಿ ಸ್ವಾಮೀಜಿ ಗಡುವು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಿಎಸ್‌ವೈ, “ಇಂದು ಸಂಜೆ ವಾಲ್ಮೀಕಿ ಸಮಾಜದ ಸ್ವಾಮೀಜಿ ಮತ್ತು ಶಾಸಕರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ,” ಎಂದರು.

Vijaya Karnataka 4 Jan 2020, 3:54 pm

ಹಾಸನ: ಮುಂದಿನ ನಾಲ್ಕು ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹೇಳಿದರು.
Vijaya Karnataka Web BS Yediyurappa


ಪುಷ್ಪಗಿರಿ ರಾಷ್ಟ್ರೀಯ ಉತ್ಸವ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಅವರು ಹಳೇಬೀಡಿನಲ್ಲಿ ಮಾತನಾಡಿ, “ಧಾರ್ಮಿಕ ಸಂಸ್ಥೆಗಳು ಸಮಾಜದ ಬೆಳವಣಿಗೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಬಂದಿರುವ ಪರಂಪರೆ ನಮ್ಮಲ್ಲಿದೆ. ಪುಷ್ಪಗಿರಿ ಮಠಕ್ಕೆ ಮೊದಲ ಕಂತಾಗಿ 5 ಕೋಟಿ ಹಣ ಬಿಡುಗಡೆ ಮಾಡುತ್ತೇನೆ,” ಎಂದರು.

"ರಣಘಟ್ಟ ಏತ ನೀರಾವರಿಗೆ ರೂಪುರೇಷೆ ಸಿದ್ದಪಡಿಸಲಾಗಿದೆ. ರಣಘಟ್ಟ ಮತ್ತು ಹಳೇಬೀಡು ಕೆರೆಗೆ ನೀರು ಹರಿಸಲಾಗುತ್ತದೆ. ರಣಘಟ್ಟ ಯೋಜನೆಗೆ 125 ಕೋಟಿ ಅನುದಾನ ಬಿಡುಗಡೆ ಮಾಡುತ್ತೇನೆ. ನಮ್ಮ ಸರ್ಕಾರದ ಆದ್ಯತೆ ರೈತರ ಅಭಿವೃದ್ಧಿ. ರಾಜ್ಯದ ಎಲ್ಲಾ ಕೆರೆ ಕಟ್ಟೆಗಳನ್ನ ತುಂಬಿಸುತ್ತೇವೆ. ಪ್ರವಾಸೋದ್ಯಕ್ಕೆ ಆದ್ಯತೆ ನೀಡುವ ಮೂಲಕ ಬೇಲೂರು, ಹಳೇಬೀಡಿಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಆಗಮಿಸುವಂತೆ ಮಾಡಲಾಗುವುದು," ಎಂದು ಸಿಎಂ ಭರವಸೆ ನೀಡಿದರು.

ರಾಜ್ಯದ ಬೇಡಿಕೆಗಳಿಗೆ ಸ್ಪಂದಿಸಿದ ಪ್ರಧಾನಿ ಮೋದಿ: ಸಿಎಂ ಯಡಿಯೂರಪ್ಪ ಸ್ಪಷ್ಟನೆ

“ಬಜೆಟ್ ಮಂಡಿಸಲು ಸಿದ್ಧತೆ ಮಾಡಿಕೊಂಡಿದ್ದೇನೆ. ಕೃಷಿಗೆ ಆದ್ಯತೆ ನೀಡಲು ಚಿಂತಿಸಿದ್ದೇನೆ. ಬಜೆಟ್ ಮಂಡಿಸಲು ಹೈಕಮಾಂಡ್ ಜೊತೆ ಕೆಲ ವಿಷಯಗಳನ್ನು ಚರ್ಚಿಸುತ್ತೇನೆ. ಬಜೆಟ್ ನಲ್ಲಿ ನೀರಾವರಿ ಮತ್ತು ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇನೆ,” ಎಂಬುದಾಗಿ ಯಡಿಯೂರಪ್ಪ ವಿವರಿಸಿದರು.

ವಾಲ್ಮೀಕಿ ಸಮುದಾಯಕ್ಕೆ ಫೆಬ್ರವರಿಯೊಳಗೆ ಡಿಸಿಎಂ ಹುದ್ದೆ ನೀಡುವಂತೆ ವಾಲ್ಮೀಕಿ ಸ್ವಾಮೀಜಿ ಗಡುವು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, “ಇಂದು ಸಂಜೆ ವಾಲ್ಮೀಕಿ ಸಮಾಜದ ಸ್ವಾಮೀಜಿ ಮತ್ತು ಶಾಸಕರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ,” ಎಂದ ಬಿಎಸ್‌ವೈ, ರಾಜ್ಯಕ್ಕೆ ಬರಬೇಕಾದ ಅನುದಾನದ ಬಗ್ಗೆ ಸಂಬಂಧಪಟ್ಟ ಕೇಂದ್ರ ಸಚಿವರೊಂದಿಗೆ ಮಾತನಾಡುತ್ತೇನೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ