ಆ್ಯಪ್ನಗರ

ಸಂಪುಟ ವಿಸ್ತರಣೆ ಮುಂದೂಡಿಕೆ ಸುಳಿವು ನೀಡಿದ ಡಿಸಿಎಂ

ಪಂಚರಾಜ್ಯಗಳ ಚುನಾವಣೆ ಪ್ರಚಾರದಲ್ಲಿ ಪಕ್ಷದ ವರಿಷ್ಠರು ಮುಳುಗಿರುವುದರಿಂದ ಬಹು ನಿರೀಕ್ಷಿತ ಸಂಪುಟ ವಿಸ್ತರಣೆ ಮತ್ತೊಮ್ಮೆ ಮುಂದೂಡಿಕೆಯಾಗುವ ಸುಳಿವನ್ನು ಡಿಸಿಎಂ ಜಿ...

Vijaya Karnataka 23 Nov 2018, 9:34 am
ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಪ್ರಚಾರದಲ್ಲಿ ಪಕ್ಷದ ವರಿಷ್ಠರು ಮುಳುಗಿರುವುದರಿಂದ ಬಹು ನಿರೀಕ್ಷಿತ ಸಂಪುಟ ವಿಸ್ತರಣೆ ಮತ್ತೊಮ್ಮೆ ಮುಂದೂಡಿಕೆಯಾಗುವ ಸುಳಿವನ್ನು ಡಿಸಿಎಂ ಜಿ.ಪರಮೇಶ್ವರ್‌ ನೀಡಿದ್ದಾರೆ.
Vijaya Karnataka Web gp


ಈ ತಿಂಗಳ ಅಂತ್ಯದೊಳಗೇ ಸಂಪುಟ ವಿಸ್ತರಣೆಯಾಗಬಹುದು ಎಂದು ಹೇಳಲಾಗಿತ್ತು. ಇದಕ್ಕಾಗಿ ಸಚಿವ ಸ್ಥಾನದ ಆಕಾಂಕ್ಷಿಗಳೂ ಕಾಯುತ್ತಿದ್ದರು. ಜತೆಗೆ ನಿಗಮ ಮಂಡಳಿ ನೇಮಕವೂ ನಡೆಯುವುದಾಗಿ ಭಾವಿಸಲಾಗಿತ್ತು.

ಆದರೆ, ಈ ಬಗ್ಗೆ ಗುರುವಾರ ಪ್ರತಿಕ್ರಿಯಿಸಿರುವ ಡಿಸಿಎಂ, ''ಸಂಪುಟ ವಿಸ್ತರಣೆ ಸಂಬಂಧ ಈಗಾಗಲೇ ಚರ್ಚೆಯಾಗಿದೆ. ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಚುನಾವಣಾ ಪ್ರವಾಸದಲ್ಲಿದ್ದಾರೆ. ಅವರಿಂದ ಯಾವ ಸೂಚನೆ ಬರುತ್ತದೆ ಎಂದು ನೋಡಿಕೊಂಡು ಮುಂದುವರಿಯಲಾಗುವುದು,'' ಎಂದಿದ್ದಾರೆ.

ಕಾಂಗ್ರೆಸ್‌ನಲ್ಲಿ ಮಂತ್ರಿಮಂಡಲ ವಿಸ್ತರಣೆಗೆ ಒತ್ತಡವಿದ್ದರೂ ಜೆಡಿಎಸ್‌ನಲ್ಲಿ ಇಂತಹ ಯಾವ ಒತ್ತಡವೂ ಕಾಣುತ್ತಿಲ್ಲ. ಸಂಪುಟ ಸೇರುವವರ ಪಟ್ಟಿಯನ್ನು ತಯಾರಿಸಿ ಕೊಟ್ಟರೆ ನೂತನ ಸಚಿವರ ಪ್ರಮಾಣವಚನಕ್ಕೆ ಮುಹೂರ್ತ ನಿಗದಿ ಮಾಡಲು ಅಡ್ಡಿಯಿಲ್ಲವೆಂದು ಸಿಎಂ ಅಭಿಪ್ರಾಯ ತಿಳಿಸಿದ್ದಾರೆ. ಆದರೆ, ಯಾವುದೇ ಬಿಕ್ಕಟ್ಟು ಎದುರಾಗದಂತೆ ಸಂಪುಟ ವಿಸ್ತರಿಸುವಂತೆ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಕಿವಿಮಾತು ಹೇಳಿದ್ದಾರೆ. ಮಂತ್ರಿಮಂಡಲ ವಿಸ್ತರಿಸಿದರೆ ಇಕ್ಕಟ್ಟು ತಪ್ಪಿದ್ದಲ್ಲ ಎನ್ನುವುದು ಕಾಂಗ್ರೆಸ್‌ ನಾಯಕರಿಗೆ ಅರಿವಿದೆ. ಹಾಗಾಗಿಯೇ ಹೊಸ ಹೊಸ ನೆಪ ಹುಡುಕಿ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳುವ ಯತ್ನ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ