ಆ್ಯಪ್ನಗರ

ಡಿ.22ಕ್ಕೆ ಸಂಪುಟ ವಿಸ್ತರಣೆ ಆಗಲೇಬೇಕು, ಇಲ್ಲದಿದ್ದರೆ ಮೈತ್ರಿ ಸರಕಾರಕ್ಕೆ ಸಂಕಷ್ಟ: ಎಂಬಿ ಪಾಟೀಲ್‌

ಕಾಂಗ್ರೆಸ್‌ನ ಹಿರಿಯ ನಾಯಕರು ಬುಧವಾರ ರಾತ್ರಿ ಖಾಸಗಿ ಹೋಟೆಲ್‌ನಲ್ಲಿ ಸಭೆ ಸೇರಿ ಸಮಾಲೋಚನೆ ನಡೆಸಿದರು. ಇದರ ಬೆನ್ನಲ್ಲೇ ಡಿಕೆ ಶಿವಕಮಾರ್‌ ಅವರು ಎಂಬಿ ಪಾಟೀಲ್‌ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಸಂಧಾನ ನಡೆಸಿದರು.

Vijaya Karnataka Web 6 Dec 2018, 4:28 pm
ಬೆಂಗಳೂರು: ಸರಕಾರ ರಚನೆಯಾಗಿ 6 ತಿಂಗಳ ಮೇಲಾಗಿದೆ. ಇನ್ನಾದರೂ ಸಂಪುಟ ವಿಸ್ತರಣೆ ಆಗದಿದ್ದರೆ ದೋಸ್ತಿ ಸರಕಾರಕ್ಕೆ ತೊಂದರೆ ಉಂಟಾಗಲಿದೆ ಎಂದು ಮಾಜಿ ಸಚಿವ ಎಂಬಿ ಪಾಟೀಲ್‌ ಎಚ್ಚರಿಸಿದ್ದಾರೆ.
Vijaya Karnataka Web ಎಂಬಿ ಪಾಟೀಲ್‌
ಎಂಬಿ ಪಾಟೀಲ್‌


ಸಚಿವ ಡಿ.ಕೆ. ಶಿವಕುಮಾರ್‌ ನಿವಾಸದಲ್ಲಿ ಮಾತುಕತೆ ನಡೆಸಿದ ಬಳಿಕ ಖಾಸಗಿ ವಾಹಿತಿ ಜತೆ ಮಾತನಾಡಿದ ಮಾಜಿ ಸಚಿವ ಎಂಬಿ ಪಾಟೀಲ್‌, ಕಾಂಗ್ರೆಸ್‌ ಹೈಕಮಾಂಡ್‌ಗೆ ಎಚ್ಚರಿಕೆ ರೂಪದ ಸಂದೇಶ ರವಾನಿಸಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕರು ಬುಧವಾರ ರಾತ್ರಿ ಖಾಸಗಿ ಹೋಟೆಲ್‌ನಲ್ಲಿ ಸಭೆ ಸೇರಿ ಸಮಾಲೋಚನೆ ನಡೆಸಿದರು. ಇದರ ಬೆನ್ನಲ್ಲೇ ಡಿಕೆ ಶಿವಕಮಾರ್‌ ಅವರು ಎಂಬಿ ಪಾಟೀಲ್‌ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಸಂಧಾನ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಂಬಿ ಪಾಟೀಲ್‌, ಪಕ್ಷದ ಹಿರಿಯ ನಾಯಕರನ್ನು ಕಡೆಗಣಿಸಲಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಡಿಕೆಶಿಗೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ಪಕ್ಷದ ಹಿರಿಯ ನಾಯಕರೆಲ್ಲರೂ ಒಂದೆಡೆ ಸೇರಿ ಚರ್ಚಿಸುವುದರಲ್ಲಿ ಯಾವುದೇ ತಪ್ಪಿಲ್ಲ. ನಮ್ಮ ನೋವು, ಅಭಿಪ್ರಾಯಗಳನ್ನು ಹಂಚಿಕೊಂಡಿದ್ದೇವೆ. ನಾವು ಮಾತುಕತೆ ನಡೆಸಲು ಯಾರ ಅನುಮತಿಯೂ ಬೇಕಾಗಿಲ್ಲ ಎಂದು ಮಾಜಿ ಸಚಿವರು ಖಡಕ್ಕಾಗಿ ಉತ್ತರಿಸಿದ್ದಾರೆ.

ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಧಾರವಾದಂತೆ ಡಿಸೆಂಬರ್‌ 22ಕ್ಕೆ ಸಂಪುಟ ವಿಸ್ತರಣೆ ಆಗಲೇಬೇಕು. ಸಚಿವ ಸ್ಥಾನಕಾಂಕ್ಷಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಪದೇಪದೆ ವಿಸ್ತರಣೆ ಮುಂದೂಡಿಕೆಯಾದರೆ ಮೈತ್ರಿ ಸರಕಾರಕ್ಕೆ ಧಕ್ಕೆ ಉಂಟಾಗಬಹುದು ಎಂದು ಪಾಟೀಲ್‌ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ