ಆ್ಯಪ್ನಗರ

ಸಂಪುಟ ವಿಸ್ತರಣೆ: ತೀವ್ರಗೊಂಡ ಆಕಾಂಕ್ಷಿಗಳ ಲಾಬಿ !

ಇನ್ನೆರಡು ದಿನಗಳಲ್ಲಿ ಸಿಎಂ ಬಿಎಸ್‌ ಯಡಿಯೂರಪ್ಪ ದೆಹಲಿಗೆ ಪ್ರವಾಸ ಕೈಗೊಳ್ಳಲಿದ್ದು ವರಿಷ್ಠರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಕುರಿತಾಗಿ ಮಾತುಕತೆ ನಡೆಸಲಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ.

Vijaya Karnataka Web 29 Sep 2020, 9:46 am
ಬೆಂಗಳೂರು: ಸಂಪುಟ ವಿಸ್ತರಣೆ ಮಾಡುವ ನಿಟ್ಟಿನಲ್ಲಿ ಇನ್ನೆರಡು ದಿನಗಳಲ್ಲಿ ಸಿಎಂ ಬಿ.ಎಸ್‌ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದು ವರಿಷ್ಠರನ್ನು ಭೇಟಿ ಮಾಡಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಈ ಬಾರಿ ವಿಸ್ತರಣೆ ಸರ್ಕಸ್ ಬಹುತೇಕ ಸಕ್ಸಸ್ ಆಗುವ ಲಕ್ಷಣಗಳು ಗೋಚರಿಸುತ್ತಿದ್ದು ಆಕಾಂಕ್ಷಿಗಳ ಲಾಬಿಯೂ ತೀವ್ರಗೊಂಡಿದೆ.
Vijaya Karnataka Web BS Yediyurappa


ಸದ್ಯ ಖಾಲಿ ಉಳಿದಿರುವ ಆರು ಸ್ಥಾನಗಳ ಪೈಕಿ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡುವುದು ಬಿಎಸ್‌ವೈ ಯೋಚನೆಯಾಗಿದೆ. ಎರಡು ಸ್ಥಾನ ಮೂಲ ಹಾಗೂ ಎರಡು ವಲಸಿಗರಿಗೆ ಎಂಬುವುದು ಸದ್ಯದ ಲೆಕ್ಕಾಚಾರವಾಗಿದೆ. ಆದರೆ ಎಚ್‌. ವಿಶ್ವನಾಥ್ ಕೂಡಾ ಮಂತ್ರಿ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿರುವುದರಿಂದ ಬಿಎಸ್‌ವೈ ನಡೆಯೂ ಕುತೂಹಲ ಕೆರಳಿಸಿದೆ.

ಸಂಪುಟ ಪುನರ್‌ರಚನೆ ಪಕ್ಕಾ, ಯಾರ‍್ಯಾರಿಗೆ ಕೊಕ್‌? ಯಾರಿಗಿದೆ ಸಚಿವರಾಗುವ ಯೋಗ?

ಅಧಿವೇಶನಕ್ಕೆ ಮೊದಲು ಸಂಪುಟ ವಿಸ್ತರಣೆ ಮಾಡಬೇಕು ಎಂಬ ಇರಾದೆಯನ್ನು ಸಿಎಂ ಇಟ್ಟುಕೊಂಡಿದ್ದರು. ಆದರೆ ಪುನಾರಚನೆ ಅಥವಾ ವಿಸ್ತರಣೆ ಬಗ್ಗೆ ಗೊಂದಲ ಇತ್ತು. ವರಿಷ್ಠರ ಜೊತೆಗೆ ಮಾತುಕತೆ ನಡೆಸಿದರು ನಿರ್ಧಾರ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ.

ಈ ನಿಟ್ಟಿನಲ್ಲಿ ಈ ಬಾರಿಯ ದೆಹಲಿ ಪ್ರವಾಸ ಮಹತ್ವ ಪಡೆದುಕೊಂಡಿದೆ. ದೆಹಲಿ ಭೇಟಿ ಬಳಿಕ ಸಂಪುಟ ವಿಸ್ತರಣೆ ಈ ಬಾರಿ ನಡೆಯುತ್ತದೆ ಎಂಬ ವಿಶ್ವಾಸವನ್ನು ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಆಕಾಂಕ್ಷಿಗಳ ಲಾಬಿಯೂ ತೀವ್ರಗೊಂಡಿದೆ.

ಎಂಟಿಬಿ ನಾಗರಾಜ್‌, ಆರ್‌. ಶಂಕರ್‌, ಎಚ್‌ ವಿಶ್ವನಾಥ್, ಉಮೇಶ್ ಕತ್ತಿ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಲಿಂಬಾವಳಿ, ರೇಣುಕಾಚಾರ್ಯ ಸೇರಿದಂತೆ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ರಾಜ್ಯ ಮಟ್ಟದಲ್ಲಿ ಹಾಗೂ ಹೈಕಮಾಂಡ್ ಮಟ್ಟದಲ್ಲಿ ಆಕಾಂಕ್ಷಿಗಳು ಲಾಬಿ ನಡೆಸುತ್ತಿದ್ದಾರೆ. ಆದರೆ ವರಿಷ್ಠರ ನಿರ್ಧಾರ ಏನು ಎಂಬುವುದು ಸದ್ಯದ ಕುತೂಹಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ