ಆ್ಯಪ್ನಗರ

ಚುನಾವಣೆ ವಿರಾಮದ ಬಳಿಕ ಮೇ 9ಕ್ಕೆ ಮಹತ್ವದ ಸಂಪುಟ ಸಭೆ

ಸುಮಾರು 2 ತಿಂಗಳ ಬಳಿಕ ಮೈತ್ರಿ ಸರಕಾರದ ಸಚಿವ ಸಂಪುಟ ಸಭೆ ಗುರುವಾರ (ಮೇ 9) ನಡೆಯುತ್ತಿದ್ದು, ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅಭಿವೃದ್ಧಿ ಯೋಜನೆಗಳಿಗೆ ಮರುಚಾಲನೆ ಜತೆಗೆ ಆಡಳಿತ ಯಂತ್ರ ಸಹಜ ಸ್ಥಿತಿಗೆ ಮರಳುವ ನಿರೀಕ್ಷೆಯಿದೆ.

Vijaya Karnataka 7 May 2019, 5:00 am
ಬೆಂಗಳೂರು : ಸುಮಾರು 2 ತಿಂಗಳ ಬಳಿಕ ಮೈತ್ರಿ ಸರಕಾರದ ಸಚಿವ ಸಂಪುಟ ಸಭೆ ಗುರುವಾರ (ಮೇ 9) ನಡೆಯುತ್ತಿದ್ದು, ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅಭಿವೃದ್ಧಿ ಯೋಜನೆಗಳಿಗೆ ಮರುಚಾಲನೆ ಜತೆಗೆ ಆಡಳಿತ ಯಂತ್ರ ಸಹಜ ಸ್ಥಿತಿಗೆ ಮರಳುವ ನಿರೀಕ್ಷೆಯಿದೆ.
Vijaya Karnataka Web cabinet meeting on may 9th
ಚುನಾವಣೆ ವಿರಾಮದ ಬಳಿಕ ಮೇ 9ಕ್ಕೆ ಮಹತ್ವದ ಸಂಪುಟ ಸಭೆ


ಲೋಕಸಭೆ ಚುನಾವಣೆ ಬಳಿಕ ನಡೆಯುತ್ತಿರುವ ಮೊದಲ ಸಂಪುಟ ಸಭೆ ಇದಾಗಿದೆ. ಹಾಲಿ ಚಾಲ್ತಿಯಲ್ಲಿರುವ ಯೋಜನೆಗಳಿಗೆ ವೇಗ ನೀಡುವುದು, ಅನುದಾನ ಬಿಡುಗಡೆ ಹಾಗೂ ಇಡೀ ರಾಜ್ಯವನ್ನು ಕಾಡುತ್ತಿರುವ ಬರಗಾಲ ನಿರ್ವಹಣೆ ಸಂಬಂಧ ಸಂಪುಟದಲ್ಲಿ ಚರ್ಚೆ ನಿರೀಕ್ಷಿತ. ಈ ಸಾಲಿನ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಕುರಿತಂತೆಯೂ ಸಚಿವ ಸಂಪುಟ ನಿರ್ಣಯ ಕೈಗೊಳ್ಳುವ ನಿರೀಕ್ಷೆಯಿದೆ.

ಲೋಕಸಭೆ ಚುನಾವಣೆ ಫಲಿತಾಂಶ ಏನಾಗಲಿದೆ? ಮೈತ್ರಿಕೂಟದಲ್ಲಿ ಸೃಷ್ಟಿಯಾಗುತ್ತಿರುವ ಗೊಂದಲ ಹಾಗೂ ಚಿಂಚೋಳಿ, ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಗೆಲುವಿನ ಕಾರ್ಯತಂತ್ರ ಕುರಿತಂತೆಯೂ ಸಂಪುಟದಲ್ಲಿ ಅನೌಪಚಾರಿಕ ಚರ್ಚೆ ನಡೆಯುವ ಸಾಧ್ಯತೆಗಳಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ