ಆ್ಯಪ್ನಗರ

ಹಿಂದಿ ಹೇರಿಕೆಗೆ ವಿರೋಧ, ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರ ಸದ್ದು!

ಹಿಂದಿ ಹೇರಿಕೆಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರು ಸದ್ದು ಮಾಡುತ್ತಿದ್ದಾರೆ. ಟ್ವಿಟ್ಟರ್‌ನಲ್ಲಿ ಭಾನುವಾರ ಅಭಿಯಾನವೂ ನಡೆಯಲಿದ್ದು ಈ ಮೂಲಕ ಹಿಂದಿ ದಿವಸ್ ಆಚರಣೆಗೆ ವಿರೋಧ ವ್ಯಕ್ತಪಡಿಸಲಿದ್ದಾರೆ.

Vijaya Karnataka Web 13 Sep 2020, 1:55 pm
ಬೆಂಗಳೂರು: ತ್ರಿಭಾಷಾ ಸೂತ್ರ ಹಾಗೂ ಹಿಂದಿ ಹೇರಿಕೆಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ತೀವ್ರ ಸ್ವರೂಪ ಪಡೆದಿಕೊಳ್ಳುತ್ತಿದೆ. ಕನ್ನಡ ಪರ ಹೋರಾಟಗಾರರು, ಸಾಮಾಜಿಕ ಕಾರ್ಯಕರ್ತರು, ಬರಹಗಾರರು, ಸಾಹಿತಿಗಳು ಹಿಂದಿ ಹೇರಿಕೆಯ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಕನ್ನಡದ ಪರವಾದ ಕೂಗಿಗೆ ಸಿನಿಮಾ ನಟ-ನಟಿಯರೂ ಬೆಂಬಲ ಸೂಚಿಸಿದ್ದಾರೆ.
Vijaya Karnataka Web KANNADA


ಟ್ವಿಟ್ಟರ್‌, ಫೇಸ್‌ ಬುಕ್‌ಗಳಲ್ಲಿ ಹಿಂದಿ ಹೇರಿಕೆ, ತ್ರಿಭಾಷಾ ಸೂತ್ರದ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಬಲವಂತದ ಹಿಂದಿ ಹೇರಿಕೆಯ ಮೂಲಕ ಕನ್ನಡದ ಮೇಲೆ ದಾಳಿ ನಡೆಸಲಾಗುತ್ತಿದೆ ಎಂಬ ಅರ್ಥದಲ್ಲೇ ಚರ್ಚೆಗಳು ನಡೆಯುತ್ತಿವೆ. ಸಿನಿಮಾ ನಟರಾದ ಚೇತನ್‌, ಪ್ರಕಾಶ್ ರೈ ಕೂಡಾ ಕನ್ನಡಿಗರ ಕೂಗಿಗೆ ಸಾಥ್ ನೀಡಿದ್ದಾರೆ.

ಹಲವು ಭಾಷೆ ಗೊತ್ತು, ಹಲವು ಭಾಷೆಗಳಲ್ಲಿ ಕೆಲಸ ಮಾಡಬಲ್ಲೆ, ಆದರೆ ನನ್ನ ಶಕ್ತಿ ಕನ್ನಡ: ಪ್ರಕಾಶ್ ರಾಜ್!

ಕನ್ನಡಿಗ, ಹಿಂದೂ ಹೇರಿಕೆ ನಿಲ್ಲಿಸಿ ಎಂಬ ಹ್ಯಾಶ್ ಟ್ಯಾಗ್‌ಗಳ ಅಡಿಯಲ್ಲಿ ಕನ್ನಡಿಗರು ಟ್ಟಿಟ್ಟರ್‌ನಲ್ಲಿ ಸದ್ದು ಮಾಡುತ್ತಿದ್ದಾರೆ. ಹಿಂದಿ ಗೊತ್ತಿಲ್ಲ ಹೋಗೊ ನಾವು ಕನ್ನಡಿಗರು, ನಾವು ದ್ರಾವಿಡರು ಎಂದು ಟೀ ಶರ್ಟ್ ನ್ನು ನಟರು ಹಾಗೂ ಸಾಮಾಜಿಕ ಹೋರಾಟಗಾರರು ಹಾಕಿಕೊಳ್ಳುವ ಮೂಲಕ ತಮ್ಮ ವಿರೋಧವನ್ನು ವ್ಯಕ್ತಪಡಿಸುತ್ತಿದ್ದಾರೆ.

ಬಹುಭಾಷಾ ನಟ ಪ್ರಕಾಶ್ ರಾಜ್ ಕೂಡಾ ಹಿಂದಿ ಹೇರಿಕೆ ಕುರಿತಾಗಿ ಟ್ವೀಟ್ ಮಾಡಿದ್ದು, ಹಲವು ಭಾಷೆ ಬಲ್ಲೆ, ಹಲವು ಭಾಷೆಗಳಲ್ಲಿ ಕೆಲಸ ಮಾಡಬಲ್ಲೆ,ಆದರೆ ನನ್ನ ಕಲಿಕೆ, ನನ್ನ ಗ್ರಹಿಕೆ ನನ್ನ ಬೇರು ನನ್ನ ಶಕ್ತಿ ನನ್ನ ಹೆಮ್ಮೆ ನನ್ನ ಮಾತೃಭಾಷೆ ಕನ್ನಡ ಎಂದು ಟ್ವೀಟ್ ಮಾಡುವ ಮೂಲಕ ಬೆಂಬಲ ಸೂಚಿಸಿದ್ದಾರೆ. ಪ್ರಕಾಶ್ ರಾಜ್‌ ಟ್ವೀಟ್‌ಗೆ ಸಾಕಷ್ಟು ಜನರು ಬೆಂಬಲಿಸಿದ್ದಾರೆ.


ಟ್ವಿಟ್ಟರ್‌ನಲ್ಲಿ ಕಂಗನಾ ರಣಾವತ್‌ ಕಾಲೆಳೆದ ಬಹುಭಾಷಾ ನಟ ಪ್ರಕಾಶ್ ರೈ!

ಹಿಂದಿ ಹೇರಿಕೆ ವಿರೋಧಿಸಿ ಟ್ವಿಟರ್ ಅಭಿಯಾನ

ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಭಾನುವಾರದಂದು ಟ್ವಿಟ್ಟರ್‌ ಅಭಿಯಾನ ಹಮ್ಮಿಕೊಂಡಿದೆ. ಸಂಜೆ 6 ಗಂಟೆಗೆ ಟ್ವಿಟ್ಟರ್‌ ಅಭಿಯಾನ ನಡೆಯಲಿದ್ದು ಹಿಂದಿ ಹೇರಿಕೆಯನ್ನು ವಿರೋಧಿಸಲಿದ್ದಾರೆ.

ಸೆಪ್ಟೆಂಬರ್‌ 14ರಂದು ಆಚರಣೆ ಮಾಡಲಾಗುತ್ತಿರುವ ಹಿಂದಿ ದಿವಸ್ ರದ್ದತಿಗೆ ಆಗ್ರಹಿಸಿ ಕರಾಳ ದಿನ ಹಾಗೂ ಬೃಹತ್ ಹಕ್ಕೊತ್ತಾಯ ಮೆರವಣಿಗೆಯನ್ನು ಕನ್ನಡ ಪರ ಸಂಘಟನೆಗಳು ಸೋಮವಾರ ಹಮ್ಮಿಕೊಂಡಿವೆ. ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಸೆಪ್ಟೆಂಬರ್ 14 ರಂದು ಬೆಳಿಗ್ಗೆ 11 ಗಂಟೆಗೆ ಮೆರವಣಿಗೆ ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ