ಆ್ಯಪ್ನಗರ

ಹಾಪ್‌ಕಾಮ್ಸ್‌ , ನಂದಿನಿ ಮಳಿಗೆಯಲ್ಲಿ ಸಿರಿಧಾನ್ಯ

ಬೆಂಗಳೂರು ನಗರದ ಹಾಪ್‌ಕಾಮ್ಸ್‌ ಹಾಗೂ ನಂದಿನಿ ಮಾರಾಟ ಕೇಂದ್ರಗಳಲ್ಲಿ ಸಿರಿಧಾನ್ಯಗಳನ್ನು ಮಾರಾಟ ಮಾಡಲು ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕೃಷಿ ಸಚಿವ ಎನ್‌.ಎಚ್‌.ಶಿವಶಂಕರ ರೆಡ್ಡಿ ತಿಳಿಸಿದರು.

Vijaya Karnataka 1 Jul 2018, 7:26 am
ತುಮಕೂರು: ಬೆಂಗಳೂರು ನಗರದ ಹಾಪ್‌ಕಾಮ್ಸ್‌ ಹಾಗೂ ನಂದಿನಿ ಮಾರಾಟ ಕೇಂದ್ರಗಳಲ್ಲಿ ಸಿರಿಧಾನ್ಯಗಳನ್ನು ಮಾರಾಟ ಮಾಡಲು ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕೃಷಿ ಸಚಿವ ಎನ್‌.ಎಚ್‌.ಶಿವಶಂಕರ ರೆಡ್ಡಿ ತಿಳಿಸಿದರು.
Vijaya Karnataka Web Hopcoms


ತಾಲೂಕಿನ ವಿವಿಧ ಕೃಷಿ ಕ್ಷೇತ್ರಗಳಿಗೆ ಭೇಟಿ ನೀಡಿದ್ದ ಅವರ ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈತರ ಹಾಗೂ ಕೃಷಿ ವಲಯದಲ್ಲಿರುವ ಸಮಸ್ಯೆ ಅರಿಯಲು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಲಾಗುತ್ತಿದೆ. ತುಮಕೂರು, ಚಿತ್ರದುರ್ಗ ಸೇರಿದಂತೆ ರಾಜ್ಯದ ಕೆಲವೇ ಜಿಲ್ಲೆಗಳಲ್ಲಿ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತಿದ್ದು, ರೈತರು ಮಾರುಕಟ್ಟೆ ಸಮಸ್ಯೆ ಎದುರಿಸುತ್ತಿದ್ದಾರೆ. ಸಿರಿಧಾನ್ಯಗಳಿಗೆ ಬೆಂಗಳೂರು ಸೇರಿದಂತೆ ಮತ್ತಿತರ ನಗರ ಪ್ರದೇಶದಲ್ಲಿ ಬೇಡಿಕೆ ಇದೆ. ಮಾರುಕಟ್ಟೆ ಕೊರತೆ ನೀಗಿಸಲು ಹಾಪ್‌ಕಾಮ್ಸ್‌ ಹಾಗೂ ನಂದಿನಿ ಮಾರಾಟ ಕೇಂದ್ರಗಳಲ್ಲಿ ಸಿರಿಧಾನ್ಯ ಮಾರಾಟ ಮಾಡಲಾಗುವುದು ಎಂದರು.

ಇದೇ ವೇಳೆ ಸಿದ್ಧಗಂಗಾ ಮಠದ ಹಿರಿಯ ಶ್ರೀ ಡಾ.ಶಿವಕುಮಾರಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ