ಆ್ಯಪ್ನಗರ

ಮತದಾರರಿಗೆ ನಿಕ್ಕರ್-ಕುಕ್ಕರ್ ಹಂಚಲು ಅನುಮತಿ ಕೋರಿ ಅಭ್ಯರ್ಥಿ ಪತ್ರ!

ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರಿಗೆ ಕದ್ದುಮುಚ್ಚಿ ಉಡುಗೊರೆ ನೀಡುವುದು ಸಾಮಾನ್ಯ. ಆದರೆ, ಇಲ್ಲೊಬ್ಬ ಅಭ್ಯರ್ಥಿ ಹಣ ಹಾಗೂ ಉಡುಗೊರೆ ಹಂಚಲು ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

Vijaya Karnataka Web 29 May 2018, 2:00 pm
ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರಿಗೆ ಕದ್ದುಮುಚ್ಚಿ ಉಡುಗೊರೆ ನೀಡುವುದು ಸಾಮಾನ್ಯ. ಆದರೆ, ಇಲ್ಲೊಬ್ಬ ಅಭ್ಯರ್ಥಿ ಹಣ ಹಾಗೂ ಉಡುಗೊರೆ ಹಂಚಲು ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.
Vijaya Karnataka Web ಮತದಾರರಿಗೆ ನಿಕ್ಕರ್-ಕುಕ್ಕರ್ ಹಂಚಲು ಅನುಮತಿ ಕೋರಿ ಅಭ್ಯರ್ಥಿ ಪತ್ರ!


ಹೌದು, ಜಯನಗರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾರೆಡ್ಡಿ ಅವರು ಮತದಾರರಿಗೆ 2888 ರೂಪಾಯಿ ನಗದು, ಸೀರೆ, ನಿಕ್ಕರ್ ಹಾಗೂ ಕುಕ್ಕರ್ ಹಂಚಲು ಅನುಮತಿ ನೀಡುವಂತೆ ಕೋರಿ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಸುದ್ದಿಯಾಗಿದ್ದಾರೆ.

ಮತದಾರರಿಗೆ ಆಮಿಷವೊಡ್ಡಲು ಈ ಎಲ್ಲ ಉಡುಗೊರೆಗಳನ್ನು ಜೂ.2ರಂದು ಬಹಿರಂಗವಾಗಿಯೇ ಹಂಚುತ್ತೇನೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಚುನಾವಣಾ ಹಿನ್ನೆಲೆಯಲ್ಲಿ ಮತದಾರರಿಗೆ ಆಮಿಷವೊಡ್ಡುವ ಮೂಲಕ ವೋಟ್ ಗಿಟ್ಟಿಸಲು ಮುಂದಾಗುವ ರಾಜಕಾರಣಿಗಳ ನಡೆ ವಿರೋಧಿಸಿರುವ ರೆಡ್ಡಿ, ಚುನಾವಣಾ ಆಯೋಗದ ಗಮನ ಸೆಳೆಯಲು ಈ ರೀತಿ ವ್ಯಂಗ್ಯವಾಗಿ ಪತ್ರ ಬರೆದಿದ್ದಾರೆ.

ಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎನ್.ವಿಜಯಕುಮಾರ್ ಅವರ ನಿಧನದಿಂದಾಗಿ ಮೇ 12ರಂದು ನಡೆಯಬೇಕಿದ್ದ ಚುನಾವಣೆ ಜೂನ್ 11ಕ್ಕೆ ಮುಂದೂಡಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ