ಆ್ಯಪ್ನಗರ

ದಿನೇಶ್‌ಗಿಂತ ಸಮರ್ಥರು ಕೆಪಿಸಿಸಿ ಅಧ್ಯಕ್ಷರಾಗಲಿ: ಎ. ಮಂಜು

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ಕಾಂಗ್ರೆಸ್‌ ಅಧ್ಯಕ್ಷರಾಗುವುದಕ್ಕೆ ತಮ್ಮ ವಿರೋಧವಿಲ್ಲ.ಆದರೆ ಅವರಿಗಿಂತ ಸಮರ್ಥರು ಇಂದಿನ ಪರಿಸ್ಥಿತಿಯಲ್ಲಿ ಅಧ್ಯಕ್ಷರಾಗುವ ಅವಶ್ಯಕತೆ ಇದೆ ಎಂದು ಮಾಜಿ ಸಚಿವ ಎ.ಮಂಜು ಹೇಳಿದ್ದಾರೆ.

Vijaya Karnataka 16 Jun 2018, 7:05 am
ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ಕಾಂಗ್ರೆಸ್‌ ಅಧ್ಯಕ್ಷರಾಗುವುದಕ್ಕೆ ತಮ್ಮ ವಿರೋಧವಿಲ್ಲ.ಆದರೆ ಅವರಿಗಿಂತ ಸಮರ್ಥರು ಇಂದಿನ ಪರಿಸ್ಥಿತಿಯಲ್ಲಿ ಅಧ್ಯಕ್ಷರಾಗುವ ಅವಶ್ಯಕತೆ ಇದೆ ಎಂದು ಮಾಜಿ ಸಚಿವ ಎ.ಮಂಜು ಹೇಳಿದ್ದಾರೆ.
Vijaya Karnataka Web a manju


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,'' ಕೆಪಿಸಿಸಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌, ಸಂಸದ ಕೆ.ಎಚ್‌.ಮುನಿಯಪ್ಪ, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್‌ ಅವರಂಥವರನ್ನು ನೇಮಿಸಿದರೆ ಪಕ್ಷ ಬಲಗೊಳ್ಳುತ್ತದೆ,'' ಎಂದು ಸ್ಪಷ್ಟಪಡಿಸಿದರು.

''ಪಕ್ಷ ಸದೃಢವಾಗಬೇಕಾದರೆ ಇಂಥವರಿಗೆ ಅವಕಾಶ ಸಿಗಬೇಕು, ಇದಕ್ಕಾಗಿ ಪಕ್ಷದ ಹೈಕಮಾಂಡ್‌ ಭೇಟಿಯಾಗಿ ಸಮಾಲೋಚಿಸಲಾಗುವುದು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಸಾಕಷ್ಟು ಭಾಗ್ಯಗಳನ್ನು ನೀಡಿದ್ದರು. ಆದರೆ ಅವುಗಳನ್ನು ಜನರಿಗೆ ತಿಳಿಸುವ ಕೆಲಸ ಆಗಲಿಲ್ಲ. ಜನರಿಗೆ ಇನ್ನಾದರೂ ತಿಳಿಸಿದರೆ ಮುಂದಿನ ಚುನಾವಣೆಯಲ್ಲಿ ಒಳ್ಳೆಯದಾಗುತ್ತದೆ,'' ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ