ಆ್ಯಪ್ನಗರ

ಸಿಬಿಎಸ್‌ಇ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಗೆ ಮೋದಿ, ಶಾ ಕಾರಣ

ಬ್ಯಾಂಕಿಂಗ್‌ ಕ್ಷೇತ್ರಕ್ಕೆ ಪಾಶ್ರ್ವವಾಯು ಬಡಿಸಿದ ಹೆಗ್ಗಳಿಕೆ ಮೋದಿ ಸರಕಾರಕ್ಕೆ ಸಲ್ಲಬೇಕು ಎಂದು ಎಐಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಣದೀಪ್‌ ...

Vijaya Karnataka 31 Mar 2018, 5:00 am
ಬೆಂಗಳೂರು : ಬ್ಯಾಂಕಿಂಗ್‌ ಕ್ಷೇತ್ರಕ್ಕೆ ಪಾಶ್ರ್ವವಾಯು ಬಡಿಸಿದ ಹೆಗ್ಗಳಿಕೆ ಮೋದಿ ಸರಕಾರಕ್ಕೆ ಸಲ್ಲಬೇಕು ಎಂದು ಎಐಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಣದೀಪ್‌ ಸುರ್ಜೇವಾಲ ಆಕ್ರೋಶ ವ್ಯಕ್ತಪಡಿಸಿದರು.
Vijaya Karnataka Web surejewala


ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಶುಕ್ರವಾರ ಮಾತನಾಡಿ,''11 ಬ್ಯಾಂಕ್‌ಗಳ ನಾನಾ ಹಗರಣದಿಂದ 61 ಸಾವಿರ ಕೋಟಿ ರೂ. ನಷ್ಟವಾಗಿದೆ. ನೀರವ್‌ ಮೋದಿ ಚೋಟಾ ಮೋದಿ ನಂಬರ್‌- 2 ಆಗಿದ್ದಾನೆ. ಈತನ ವಿರುದ್ಧ ಕ್ರಮ ಕೈಗೊಳ್ಳಲಾಗಿಲ್ಲ,''ಎಂದರು.

ಪ್ರಧಾನಿ ಹೊಣೆ

''ಸಿಬಿಎಸ್‌ಇ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಗೆ ಪ್ರಧಾನಿ ನರೇಂದ್ರ ಮೋದಿ, ಮಾನವ ಸಂಪನ್ಮೂಲ ಸಚಿವ ಪ್ರಕಾಶ್‌ ಜಾವಡೇಕರ್‌ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರೇ ಕಾರಣ,'' ಎಂದು ಆರೋಪಿಸಿದ್ದಾರೆ.

''ಸಿಬಿಎಸ್‌ಇ ಮಂಡಳಿ ಅಧ್ಯಕ್ಷರ ಸ್ಥಾನವನ್ನು 2 ವರ್ಷ ಖಾಲಿ ಬಿಡಲಾಗಿತ್ತು. ಮಂಡಳಿಯಲ್ಲಿ ಅಕ್ರಮಕ್ಕೂ ಅವಕಾಶ ಮಾಡಿಕೊಡಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದದ್ದರಿಂದ ಮೋದಿ ಸರಕಾರವೂ ಸೋರಿಕೆ ಸರಕಾರವಾಗಿದೆ,'' ಎಂದು ತರಾಟೆಗೆ ತೆಗೆದುಕೊಂಡರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ