ಆ್ಯಪ್ನಗರ

ಕೇಂದ್ರೀಯ ನೇಮಕಾತಿಗಳಲ್ಲಿ ಕನ್ನಡಿಗರು ಹಿಂದೆ: ಸಿಎಂ ಬಿ ಎಸ್ ಯಡಿಯೂರಪ್ಪ ಕಳವಳ

ರೈಲ್ವೆ, ಬ್ಯಾಂಕಿಂಗ್‌ ಸೇರಿದಂತೆ ಕೇಂದ್ರೀಯ ನೇಮಕಾತಿಗಳಲ್ಲಿ ಕನ್ನಡಿಗರು ಹಿಂದೆ ಬೀಳುತ್ತಿರುವ ಬಗ್ಗೆ ಮುಖ್ಯಮಂತ್ರಿ ಬಿಎಸ್‌...

Vijaya Karnataka 25 Aug 2019, 11:07 am
ಬೆಂಗಳೂರು: ರೈಲ್ವೆ, ಬ್ಯಾಂಕಿಂಗ್‌ ಸೇರಿದಂತೆ ಕೇಂದ್ರೀಯ ನೇಮಕಾತಿಗಳಲ್ಲಿ ಕನ್ನಡಿಗರು ಹಿಂದೆ ಬೀಳುತ್ತಿರುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
Vijaya Karnataka Web 2907-2-2-21


ಸ್ಥಳೀಯ ಭಾಷೆಗಳಲ್ಲಿ ಕೇಂದ್ರೀಯ ಪರೀಕ್ಷೆಗಳು ನಡೆಯದಿರುವುದು ಹಾಗೂ ಪರೀಕ್ಷಾರ್ಥಿಗಳ ಸಿದ್ಧತೆ ಕೊರತೆಯಿಂದಾಗಿ ಕನ್ನಡಿಗರು ಉದ್ಯೋಗ ಅವಕಾಶ ವಂಚಿತರಾಗುತ್ತಿರುವ ಬಗ್ಗೆ ಸಿಎಂ ನೋವು ತೋಡಿಕೊಂಡಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ''ಕೇಂದ್ರೀಯ ನೇಮಕಾತಿಯಲ್ಲಿ ಕನ್ನಡಿಗರು ಹಿಂದುಳಿಯುತ್ತಿರುವುದು ಕಳವಳ ಮೂಡಿಸಿದೆ. ಎಲ್ಲ ಕೇಂದ್ರೀಯ ಪರೀಕ್ಷೆಗಳನ್ನು ಸ್ಥಳೀಯ ಭಾಷೆಗಳಲ್ಲೇ ನಡೆಸುವಂತೆ ಕೇಂದ್ರಕ್ಕೆ ರಾಜ್ಯ ಸರಕಾರವು ಒತ್ತಡ ಹೇರುತ್ತಲೇ ಇದೆ,'' ಎಂದು ಹೇಳಿದ್ದಾರೆ. ''ಪರೀಕ್ಷಾರ್ಥಿಗಳು ಏಕಾಗ್ರತೆಯಿಂದ ಅಧ್ಯಯನ ನಡೆಸಿ, ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಲು ಶ್ರಮಿಸುವ ಮೂಲಕ ಕೇಂದ್ರೀಯ ಉದ್ಯೋಗ ಅವಕಾಶಗಳನ್ನು ಬಳಸಿಕೊಳ್ಳಬೇಕು,'' ಎಂದು ಸಿಎಂ ಕನ್ನಡಿಗರಲ್ಲಿ ಮನವಿ ಮಾಡಿದ್ದಾರೆ.

ನೈರುತ್ಯ ರೈಲ್ವೆಯಲ್ಲಿ 'ಡಿ' ವೃಂದದ 2,200 ಹುದ್ದೆಗಳಿಗೆ ಇತ್ತೀಚಿನ ನೇಮಕಾತಿಯಲ್ಲಿ ಕನ್ನಡಿಗ ಅಭ್ಯರ್ಥಿಗಳು ಆಯ್ಕೆಯಾಗಿರುವುದು ಶೇ.1ನ್ನೂ ಮೀರಿಲ್ಲ. ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆ ಜಾರಿಗೆ ಬಂದು ಅಖಿಲ ಭಾರತ ಮಟ್ಟದಲ್ಲಿ ಆನ್‌ಲೈನ್‌ನಲ್ಲಿ ಪರೀಕ್ಷೆ ನಡೆಯುವುದು ಹಾಗೂ ಹಿಂದಿ ವಲಯದಲ್ಲಿ ಪ್ರಶ್ನೆಪತ್ರಿಕೆ ಸಿದ್ದವಾಗುತ್ತಿರುವುದು ಇದಕ್ಕೆ ಕಾರಣ ಎನ್ನಲಾಗಿದೆ. ನೇಮಕಾತಿಯಲ್ಲಿ ಕನ್ನಡಿಗರು ಹಿಂದೆ ಬಿದ್ದು, ಬಹುಪಾಲು ಅವಕಾಶಗಳು ಉತ್ತರ ಭಾರತೀಯರ ಪಾಲಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ವೈ ಅವರ ಪ್ರತಿಕ್ರಿಯೆ ಮಹತ್ವ ಪಡೆದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ