ಆ್ಯಪ್ನಗರ

ಮುಂದುವರಿದ ಮಳೆ: ಕಾವೇರಿ ನದಿಪಾತ್ರದಲ್ಲಿ ಪ್ರವಾಹ ಎಚ್ಚರಿಕೆ

ಕರ್ನಾಟಕ ಮತ್ತು ಕೇರಳದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಬೆನ್ನಲ್ಲೇ ಕಬಿನಿ ಮತ್ತು ಕೆಆರ್‌ಎಸ್‌ ಜಲಾಶಯದಲ್ಲಿ ನೀರಿನ ಒಳಹರಿವು ಅಧಿಕವಾಗಿದ್ದು, ಹೆಚ್ಚುವರಿ ನೀರನ್ನು ಹೊರಗೆ ಹರಿಯಬಿಡುವ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದ ಪ್ರದೇಶಗಳಲ್ಲಿ ಸೂಕ್ತ ಮುನ್ನಚ್ಚರಿಕೆ ವಹಿಸುವಂತೆ ಕೇಂದ್ರ ಸರಕಾರ ಸೂಚನೆ ನೀಡಿದೆ.

Vijaya Karnataka Web 9 Aug 2018, 8:50 pm
ಬೆಂಗಳೂರು: ಕರ್ನಾಟಕ ಮತ್ತು ಕೇರಳದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಬೆನ್ನಲ್ಲೇ ಕಬಿನಿ ಮತ್ತು ಕೆಆರ್‌ಎಸ್‌ ಜಲಾಶಯದಲ್ಲಿ ನೀರಿನ ಒಳಹರಿವು ಅಧಿಕವಾಗಿದ್ದು, ಹೆಚ್ಚುವರಿ ನೀರನ್ನು ಹೊರಗೆ ಹರಿಯಬಿಡುವ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದ ಪ್ರದೇಶಗಳಲ್ಲಿ ಸೂಕ್ತ ಮುನ್ನಚ್ಚರಿಕೆ ವಹಿಸುವಂತೆ ಕೇಂದ್ರ ಸರಕಾರ ಸೂಚನೆ ನೀಡಿದೆ.
Vijaya Karnataka Web Kerala Rain3



ಎರಡೂ ಜಲಾಶಯಗಳಿಂದ ಸಮಾರು 1 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರನ್ನು ಹೊರಗೆ ಹರಿಯಬಿಡುವ ಸಾಧ್ಯತೆಯಿದ್ದು, ಎರಡು ದಿನದಲ್ಲಿ ಅದು ಮೆಟ್ಟೂರು ಜಲಾಶಯವನ್ನು ತಲುಪುತ್ತದೆ. ಹೀಗಾಗಿ ತಗ್ಗು ಪ್ರದೇಶಗಳಲ್ಲಿ, ಜನವಸತಿ ಇರುವಲ್ಲಿ ನೀರು ನುಗ್ಗುವ ಅಪಾಯವಿರುವುದರಿಂದ ಅಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು.

ಹಾಗು ಈ ಕುರಿತು ಸಂಬಂಧಪಟ್ಟ ಇಲಾಖೆ ಮತ್ತು ಅಧಿಕಾರಿಗಳು ಸನ್ನದ್ಧರಾಗಿರುವಂತೆ ಸೂಚಿಸಿ ಕೇಂದ್ರ ನೀರಾವರಿ ಆಯೋಗ ಮತ್ತು ದಕ್ಷಿಣ ನದಿಗಳ ವಲಯ ಇಲಾಖೆ ತಮಿಳುನಾಡು, ಕೇರಳ ಮತ್ತು ಕರ್ನಾಟಕದ ಸಂಬಂಧಪಟ್ಟ ಇಲಾಖೆಗಳಿಗೆ ಗುರುವಾರ ಸುತ್ತೋಲೆ ಹೊರಡಿಸಿದೆ.


ರಾಜ್ಯದ ಹಲವೆಡೆ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದರೆ, ಕೇರಳದಲ್ಲೂ ಭಾರಿ ಮಳೆ ಸುರಿದಿದ್ದರಿಂದ ಮತ್ತು ಭೂಕುಸಿತ ಉಂಟಾಗಿ 20ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ನದಿ ಪಾತ್ರದ ಜನತೆಗೆ ಎಚ್ಚರಿಕೆ ರವಾನಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ