ಆ್ಯಪ್ನಗರ

ಕುವೈಟ್ ಕನ್ನಡಿಗರಿಗೆ ಸದ್ಯದಲ್ಲೇ ಸಿಹಿ ಸುದ್ದಿ! ಸದಾನಂದ ಗೌಡ ನೀಡಿದ ಭರವಸೆ ಏನು ?

ಕೊರೊನಾ ಲಾಕ್‌ಡೌನ್ ಪರಿಣಾಮ ಕುವೈಟ್‌ನಲ್ಲಿ ಸಂಕಷ್ಟದಲ್ಲಿರುವ ಅನಿವಾಸಿ ಕನ್ನಡಿಗರನ್ನು ತಾಯ್ನಾಡಿಗೆ ಕರೆತರುವ ನಿಟ್ಟಿನಲ್ಲಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಕೇಂದ್ರ ಸಚಿವ ಸದಾನಂದ ಗೌಡ ಭರವಸೆ ನೀಡಿದ್ದಾರೆ.

Vijaya Karnataka Web 17 May 2020, 5:21 pm
ಬೆಂಗಳೂರು: ಕೊರೊನಾ ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ಕುವೈಟ್‌ ಕನ್ನಡಿಗರಿಗೆ ಸದ್ಯದಲ್ಲೇ ಸಿಹಿ ಸುದ್ದಿ ನೀಡುವುದಾಗಿ ಕೇಂದ್ರ ಸಚಿವ ಸದಾನಂದ ಗೌಡ ಭರವಸೆ ನೀಡಿದ್ದಾರೆ. ಭಾನುವಾರ ಕುವೈಟ್ ಕನ್ನಡಿಗರೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು ತಾಯ್ನಾಡಿಗೆ ಬರಲು ಬಯಸುವ ಕನ್ನಡಿಗರಿಗೆ ವಿಮಾನದ ವ್ಯವಸ್ಥೆ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.
Vijaya Karnataka Web dv sadananda gowda


ಕುವೈಟ್‌ನಲ್ಲಿ ಸುಮಾರು 11 ಲಕ್ಷ ಅನಿವಾಸಿ ಭಾರತೀಯರಿದ್ದು ಈ ಪೈಕಿ 50 ಸಾವಿರಕ್ಕೂ ಅಧಿಕ ಕನ್ನಡಿಗರಿದ್ದಾರೆ. ಕೊರೊನಾ ಕಾರಣದಿಂದಾಗಿ ಅವರೆಲ್ಲಾ ಸಂಕಷ್ಟ ಎದುರಿಸುತ್ತಿದ್ದಾರೆ. ಹಲವಾರು ಜನರು ತುರ್ತು ಆರೋಗ್ಯ ಸಮಸ್ಯೆ, ಗರ್ಭಿಣಿ ಸ್ತ್ರೀಯರು ಭೇಟಿ ವೀಸಾ ಮುಗಿದವರು, ವ್ಯಾಪಾರ ಉದ್ಯೋಗ ಕಳೆದುಕೊಂಡವರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಕೊರೊನಾ ವೈರಸ್‌ನಿಂದ ಮುಕ್ತಿ ಕೊಡಿಸುವಂತೆ ನಂಜುಂಡೇಶ್ವರನಿಗೆ ಸೋಮಶೇಖರ್‌ ಪ್ರಾರ್ಥನೆ

ಈ ಸಮಸ್ಯೆಗಳನ್ನು ಕನ್ನಡಿಗರು ವಿಡಿಯೋ ಸಂವಾದಲ್ಲಿ ಡಿವಿಎಸ್‌ ಅವರ ಗಮನಕ್ಕೆ ತಂದರು. ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ವಿನಂತಿ ಮಾಡಿಕೊಂಡರು. ಇವರೆಲ್ಲಾ ಭಾರತಕ್ಕೆ ಮರಳಲು ಇಚ್ಛಿಸಿದ್ದು ವಿಮಾನದ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.

ದುಬೈನಿಂದ ಬಂದವರ ರಾದ್ಧಾಂತ..! ಮಂಗಳೂರು ಏರ್‌ಪೋರ್ಟಲ್ಲಿ ನಡೆದಿದ್ದಾದ್ರೂ ಏನು..?

ಇದಕ್ಕೆ ಸ್ಪಂದಿಸಿದ ಸಚಿವರು ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದ್ದು ಕೂಡಲೇ ವಿಮಾನದ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದ್ದಾರೆ. ಈಗಾಗಲೇ ಕುವೈಟ್‌ನಿಂದ 3 ವಿಮಾನಗಳನ್ನು ಬೇರೆ ರಾಜ್ಯಗಳಿಗೆ ವ್ಯವಸ್ಥೆ ಮಾಡಿ ಜನರನ್ನು ಕರೆತರಲಾಗಿದೆ. ಇದೇ ರೀರತಿಯಲ್ಲಿ ಹಂತಹಂತವಾಗಿ ವಿಮಾನದ ವ್ಯವಸ್ಥೆ ಕೈಗೊಳ್ಳುವುದಾಗಿ ತಿಳಿಸಿದರು. ಕುವೈಟ್‌ನಿಂದ ಬೆಂಗಳೂರು ಹಾಗೂ ಮಂಗಳೂರಿಗೆ ವಿಮಾನ ವ್ಯವಸ್ಥೆಯನ್ನು ಮಾಡುವುದಾಗಿಯೂ ಸದಾನಂದ ಗೌಡ ಭರವಸೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ