ಆ್ಯಪ್ನಗರ

ಪ್ರವಾಹ ಅಧ್ಯಯನಕ್ಕೆ ಕೇಂದ್ರ ತಂಡ: ಸಿಎಂ ಕುಮಾರಸ್ವಾಮಿ

ರಾಜ್ಯದಲ್ಲಿನ ಪ್ರವಾಹ ನಷ್ಟ ಪರಿಶೀಲನೆಗೆ ಶೀಘ್ರದಲ್ಲೇ ರಾಜ್ಯಕ್ಕೆ ಕೇಂದ್ರದ ತಂಡ ಭೇಟಿ ನೀಡಲಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

Vijaya Karnataka Web 31 Aug 2018, 4:00 am
ಬೆಂಗಳೂರು: ರಾಜ್ಯದಲ್ಲಿನ ಪ್ರವಾಹ ನಷ್ಟ ಪರಿಶೀಲನೆಗೆ ಶೀಘ್ರದಲ್ಲೇ ರಾಜ್ಯಕ್ಕೆ ಕೇಂದ್ರದ ತಂಡ ಭೇಟಿ ನೀಡಲಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
Vijaya Karnataka Web central team for flood studies cm kumaraswamy
ಪ್ರವಾಹ ಅಧ್ಯಯನಕ್ಕೆ ಕೇಂದ್ರ ತಂಡ: ಸಿಎಂ ಕುಮಾರಸ್ವಾಮಿ


ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಭೇಟಿ ಬಳಿಕ ದಿಲ್ಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ''ರಾಜ್ಯದಲ್ಲಿ ಪ್ರವಾಹದಿಂದ ಉಂಟಾಗಿರುವ ಅನಾಹುತಗಳ ಬಗ್ಗೆ ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಿ ನೆರವು ನೀಡಲು ಮನವಿ ಸಲ್ಲಿಕೆ ಮಾಡಲಾಗಿದೆ,'' ಎಂದು ಹೇಳಿದರು.

ಆಧುನಿಕರಣಕ್ಕೆ ಮನವಿ

''ಕೇಂದ್ರ ಗೃಹ ಇಲಾಖೆಯಿಂದ ಬರಬೇಕಿದ್ದ ಅನುದಾನಗಳನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ. ಕೊಡಗು ಪರಿಸ್ಥಿತಿ ಮಾಹಿತಿಯನ್ನು ರಾಷ್ಟ್ರಪತಿ ಅವರಿಗೂ ನೀಡಿದ್ದೇನೆ. ಹೀಗಾಗಿ ಕೇಂದ್ರದಿಂದ ಹೆಚ್ಚಿನ ಅನುದಾನದ ನಿರೀಕ್ಷೆಯಲ್ಲಿದ್ದೇವೆ,'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ