ಆ್ಯಪ್ನಗರ

ಚಂಪಾ ಹೇಳಿಕೆಗೂ ಸರಕಾರಕ್ಕೂ ಸಂಬಂಧವಿಲ್ಲ: ಸಿದ್ದರಾಮಯ್ಯ

ಸಾಹಿತ್ಯ ಸಮ್ಮೇಳನದಲ್ಲಿ ಚಂಪಾ ನೀಡಿರುವ ಹೇಳಿಕೆಯ ವಿವಾದದಿಂದ ಕೈ ತೊಳೆದುಕೊಂಡು ಮುಖ್ಯಮಂತ್ರಿ

Vijaya Karnataka Web 25 Nov 2017, 8:47 pm
ವಿಜಯಪುರ: ಕನ್ನಡ ಸಾಹಿತ್ಯ ಪರಿಷತ್ ಸ್ವಾಯತ್ತ ಸಂಸ್ಥೆಯಾಗಿದ್ದು ಸಾಹಿತಿ ಚಂಪಾ ಹೇಳಿಕೆಗೂ ಸರಕಾರಕ್ಕೂ ಯಾವುದೇ ಸಂಬಂಧವಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
Vijaya Karnataka Web champa statement siddaramaiah clarifies
ಚಂಪಾ ಹೇಳಿಕೆಗೂ ಸರಕಾರಕ್ಕೂ ಸಂಬಂಧವಿಲ್ಲ: ಸಿದ್ದರಾಮಯ್ಯ


ಸೋಮವಾರ ಚಡಚಣ ಏತ ನೀರಾವರಿ ಯೋಜನೆಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮೇಳನ ಸರ್ವಾಧ್ಯಕ್ಷ ಚಂದ್ರಶೇಖರ ಪಾಟೀಲರ ಹೇಳಿಕೆ ಅವರ ವೈಯಕ್ತಿಕವಾಗಿದ್ದು, ಸರಕಾರಕ್ಕೂ ಅದಕ್ಕೂ ಸಂಬಂಧವಿಲ್ಲ ಎಂದರು.

ಶೋಭಾ ಕರಂದ್ಲಾಜೆ ಕನ್ನಡ ವಿರೋಧಿ. ಕೇಸರಿ ಮತ್ತು ಕೆಂಪು ಧ್ವಜ ಬೇಕು ಎಂಬ ಅವರ ಹೇಳಿಕೆ ಸರಿಯಲ್ಲ. ಸಂಸದೆ ಶೋಭಾ ಕರಂದ್ಲಾಜೆ ಕನ್ನಡ ನಾಡಿನಲ್ಲಿ ಇರಲು ಲಾಯಕ್ಕಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಉಡುಪಿಯಲ್ಲಿ ನಡೆಯುತ್ತಿರುವ ಧರ್ಮ ಸಂಸತ್ತಿಗೆ ಮತಾಂಧರಿಂದ ಭಯವಿದೆ ಹೊರತು ಉಗ್ರರಿಂದಲ್ಲ ಎಂದು ಪರೋಕ್ಷವಾಗಿ ಸಂಘ ಪರಿವಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದರು.

Champa Statement: Siddaramaiah Clarifies

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ