ಆ್ಯಪ್ನಗರ

ಸಿಇಟಿ: ಸೀಟು ಹಂಚಿಕೆ ವೇಳಾಪಟ್ಟಿಯಲ್ಲಿ ಕೊಂಚ ಮಾರ್ಪಾಡು

ರಾಜ್ಯ ಸರಕಾರದ ನಿರ್ದೇಶನದಂತೆ ಮೊದಲನೇ ಸುತ್ತಿನ ವೈದ್ಯ ಹಾಗೂ ದಂತ ವೈದ್ಯ ಸೀಟುಗಳ ಹಂಚಿಕೆಯ ದಿನಾಂಕಗಳು ಬದಲಾವಣೆ ಮಾಡಿರುವ ಹಿನ್ನೆಲೆಯಲ್ಲಿ ಎರಡನೇ ಸುತ್ತಿನ ಎಂಜಿನಿಯರಿಂಗ್‌, ಟೆಕ್ನಾಲಜಿ, ಆರ್ಕಿಟೆಕ್ಚರ್‌, ಕೃಷಿ ವಿಜ್ಞಾನ, ತೋಟಗಾರಿಕೆ, ಪಶು ಸಂಗೋಪನೆ, ಬಿ-ಫಾರ್ಮ, ಆಯುಷ್‌ ಇತ್ಯಾದಿ ಕೋರ್ಸ್‌ಗಳ ಎರಡನೇ ಮುಂದುವರಿದ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿಯನ್ನು ಮಾರ್ಪಡಿಸಲಾಗಿದೆ.

ವಿಕ ಸುದ್ದಿಲೋಕ 28 Jul 2017, 8:38 am

ಬೆಂಗಳೂರು: ರಾಜ್ಯ ಸರಕಾರದ ನಿರ್ದೇಶನದಂತೆ ಮೊದಲನೇ ಸುತ್ತಿನ ವೈದ್ಯ ಹಾಗೂ ದಂತ ವೈದ್ಯ ಸೀಟುಗಳ ಹಂಚಿಕೆಯ ದಿನಾಂಕಗಳು ಬದಲಾವಣೆ ಮಾಡಿರುವ ಹಿನ್ನೆಲೆಯಲ್ಲಿ ಎರಡನೇ ಸುತ್ತಿನ ಎಂಜಿನಿಯರಿಂಗ್‌, ಟೆಕ್ನಾಲಜಿ, ಆರ್ಕಿಟೆಕ್ಚರ್‌, ಕೃಷಿ ವಿಜ್ಞಾನ, ತೋಟಗಾರಿಕೆ, ಪಶು ಸಂಗೋಪನೆ, ಬಿ-ಫಾರ್ಮ, ಆಯುಷ್‌ ಇತ್ಯಾದಿ ಕೋರ್ಸ್‌ಗಳ ಎರಡನೇ ಮುಂದುವರಿದ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿಯನ್ನು ಮಾರ್ಪಡಿಸಲಾಗಿದೆ.

ಮೊದಲ ಅಥವಾ ಎರಡನೇ ಸುತ್ತಿನಲ್ಲಿ ಪ್ರಾಧಿಕಾರದಿಂದ ಪಡೆದ ಸೀಟನ್ನು ರದ್ದುಪಡಿಸಿಕೊಳ್ಳಲು ಇಚ್ಛಿಸುವ ಅಭ್ಯರ್ಥಿಗಳು ಎರಡನೇ ಮುಂದುವರಿದ ಸುತ್ತಿನ ಆಯ್ಕೆ ದಾಖಲಿಸುವ ಕೊನೆಯ ದಿನಾಂಕದೊಳಗೆ ಅಂದರೆ, ಜು. 29ರಂದು ಸಂಜೆ 5 ಗಂಟೆಯೊಳಗೆ ಪ್ರಕ್ರಿಯೆ ಮುಗಿಸಲು ಸೂಚಿಸಲಾಗಿದೆ.

ಆಯ್ಕೆ/ಇಚ್ಛೆ ದಾಖಲಿಸುವ ಅವಧಿಯನ್ನು ಜು. 29ರಂದು ಸಂಜೆ 5 ಗಂಟೆವರೆಗೆ ವಿಸ್ತರಿಸಲಾಗಿದೆ. ಸೀಟು ಹಂಚಿಕೆ ಫಲಿತಾಂಶವನ್ನು ಜು. 30ರಂದು ಸಂಜೆ 4 ಗಂಟೆ ನಂತರ ಪ್ರಕಟಿಸಲಾಗುತ್ತದೆ. ಶುಲ್ಕ ಪಾವತಿ ಹಾಗೂ ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಲು ಜು. 31ರಿಂದ ಆ. 1ರವರೆಗೆ ಅವಕಾಶವಿದೆ. ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಆ. 1 (ಸಂಜೆ 5.30) ಕೊನೇ ದಿನವಾಗಿದೆ ಎಂದು ಕೆಇಎ ಪ್ರಕಟಣೆ ತಿಳಿಸಿದೆ.

Vijaya Karnataka Web changes in cet seat sharing
ಸಿಇಟಿ: ಸೀಟು ಹಂಚಿಕೆ ವೇಳಾಪಟ್ಟಿಯಲ್ಲಿ ಕೊಂಚ ಮಾರ್ಪಾಡು


ಪೂರಕ ಪರೀಕ್ಷೆಯಲ್ಲಿ ಪಾಸಾದವರ ದಾಖಲೆ ಪರಿಶೀಲನೆ:

ಪಿಯುಸಿ, ಇತರ ಬೋರ್ಡ್‌ನ ಪೂರಕ ಪರೀಕ್ಷೆಯಲ್ಲಿ ಪಾಸಾದ ಸಿಇಟಿಯಲ್ಲಿ ಅರ್ಹ ರಾರ‍ಯಂಕ್‌ ಪಡೆದಿದ್ದ ವಿದ್ಯಾರ್ಥಿಗಳಿಗೆ 2ನೇ ಸುತ್ತಿನಲ್ಲಿ ಸೀಟು ಹಂಚಿಕೆಯ ನಂತರ ಉಳಿಯುವ ಎಂಜಿನಿಯರಿಂಗ್‌ ಸೀಟುಗಳನ್ನು ಹಂಚಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದೆ.

ಜು. 28ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 12.30ರವರೆಗೆ 1,50,001ರಿಂದ 1,55,000 ರಾರ‍ಯಂಕ್‌ ಹಾಗೂ ಮಧ್ಯಾಹ್ನ 1ರಿಂದ 4 ಗಂಟೆವರೆಗೆ 1,55,001ರಿಂದ 1,59,000ರವರೆಗಿನ ರಾರ‍ಯಂಕ್‌ ವಿದ್ಯಾರ್ಥಿಗಳಿಗೆ ರಾಜ್ಯದ 16 ಸಹಾಯಕ ಕೇಂದ್ರಗಳಲ್ಲಿ ದಾಖಲೆ ಪರಿಶೀಲನೆ ನಡೆಯಲಿದೆ.

ಜು. 29ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 12.30ರವರೆಗೆ 1,59,001ರಿಂದ ಕೊನೇ ರಾರ‍ಯಂಕ್‌ವರೆಗಿನ ಅಭ್ಯರ್ಥಿಗಳಿಗೆ ದಾಖಲೆ ಪರಿಶೀಲನೆ ನಡೆಯಲಿದೆ. ಜು. 29ರಂದು ರಾತ್ರಿ 8ರಿಂದ ಆ. 1ರಂದು ಬೆಳಗ್ಗೆ 11 ಗಂಟೆವರೆಗೆ ಆಯ್ಕೆ-ಇಚ್ಛೆ ದಾಖಲಿಸಲು ಅವಕಾಶ ಕಲ್ಪಿಸಲಾಗುತ್ತದೆ. ಆ.š 1ರಂದು ಸಂಜೆ 4 ಗಂಟೆ ನಂತರ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ. ಶುಲ್ಕ ಪಾವತಿ, ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಲು ಆ. 2ರಿಂದ 3ರಂದು ಮಧ್ಯಾಹ್ನ 3 ಗಂಟೆವರೆಗೆ ಅವಕಾಶವಿರುತ್ತದೆ. ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಆ. 4ರಂದು (ಸಂಜೆ 5.30) ಕಡೇ ದಿನವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ