ಆ್ಯಪ್ನಗರ

ಸಿದ್ದರಾಮಯ್ಯ ಬೆನ್ನಿಗೆ ಚೂರಿ ಹಾಕಲ್ಲ, ನೀವು ಯಡಿಯೂರಪ್ಪಗೆ ಏನು ಮಾಡಿದ್ರಿ: ಎಚ್‌ಡಿಕೆಗೆ ಚಲುವರಾಯಸ್ವಾಮಿ ಟಾಂಗ್‌

ಎಚ್‌ಡಿ ಕುಮಾರಸ್ವಾಮಿ ಮತ್ತು ಚಲುವರಾಯಸ್ವಾಮಿ ನಡುವೆ ಮಾತಿನ ಚಕಮಕಿ ಜೋರಾಗಿ ಸಾಗಿದೆ. ಈಗ ಚಲುವರಾಯಸ್ವಾಮಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ತಿರುಗೇಟು ನೀಡಿದ್ದಾರೆ.

Vijaya Karnataka Web 25 Aug 2019, 5:01 pm
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾರಿಗೆ ಆಗಲಿ ಬೆನ್ನಿಗೆ ಚೂರಿ ಹಾಕುವ ಜಾಯಮಾನವಲ್ಲ. ಏನೇ ಇದ್ದರೂ ನೇರವಾಗಿ ಹೇಳುತ್ತಾರೆ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಗೆ ಕಾಂಗ್ರೆಸ್‌ ನಾಯಕ ಚಲುವರಾಯಸ್ವಾಮಿ ಟಾಂಗ್‌ ನೀಡಿದ್ದಾರೆ.
Vijaya Karnataka Web ಚಲುವರಾಯಸ್ವಾಮಿ
ಚಲುವರಾಯಸ್ವಾಮಿ


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ, ಎಚ್‌ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದರು.

ಯಡಿಯೂರಪ್ಪ ಅವರಿಗೆ ಕುಮಾರಸ್ವಾಮಿ ಏನು ಮಾಡಿದ್ರು ಅಂಥ ನಮಗೆ ಗೊತ್ತಿಲ್ಲವೇ ಎಂದು ಪ್ರಶ್ನಿಸಿದರು.

ದೇಶದಲ್ಲಿ ಇತ್ತೀಚೆಗೆ ವಾತಾವರಣ ಸರಿಯಿಲ್ಲ. ನಾನೇನೂ ಮಾತೋಡಿಲ್ಲ ಎಂದಿದ್ದ ಕುಮಾರಸ್ವಾಮಿಗೆ ಎರಡನೇ ದಿನಕ್ಕೆ ವಾತಾವರಣ ಬದಲಾಗಿದೆ. ಯಾಕೋ ಬಿಜೆಪಿ ಉತ್ತಮ ಎನ್ನುವ ಭಾವನೆ ಮೂಡಿದೆ ಎಲ್ಲವೂ ನಾಟಕ ಎಂದು ಚಲುವರಾಯಸ್ವಾಮಿ ತಿಳಿಸಿದರು.

ಉಪ ಚುನಾವಣೆ ಹಿನ್ನೆಲೆಯಲ್ಲಿ ಕುಮಾರಸ್ವಾಮಿ, ದೇವೇಗೌಡ ನಾಟಕ ಆಡುತ್ತಿದ್ದಾರೆ. ತಮ್ಮ ಬೇಳೆ ಬೇಯಿಸಿಕೊಳ್ಳಲು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ತಿಳಿಸಿದರು.

ಜೆಡಿಎಸ್‌ನಲ್ಲಿ ಸಾಕಾಗಿ ಹೋಗಿದೆ ಎಂದು ಮೈಸೂರಿನ ಜಿಡಿ ದೇವೇಗೌಡರು ಹಲವಾರು ವರ್ಷಗಳಿಂದಲೂ ಹೇಳುತ್ತಿದ್ದರು. ಒಕ್ಕಲಿಗ ಸಮಾಜವನ್ನು ನಿಮ್ಮ ಕುಟುಂಬದ ಏಳಿಗೆಗಾಗಿ ಬಳಸಿಕೊಂಡಿದ್ದೀರಿ ಎಂದು ಚಲವರಾಯಸ್ವಾಮಿ ಕುಟುಕಿದರು.

ನೀವು ಯಾವುದೇ ಒಕ್ಕಲಿಗ ಕುಟುಂಬವನ್ನು ಬೆಳೆಸಿಲ್ಲ. ಆದರೂ ನಮ್ಮ ಸಮಾಜದವರು ಯಾರಿಗೂ ಕೊಡದಷ್ಟು ಬೆಂಬಲ ನಿಮಗೆ ನೀಡಿದ್ದಾರೆ. ಈಗ ಜೆಡಿಎಸ್‌ನ ಮೂವರು ಬಿಜೆಪಿ ಸೇರುತ್ತಿದ್ದಾರೆ. ಇದಕ್ಕೆ ಹೊಣೆ ಯಾರು ಎಂದು ಚಲುವರಾಯಸ್ವಾಮಿ ಪ್ರಶ್ನಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ