ಆ್ಯಪ್ನಗರ

ಮುಖ್ಯ ಮಾಹಿತಿ ಆಯುಕ್ತರಾಗಿ ಎನ್‌.ಸಿ. ಶ್ರೀನಿವಾಸ ನೇಮಕ

ರಾಜ್ಯ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರ ಸ್ಥಾನಕ್ಕೆ ಕಾನೂನು ಇಲಾಖೆಯ ನಿವೃತ್ತ ಕಾರ್ಯದರ್ಶಿ ಎನ್‌ಸಿ...

Vijaya Karnataka 24 Mar 2019, 5:00 am
ಬೆಂಗಳೂರು: ರಾಜ್ಯ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರ ಸ್ಥಾನಕ್ಕೆ ಕಾನೂನು ಇಲಾಖೆಯ ನಿವೃತ್ತ ಕಾರ್ಯದರ್ಶಿ ಎನ್‌.ಸಿ.ಶ್ರೀನಿವಾಸ ಅವರ ನೇಮಕಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
Vijaya Karnataka Web BNG-2303-2-2-SRINIVASI MAHITI AYUKTA


ಇದರ ಜತೆಗೆ ಮಾಹಿತಿ ಆಯುಕ್ತರ ಸ್ಥಾನಕ್ಕೆ ಎಸ್‌.ಎಂ.ಸೋಮಶೇಖರ ಹಾಗೂ ಕೆ.ಪಿ.ಮಂಜುನಾಥ ಅವರನ್ನು ನೇಮಿಸಿದ್ದು, ಸರಕಾರ ಅಧಿಕೃತ ಆದೇಶ ಹೊರಡಿಸಿದೆ.

ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಚುನಾವಣೆ ಆಯೋಗದ ಸಹಮತ ಪಡೆದು ನೇಮಕ ಮಾಡಲಾಗಿದೆ. ಇತ್ತೀಚೆಗೆ ಸುಪ್ರೀಂಕೋರ್ಟ್‌ ನೀಡಿದ್ದ ಆದೇಶದಲ್ಲಿ ಮುಖ್ಯ ಮಾಹಿತಿ ಆಯುಕ್ತರ ಸ್ಥಾನ ಹೆಚ್ಚು ದಿನ ಖಾಲಿ ಉಳಿಸಿಕೊಳ್ಳಬಾರದು ಎಂದು ಹೇಳಿದ್ದರಿಂದ ಸರಕಾರ ಕೆಲ ದಿನಗಳ ಹಿಂದೆ ಈ ಮೂವರ ಹೆಸರನ್ನು ಶಿಫಾರಸು ಮಾಡಿತ್ತು.

ಇದೇ ಮೊದಲ ಬಾರಿಗೆ ಮಾಹಿತಿ ಮುಖ್ಯ ಆಯುಕ್ತರ ಸ್ಥಾನಕ್ಕೆ ಜಿಲ್ಲಾ ನಿವೃತ್ತ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿದ ಅನುಭವವಿರುವ ವ್ಯಕ್ತಿಯೊಬ್ಬರನ್ನು ನೇಮಿಸಲಾಗಿದೆ. ಮುಖ್ಯ ಮಾಹಿತಿ ಆಯುಕ್ತರ ನೇಮಕಕ್ಕೆ ಆರ್‌ಟಿಐ ಕಾರ್ಯಕರ್ತರ ರಾಜ್ಯ ಸಮಿತಿಯ ಸಂಚಾಲಕ ಬಿ.ಎಚ್‌.ವೀರೇಶ್‌ ಸ್ವಾಗತಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ