ಆ್ಯಪ್ನಗರ

ಐದು ದಿನಗಳ ದಾವೋಸ್ ಪ್ರವಾಸ ಮುಗಿಸಿ ಬಂದ ಬಸವರಾಜ ಬೊಮ್ಮಾಯಿ

ಐದು ದಿನಗಳ ಕಾಲ ದಾವೋಸ್ ನಲ್ಲಿ ನಡೆದ ಶೃಂಗ ಸಭೆಯಲ್ಲಿ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುವ ಕುರಿತಾಗಿ ಉದ್ಯಮಿಗಳ ಜೊತೆಗೆ ಒಪ್ಪಂದ ಹಾಗೂ ಚರ್ಚೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ನಡೆಸಿದ್ದಾರೆ.

Vijaya Karnataka Web 27 May 2022, 11:20 am
ಬೆಂಗಳೂರು: ಐದು ದಿನಗಳ ದಾವೋಸ್ ಪ್ರವಾಸ ಮುಗಿಸಿ ಸಿಎಂ ಬಸವರಾಜ ಬೊಮ್ಮಾಯಿ ಶುಕ್ರವಾರ ಬೆಂಗಳೂರಿಗೆ ವಾಪಸ್ ಆದರು. ಮೇ 22 ರ ಬೆಳಗ್ಗೆ ದಾವೋಸ್ ಗೆ ತೆರಳಿದ್ದ ಮುಖ್ಯಮಂತ್ರಿ ವಿಶ್ವ ಆರ್ಥಿಕ ಶೃಂಗದಲ್ಲಿ ಭಾಗಿಯಾಗಿ ಹಲವು ಉದ್ಯಮಿಗಳ ಜೊತೆಗೆ ಮಾತುಕತೆ ನಡೆಸಿದ್ದರು.
Vijaya Karnataka Web ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ


ಶುಕ್ರವಾರ ಬೆಳಗ್ಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬೊಮ್ಮಾಯಿ ಅವರನ್ನು ಸಚಿವ ಸುನೀಲ್ ಕುಮಾರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ ರೆಡ್ಡಿ, ಗುಪ್ತಚರ ಇಲಾಖೆ ಎಡಿಜಿಪಿ ದಯಾನಂದ ಸ್ವಾಗತ ಕೋರಿದರು.

ದಾವೋಸ್ ನಲ್ಲಿ ಉದ್ಯಮಿಗಳ ಜೊತೆ ಬಂಡವಾಳ ಹೂಡಿಕೆ ಬಗ್ಗೆ ಚರ್ಚೆ

ಐದು ದಿನಗಳ ಕಾಲ ದಾವೋಸ್ ನಲ್ಲಿ ನಡೆದ ಶೃಂಗ ಸಭೆಯಲ್ಲಿ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುವ ಕುರಿತಾಗಿ ಉದ್ಯಮಿಗಳ ಜೊತೆಗೆ ಒಪ್ಪಂದ ಹಾಗೂ ಚರ್ಚೆಯನ್ನು ಸಿಎಂ ಬೊಮ್ಮಾಯಿ ನಡೆಸಿದ್ದಾರೆ.

ದಾವೋಸ್‌ನಲ್ಲೂ ಚರ್ಚೆಯಾದ ‘ಆಪರೇಷನ್ ಕಮಲ’! ಬಸವರಾಜ ಬೊಮ್ಮಾಯಿ - ಲಕ್ಷ್ಮೀ ಮಿತ್ತಲ್ ಮಾತುಕತೆ ವೈರಲ್!

ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಒಪ್ಪಂದಕ್ಕೆ ಸಹಿ ಹಾಕಿದೆ. 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಮಾಡಿದೆ. ಈ ಕಂಪೆನಿಯು ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು 2 ಹಂತಗಳಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದು, ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.

ಮೊದಲ ಹಂತದಲ್ಲಿ ಈಗಾಗಲೇ ಜಾರಿಯಲ್ಲಿರುವ ಯೋಜನೆಗಳಿಗೆ 11,900 ಕೋಟಿ ರೂ.ಗಳ ಬಂಡವಾಳ ಹೂಡಿ, ಮುಂದಿನ 2 ವರ್ಷಗಳಲ್ಲಿ ಯೋಜನೆಗಳು ಕಾರ್ಯಾರಂಭ ಮಾಡಲಾಗುತ್ತದೆ. ಎರಡನೇ ಹಂತದಲ್ಲಿ ನವೀಕರಿಸಬಹುದಾದ ಇಂಧನ ಹಾಗೂ ಗ್ರೀನ್ ಹೈಡ್ರೋಜನ್ ಘಟಕಗಳನ್ನು ಮುಂದಿನ 5 ವರ್ಷಗಳಲ್ಲಿ ಸ್ಥಾಪಿಸಲು 37,500 ಕೋಟಿ ರೂ.ಗಳ ಬಂಡವಾಳವನ್ನು ಹೂಡಿಕೆ ಮಾಡಲಾಗುತ್ತದೆ. ಈ ಎರಡು ಹಂತದ ಯೋಜನೆಗಳಿಂದ ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.

ಇದರ ಜೊತೆಗೆ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಸೀಮೆನ್ಸ್ ಸಂಸ್ಥೆ, ದಸ್ಸಾಲ್ಸ್ ಸಿಸ್ಟಮ್ಸ್ ,ನೆಸ್ಟ್ಲೆ ಸಂಸ್ಥೆ, ಭಾರ್ತಿ ಎಂಟರ್ ಪ್ರೈಸಸ್ ಬಂಡವಾಳ ಹೂಡಲು ಉತ್ಸುಕತೆ ವ್ಯಕ್ತಪಡಿಸಿದೆ.

ವರ್ಲ್ಡ್ ಎಕನಾಮಿಕ್ ಫೋರಮ್‌ನಲ್ಲಿ ಲುಲು ಗ್ರೂಪ್ ನೊಂದಿಗೆ 2000 ಕೋಟಿ ರೂ. ಹೂಡಿಕೆ ಒಪ್ಪಂದ

ಅಷ್ಟೇ ಅಲ್ಲದೆ, ಆಕ್ಸಿಸ್ ಬ್ಯಾಂಕ್, ನೋಕಿಯಾ ಸೇರಿದಂತೆ ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಕರ್ನಾಟಕ ಪೆವಿಲಿಯನ್ ನಲ್ಲಿ ಹೀರೋ ಮೋಟೋಕಾರ್ಪ್ , ಎ ಬಿ ಇನ್ ಬೇವ್ ಸಂಸ್ಥೆ, ಅರ್ಸೆಲರ್ ಮಿತ್ತಲ್, ಅದಾನಿ ಗ್ರೂಪ್ ,ಜಾನ್ಸನ್ ಕಂಟ್ರೋಲ್ಸ್ ನ ಸಿಇಓ ಜಾರ್ಜ್ ಒಲಿವರ್, ಹನಿವೆಲ್ ಕಂಪೆನಿ, ಐಬಿಎಂ, ಬೈಜೂಸ್ , ಮೀಶೋ ಸಂಸ್ಥೆಯ ಮುಖ್ಯಸ್ಥರೊಂದಿಗೆ ಕರ್ನಾಟಕದಲ್ಲಿ ಹೂಡಿಕೆಗಳ ಅವಕಾಶಗಳ ಬಗ್ಗೆ ಸಿಎಂ ಮಾತುಕತೆ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ