ಆ್ಯಪ್ನಗರ

ಕೊರೊನಾ ಮುನ್ನೆಚ್ಚರಿಕೆಯ ಸರ್ಕಾರದ ಆದೇಶವನ್ನು ಸ್ವತಃ ಉಲ್ಲಂಘಿಸಿದ ಬಿಎಸ್‌ವೈ !

ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಭೆ ಸಮಾರಂಭ ಹಾಗೂ ಅದ್ಧೂರಿ ಮದುವೆಗೆ ನಿರ್ಬಂಧ ಹೇರಿ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಸ್ವತಃ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಈ ಆದೇಶವನ್ನು ಪಾಲನೆ ಮಾಡಿಲ್ಲ.

Vijaya Karnataka Web 15 Mar 2020, 1:59 pm
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹರಡದಂತೆ ಸರ್ಕಾರ ಕೆಲವೊಂದು ಮುನ್ನೆಚ್ಚರಿಕೆಗಳನ್ನು ಕೈಗೊಂಡಿದ್ದು ಯಾವುದೇ ಸಭೆ ಸಮಾರಂಭಗಳನ್ನು, ಅದ್ಧೂರಿ ಮದುವೆಗಳನ್ನು ಆಯೋಜಿಸದಂತೆ ಆದೇಶ ನೀಡಿದೆ. ಆದರೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಸರ್ಕಾರದ ಆದೇಶವನ್ನು ಸ್ವತಃ ಉಲ್ಲಂಘಿಸಿದ್ದಾರೆ.
Vijaya Karnataka Web cm marriage


ಬೆಳಗಾವಿಯಲ್ಲಿ ನಡೆದ ಬಿಜೆಪಿ ಮುಖಂಡ ಹಾಗೂ ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಅವರ ಪುತ್ರಿಯ ಅದ್ದೂರಿ ವಿವಾಹದಲ್ಲಿ ಪಾಲ್ಗೊಂಡಿದ್ದಾರೆ. ಬಿಎಸ್‌ವೈ ಮಾತ್ರವಲ್ಲದೆ ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ, ಸಚಿವರಾದ ಬಸವರಾಜ್ ಬೊಮ್ಮಾಯಿ, ಶ್ರೀಮಂತ ಪಾಟೀಲ, ಶಾಸಕರಾದ ಗಣೇಶ್ ಹುಕ್ಕೇರಿ, ಮಹೇಶ್ ಕುಮಟಳ್ಳಿ ಈ ಮದೆವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ತಿರುಪತಿ ತಿಮ್ಮಪ್ಪನಿಗೂ ತಪ್ಪದ ಕೊರೊನಾ ಕಂಟಕ, ಇತಿಹಾಸದಲ್ಲಿಯೇ ಮೊದಲಿಗೆ ವಿಶೇಷ ಪೂಜೆ ಸ್ಥಗಿತ

ಸಭೆ, ಸಮಾರಂಭ ಹಾಗೂ ಮದುವೆ ಕಾರ್ಯಕ್ರಮಗಳಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಸೇರುತ್ತಾರೆ. ಇಂತಹ ಸಂದರ್ಭದಲ್ಲಿ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವುದರಿಂದ ಆರೋಗ್ಯ ಇಲಾಖೆಯ ಸೂಚನೆಯಂತೆ ಸರ್ಕಾರ ಸಭೆ, ಸಮಾರಂಭಗಳನ್ನು ನಿಷೇಧಿಸಿದೆ. ಹಾಗೂ ಮಾಲ್‌, ಪಬ್‌ ಗಳನ್ನು ಸ್ಥಗಿತಗೊಳಿಸುವಂತೆ ಆದೇಶ ನೀಡಿದೆ. ಶಾಲಾ ಕಾಲೇಜುಗಳಿಗೂ ರಜಾ ಘೋಷಣೆ ಮಾಡಲಾಗಿದೆ.

ಒಂದು ರೀತಿಯ ಬಂದ್ ವಾತಾವರಣ ರಾಜ್ಯದಲ್ಲಿ ಇದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಜಾವಾಬ್ದಾರಿಯುತ ಸ್ಥಾನದಲ್ಲಿರುವವರು ಆದೇಶವನ್ನು ಪಾಲಿಸಿ ಇತರರಿಗೂ ಮಾದರಿಯಾಗಬೇಕಿದೆ.

ಆದರೆ ಮುಖ್ಯಮಂತ್ರಿಯಾದಿಯಾಗಿ ಶಾಸಕರು, ಸಚಿವರು ನೂರಾರು ಸಂಖ್ಯೆಯಲ್ಲಿ ಜನರ ಸೇರುವ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಪ್ರಶ್ನಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ