ಆ್ಯಪ್ನಗರ

ಯುಎಇನಲ್ಲಿ ನೆಲೆಸಿರುವ ಕನ್ನಡಿಗರೊಂದಿಗೆ ಬಿಎಸ್‌ವೈ ವಿಡಿಯೋ ಸಂವಾದ, ಅಗತ್ಯ ನೆರವಿನ ಭರವಸೆ

ಕೊರೊನಾ ಸಂಕಷ್ಟಲ್ಲಿ ಅರಬ್‌ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಜೊತೆಗೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಿದರು. ಸಮಸ್ಯೆಯಲ್ಲಿರುವ ಕನ್ನಡಿಗರಿಗೆ ಸರ್ಕಾರ ಎಲ್ಲಾ ರೀತಿಯಲ್ಲಿ ಸಹಕಾರ ನೀಡುವ ಭರವಸೆಯನ್ನು ನೀಡಿದರು.

Vijaya Karnataka Web 12 May 2020, 7:59 pm
ಬೆಂಗಳೂರು: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ನೆಲೆಸಿರುವ ಕನ್ನಡಿಗರ ಜೊತೆಗೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಿದರು.
Vijaya Karnataka Web bs yeddyurappa video


ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಎಲ್ಲ ಅಗತ್ಯ ನೆರವು ನೀಡುವ ಭರವಸೆಯನ್ನು ಬಿಎಸ್‌ವೈ ನೀಡಿದರು.

ಯುಎಇ ಸೇರಿದಂತೆ ಕೊಲ್ಲಿ ರಾಷ್ಟ್ರಗಳಲ್ಲಿ ದೊಡ್ಡ ಸಂಖ್ಯೆಯ ಕನ್ನಡಿಗರು ನೆಲೆಸಿದ್ದಾರೆ. ಅರಬ್‌ ರಾಷ್ಟ್ರಗಳಲ್ಲೂ ಕೊರೊನಾ ತೀವ್ರ ಸ್ವರೂಪದಲ್ಲಿ ಹರಡುತ್ತಿದೆ. ಕೊರೊನಾ ಲಾಕ್‌ಡೌನ್ ಪರಿಣಾಮ ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಂಡಿದ್ದು ಉದ್ಯೋಗದ ಮೇಲೂ ಭಾರೀ ಪರಿಣಾಮ ಬೀರುತ್ತಿದೆ.

ಎಟಿಎಂಗಳಿಂದ ಕೊರೊನಾ ಭಯ..! ಸ್ಯಾನಿಟೈಸರ್‌ ಇಲ್ಲ, ಇದ್ರೂ ಕಳ್ಳರು ಬಿಡಲ್ಲ..!

ಕೆಲವು ಕಂಪನಿಗಳು ವೇತನ ಪಾವತಿಯನ್ನು ಮಾಡಿಲ್ಲ ಎಂಬ ಮಾಹಿತಿಗಳು ಲಭ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ತಾಯ್ನಾಡಿಗೆ ಬರಲು ದೊಡ್ಡ ಸಂಖ್ಯೆಯ ಜನರು ಮುಂದಾಗಿದ್ದಾರೆ. ಅವರನ್ನಯ ಕರೆತರಲು ಭಾರತ ಸರ್ಕಾರ ವ್ಯವಸ್ಥೆಯನ್ನು ಕಲ್ಪಿಸುತ್ತಿದೆ.


ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಯುಎಇನಲ್ಲಿ ನೆಲೆಸಿರುವ ಕನ್ನಡಿಗರ ಜೊತೆಗೆ ವಿಡಿಯೋ ಸಂವಾದದ ಮೂಲಕ ಚರ್ಚೆ ನಡೆಸಿದರು. ಅವರ ಪರಿಸ್ಥಿತಿಯ ಕುರಿತಾಗಿ ಮಾಹಿತಿ ಪಡೆದುಕೊಂಡಿದರು. ಯು.ಎ.ಇ. ಯಿಂದ ಹಿಂದಿರುಗಿ ಬರುವ ಎಲ್ಲರೂ 14 ದಿನಗಳ ಕಾಲ ಕ್ವಾರೆಂಟೈನ್‍ಗೆ ಒಳಪಡಲು ಸರಕಾರದ ಜೊತೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಬಿಎಸ್‌ವೈ ವಿನಂತಿಸಿಕೊಂಡರು.

ಬೆಂಗಳೂರು ಲಾಕ್‌ಡೌನ್‌ Live: ಇಂದು ನಗರದಲ್ಲಿ ನಾಲ್ವರಿಗೆ ಕೊರೊನಾ; ಸೋಂಕಿತರ ಸಂಖ್ಯೆ 182ಕ್ಕೆ ಏರಿಕೆ

ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಇರುವ ಹೊಟೇಲ್‍ಗಳಲ್ಲಿ ಕ್ವಾರಂಟೈನ್‍ಗೆ ಈಗಾಗಲೇ ವ್ಯವಸ್ಥೆ ಕಲ್ಪಿಸಲಾಗಿದೆ. ಮಂಗಳೂರಿನಲ್ಲಿಯೂ ಆರೋಗ್ಯ ತಪಾಸಣೆ ಹಾಗೂ ಕ್ವಾರಂಟೈನ್ ಮಾಡಲು ಎಲ್ಲ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನೂ ಹೆಚ್ಚಿನ ಸೌಲಭ್ಯ ಇರುವ ಹೊಟೇಲ್‍ಗಳಲ್ಲಿ ಕ್ವಾರಂಟೈನ್ ಆಗುವ ಇಚ್ಛೆ ಇದ್ದವರು ತಾವೇ ಹಣ ಪಾವತಿಸಿ ಇರಬಹುದು. ತೊಂದರೆಗೆ ಸಿಲುಕಿರುವ ಕನ್ನಡಿಗರು ಆತಂಕಕ್ಕೆ ಒಳಗಾಗದೆ, ಧೈರ್ಯದಿಂದ ಪರಿಸ್ಥಿತಿಯನ್ನು ಎದುರಿಸಬೇಕು ಎಂದರು.

ವಿಡಿಯೋ ಸಂವಾದದಲ್ಲಿ ದುಬೈ ಕನ್ನಡಿಗರು ಬಿಎಸ್‌ವೈ ಮುಂದಿಟ್ಟ ಬೇಡಿಕೆಗಳೇನು

ಕೊರೊನಾ ಲಾಕ್‌ಡೌನ್ ನಿಂದಾಗಿ ಅಬರ್‌ ದೇಶದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರು ಸಿಎಂ ಬಿಎಸ್‌ವೈ ಮುಂದೆ ಕೆಲವೊಂದು ಬೇಡಿಕೆಗಳನ್ನು ಇಟ್ಟಿದ್ದಾರೆ. ದುಬೈ ನಿಂದ ಬರುವವರಿಗೆ ಕೂಡಲೇ ಪ್ಲೈಟ್ ವ್ಯವಸ್ಥೆ ಮಾಡಬೇಕು. ಅದರಲ್ಲೂ ‌ಮಂಗಳೂರಿಗೆ ಹೆಚ್ಚಿನ ವಿಮಾನದ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.


ಈಗಾಗಲೇ ಯು.ಎ.ಇ‌ ನಲ್ಲಿ ಸಾಕಷ್ಟು ಜನ ನಿರುದ್ಯೋಗಿಗಳಾಗಿದ್ದಾರೆ ರಾಜ್ಯಕ್ಕೆ ಬರಲು ಸಾಧ್ಯವಾಗದೇ ಇದ್ದವರಿಗೆ ಆರ್ಥಿಕ ವಾಗಿ ನೆರವಾಗಬೇಕು. ತುಂಬ ಕೆಳವರ್ಗದ ಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಉಚಿತ ಕ್ವಾರಂಟೈನ್ ವ್ಯವಸ್ಥೆ ಮಾಡಬೇಕು ಎಂದು ವಿನಂತಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ