ಆ್ಯಪ್ನಗರ

ಆಪ್ತರಿಗೆ ನಿಗಮ ಮಂಡಳಿ, ಹೈಕಮಾಂಡ್‌ಗೆ ಸಡ್ಡು ಹೊಡೆದ್ರಾ ಬಿಎಸ್‌ವೈ?

20 ಕ್ಕೂ ಅಧಿಕ ನಿಗಮ ಮಂಡಳಿಗಳಿಗೆ ನಿರ್ದೇಶಕರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ. ಆದರೆ ಈ ಪೈಕಿ ಬಹುತೇಕ ಬಿಎಸ್‌ ಯಡಿಯೂರಪ್ಪ ಆಪ್ತರಿಗೆ ಮಣೆ ಹಾಕಲಾಗಿದೆ ಎಂಬ ಚರ್ಚೆ ನಡೆಯುತ್ತಿದೆ.

Vijaya Karnataka Web 25 Nov 2020, 11:03 am
ಬೆಂಗಳೂರು: ಸಂಪುಟ ವಿಸ್ತರಣೆ ವಿಳಂಬ ಹಾಗೂ ಹೈಕಮಾಂಡ್‌ ನಡೆಯಿಂದ ಬೇಸೆತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪ ಇದೀಗ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ತಮ್ಮ ಆಪ್ತರಿಗೆ ನೀಡುವ ಮೂಲಕ ಸಡ್ಡು ಹೊಡೆದಿದ್ದಾರೆ. ಬುಧವಾರ 20 ಕ್ಕೂ ಹೆಚ್ಚು ನಿಗಮ ಮಂಡಳಿಯ ಅಧ್ಯಕ್ಷರನ್ನು ನೇಮಕ ಮಾಡಿದ ಬಿಎಸ್‌ವೈ ಬಹುತೇಕ ಆಪ್ತರನ್ನೇ ಅಧ್ಯಕ್ಷರನ್ನಾಗಿ ಮಾಡಿದ್ದಾರೆ.
Vijaya Karnataka Web BS Yediyurappa


ಬಿಎಸ್‌ವೈ ಬೀಗರಾದ ಎಸ್‌.ಐ ಚಿಕ್ಕನಗೌಡರಿಗೆ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಅದೇ ರೀತಿ ಆಪ್ತರಾದ ಎಂ. ರುದ್ರೇಶ್ ಅವರನ್ನು ಕೆಆರ್‌ಐಡಿಎಲ್‌ಗೆ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯಾಗಿರುವ ಶಾಸಕ ಎಸ್‌ಆರ್‌ ವಿಶ್ವನಾಥ್‌ ಅವರನ್ನು ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ರಮೇಶ್ ಜಾರಕಿಹೊಳಿ ಒತ್ತಡ ತಂತ್ರ, ಬಿಜೆಪಿಗೆ ತಲೆನೋವಾದ ಪರ್ಯಾಯ ಶಕ್ತಿ ಕೇಂದ್ರ!

ಅಷ್ಟೇ ಅಲ್ಲ ವಿಜಯೇಂದ್ರ ಆಪ್ತರಾದ ತಮ್ಮೇಶ ಗೌಡ ಅವರನ್ನು ಕರ್ನಾಟಕ ವಿದ್ಯುತ್ ಕಾರ್ಖಾನೆ ಅಭಿವೃದ್ದಿ ನಿಗಮಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಹೀಗೆ 20 ನಿಗಮಗಳ ಪೈಕಿ ಬಹುತೇಕ ಬಿಎಸ್‌ವೈ ಆಪ್ತರಿಗೆ ಮಣೆ ಹಾಕಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.

ರಾಜ್ಯ ಬಿಜೆಪಿಯಲ್ಲಿ ಮೂಲ ಹಾಗೂ ವಲಸಿಗರ ನಡುವಿನ ಶೀತಲ ಸಮರ ತೀವ್ರಗೊಳ್ಳುತ್ತಿದೆ. ವಲಸಿಗರಿಗೆ ಬಿಎಸ್‌ವೈ ಹೆಚ್ಚಿನ ಮಣೆ ಹಾಕುತ್ತಾರೆ ಎಂಬುವುದು ಮೂಲ ನಿವಾಸಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಈ ನಡುವೆ ಸಂಪುಟ ವಿಸ್ತರಣೆ ಹಾಗೂ ಬಿಎಸ್‌ವೈಯನ್ನು ನಡೆಸಿಕೊಳ್ಳುತ್ತಿರುವ ಹೈಕಮಾಂಡ್ ನಡೆ ಬಿಎಸ್‌ವೈ ಆಪ್ತರನ್ನು ಕೆರಳಿಸಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ಆಪ್ತರಿಗೆ ನೀಡುವ ಮೂಲಕ ಬಿಎಸ್‌ವೈ ಸಡ್ಡು ಹೊಡೆದಿದ್ದಾರೆ ಎಂಬ ವಿಶ್ಲೇಷಣೆ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ