ಆ್ಯಪ್ನಗರ

ಸಂಪುಟ ವಿಸ್ತರಣೆ: ಹೈಕಮಾಂಡ್‌ನಿಂದ ಲಿಸ್ಟ್ ಬಂದ ಬಳಿಕ ಮುಂದಿನ ತೀರ್ಮಾನ ಎಂದ ಬಿಎಸ್‌ವೈ

ಸಂಪುಟ ವಿಸ್ತರಣೆ ಕುರಿತಾಗಿ ಹೈಕಮಾಂಡ್‌ನಿಂದ ಲಿಸ್ಟ್ ಬಂದ ಬಳಿಕ ಮುಂದಿನ ತೀರ್ಮಾನ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು ಈ ಕುರಿತಾಗಿ ಏನೆಂದರೆ ಎಂಬ ವಿವರ ಇಲ್ಲಿದೆ.

Vijaya Karnataka Web 19 Nov 2020, 10:06 am
ಬೆಂಗಳೂರು: ಇನ್ನೇನು ಮೂರ್ನಾಲ್ಕು ದಿನಗಳಲ್ಲಿ ಹೈಕಮಾಂಡ್‌ ಲಿಸ್ಟ್ ಬರಲಿದೆ. ಇದಾದ ಬಳಿಕ ಸಂಪುಟ ವಿಸ್ತರಣೆ ಕುರಿತಾಗಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ಹೇಳಿದ್ದಾರೆ.
Vijaya Karnataka Web jp nadda and bs  ydiyurappa


ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು ಶೀಘ್ರದಲ್ಲೇ ಸಂಪುಟ ವಿಸ್ತರಣೆ ಆಗುವ ಭರವಸೆ ವ್ಯಕ್ತಪಡಿಸಿದರು. ಬುಧವಾರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಿದ್ದೇನೆ. ಮೂರ್ನಾಲ್ಕು ದಿನಗಳಲ್ಲಿ ಪಟ್ಟಿ ಕಳಿಸಿಕೊಡುವುದಾಗಿ ಹೇಳಿದ್ದಾರೆ. ಇದಾದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಸಂಪುಟ ವಿಸ್ತರಣೆ ಗ್ರಹಣ: ಬಿಜೆಪಿ ಹೈಕಮಾಂಡ್‌ ಗೇಮ್ ಪ್ಲ್ಯಾನ್ ಏನು?

ಬುಧವಾರ ಸಂಪುಟ ಸಭೆಯ ಬಳಿಕ ಸಿಎಂ ಬಿಎಸ್‌ ಯಡಿಯೂರಪ್ಪ ದೆಹಲಿ ತೆರಳಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ.

ಐವರು ಆಕಾಂಕ್ಷಿಗಳ ಪಟ್ಟಿಯೊಂದಿಗೆ ಸಿಎಂ ದೆಹಲಿಗೆ ತೆರಳಿದ್ದರು. ತಮ್ಮ ಪಟ್ಟಿಯಲ್ಲಿರುವ ಹೆಸರನ್ನು ಹೈಕಮಾಂಡ್‌ಗೆ ತಿಳಿಸಿದ್ದರು. ಆದರೆ ಇದುವರೆಗೂ ಯಾವುದೇ ಒಪ್ಪಿಗೆ ಸಿಗಲಿಲ್ಲ. ಪರಿಣಾಮ ಆಕಾಂಕ್ಷಿಗಳಲ್ಲೂ ನಿರಾಸೆ ಮೂಡಿದೆ.

ಈ ನಡುವೆ ಸಂಪುಟ ವಿಸ್ತರಣೆ ಮೂರು ನಾಲ್ಕು ದಿನಗಳಲ್ಲಿ ನಡೆಯುತ್ತಾ ಇಲ್ಲವೋ ಎಂಬುವುದು ಕೂಡಾ ಕುತೂಹಲಕ್ಕೆ ಕಾರಣವಾಗಿದೆ. ದೆಹಲಿಗೆ ತೆರಳುವಾಗ ಸಿಎಂ ಬಿಎಸ್‌ವೈ ಸಾಕಷ್ಟು ಹುಮ್ಮಸ್ಸಿನಲ್ಲಿದ್ದು ವಾಪಸ್‌ ಬರುವಾಗ ಸಪ್ಪೆ ಮೋರೆಯಲ್ಲಿದ್ದರು. ಆದರೆ ಹೈಕಮಾಂಡ್ ಏನು ನಿರ್ಧಾರ ಕೈಗೊಳ್ಳಲಿದೆ ಎಂಬುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ