ಆ್ಯಪ್ನಗರ

ಸಂಪುಟ ವಿಸ್ತರಣೆ: ಜನವರಿ 13 ಅಥವಾ 14 ರಂದು ಪ್ರಮಾಣವಚನ ಕಾರ್ಯಕ್ರಮ, ಬಿಎಸ್‌ವೈ

ಜನವರಿ 13 ಅಥವಾ 14 ರಂದು ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಅರುಣ್ ಸಿಂಗ್ ರಾಜ್ಯ ಭೇಟಿ ಆಧಾರವಾಗಿ ದಿನಾಂಕ ನಿಗದಿಯಾಗಲಿದೆ.

Vijaya Karnataka Web 11 Jan 2021, 9:53 am
ಬೆಂಗಳೂರು: ಸಂಪುಟ ವಿಸ್ತರಣೆಗೆ ಹೈಕಮಾಂಡ್‌ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ ಜನವರಿ 14 ಅಥವಾ 15 ರಂದು ಪ್ರಮಾಣ ವಚನ ಸ್ಪೀಕಾರ ಕಾರ್ಯಕ್ರಮ ಹಮ್ಮಿಕೊಳ್ಳುವುದು ಬಹುತೇಕ ನಿಗದಿಯಾಗಿದೆ ಎಂದು ಸಿಎಂ ಬಿ.ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.
Vijaya Karnataka Web BS Yediyurappa


ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಜನವರಿ 13 ಅಥವಾ 14 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಅವರ ಜೊತೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕೂಡಾ ಬರಲಿದ್ದಾರೆ. ಅವರ ರಾಜ್ಯ ಭೇಟಿ ಅಧಿಕೃತಗೊಂಡ ಬೆನ್ನಲ್ಲೇ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಮಯ ನಿಗದಿ ಪಡಿಸಲಾಗುವುದು ಎಂದು ತಿಳಿಸಿದರು.

ಸಂಪುಟ ವಿಸ್ತರಣೆ: ಯಾರಿಗೆ ಸಿಹಿ, ಯಾರ ಪಾಲಿಗೆ ಕಹಿ, ಯಾರಿಗೆ ಕುತ್ತು?

ಸಂಪುಟ ವಿಸ್ತರಣೆಗೆ ಹೈಕಮಾಂಡ್‌ ಅನುಮತಿ ನೀಡಿದ್ದು 7 ಮಂದಿಯನ್ನು ಸಂಪುಟಕ್ಕೆ ಸೇರ್ಪಡೆ ಮಾಡಲು ಅವಕಾಶ ನೀಡಿದೆ. ಆದರೆ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬ ಗೊಂದಲದ ಬಗ್ಗೆ ಅವರು ಸ್ಪಷ್ಟನೆ ನೀಡದೆ ನೋಡೋಣ ಎಂದಷ್ಟೇ ಉತ್ತರಿಸಿದರು.

ಭಾನುವಾರ ದೆಹಲಿಗೆ ತೆರಳಿದ್ದ ಸಿಎಂ ಬಿಎಸ್‌ ಯಡಿಯೂರಪ್ಪ ವರಿಷ್ಠರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಸಂಪುಟ ವಿಸ್ತರಣೆಗೆ ಹೈಕಮಾಂಡ್‌ ಅಸ್ತು ಅಂದಿದೆ. ಹೈಕಮಾಂಡ್‌ ಅಸ್ತು ಬೆನ್ನಲ್ಲೇ ರಾಜ್ಯದಲ್ಲಿ ಚಟುವಟಿಕೆಗಳು ತೀವ್ರಗೊಂಡಿದ್ದು ಸಂಪುಟ ಸೇರಲು ಆಕಾಂಕ್ಷಿಗಳ ಲಾಬಿಯೂ ತೀವ್ರಗೊಳ್ಳುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ