ಆ್ಯಪ್ನಗರ

ಹಗುರವಾಗಿ ಮಾತನಾಡಬೇಡಿ, ಅತೃಪ್ತ ಶಾಸಕರಿಗೆ ಬಿಎಸ್‌ವೈ ವಾರ್ನಿಂಗ್

ಬಹಿರಂಗವಾಗಿ ಯಾರೂ ಹಗುರವಾಗಿ ಮಾತನಾಡಬೇಡಿ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅತೃಪ್ತ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು ಈ ಕುರಿತಾಗಿ ಹೇಳಿದ್ದಿಷ್ಟು.

Vijaya Karnataka Web 14 Jan 2021, 11:16 am
ಬೆಂಗಳೂರು: ಸಂಪುಟ ವಿಸ್ತರಣೆಯ ಬೆನ್ನಲ್ಲೇ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಿರುವ ಬಿಜೆಪಿ ಅತೃಪ್ತ ಶಾಸಕರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಾರ್ನಿಂಗ್ ನೀಡಿದ್ದಾರೆ. ಬಹಿರಂಗವಾಗಿ ಹಗುರವಾಗಿ ಮಾತನಾಡುವ ಮೂಲಕ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟು ಮಾಡಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.
Vijaya Karnataka Web CM BSY (file pic)


ಗುರುವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಸಕರು ಹಗುರವಾಗಿ ಮಾತನಾಡುವುದು ಬೇಡ, ಅತೃಪ್ತಿ ಇದ್ದವರು ವರಿಷ್ಠರ ಬಳಿ ತೆರಳಿ ದೂರು ನೀಡಿ. ಇದಕ್ಕೆ ನನ್ನ ಅಭ್ಯಂತರ ಇಲ್ಲ. ಯಾವುದು ಸರಿ ಯಾವುದು ತಪ್ಪು ಎಂದು ದೆಹಲಿ ನಾಯಕರು ತೀರ್ಮಾನ ಮಾಡುತ್ತಾರೆ ಎಂದರು. ದೆಹಲಿ ನಾಯಕರಿಗೆ ಎಲ್ಲವೂ ಗೊತ್ತಿದೆ ಎಂದ ಬಿಎಸ್‌ವೈ ಮುನಿರತ್ನ ಅವರನ್ನು ಮಂತ್ರಿ ಮಾಡದ ವಿಚಾರ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಸಿ.ಪಿ ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡಿದ್ದಕ್ಕೆ ಅಸಮಾಧಾನ, ಎಂ.ಪಿ ರೇಣುಕಾಚಾರ್ಯ ಗರಂ

ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸೇರಿದಂತೆ ಹಲವು ಶಾಸಕರು ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಯತ್ನಾಳ್ ಸಿಎಂ ಬಿಎಸ್‌ವೈ ವಿರುದ್ಧ ಗಂಭೀರ ಆರೋಪ ಮಾಡಿದ್ದು ಸಿ.ಡಿ ಹಾಗೂ ಹಣ ಕೊಟ್ಟು ಸಚಿವ ಸ್ಥಾನವನ್ನು ಪಡೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇಷ್ಟೇ ಅಲ್ಲದೆ, ಎಂಪಿ ರೇಣುಕಾಚಾರ್ಯ, ಸಿದ್ದು ಸವದಿ, ಅರವಿಂದ್ ಬೆಲ್ಲದ್, ತಿಪ್ಪಾರೆಡ್ಡಿ, ಸತೀಶ್ ರೆಡ್ಡಿ, ನೆಹರೂ ಓಲೆಕಾರ್‌, ಜಿ. ಸೋಮಶೇಖರ್ ರೆಡ್ಡಿ ಸೇರಿದಂತೆ ಹಲವರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ಹೊರಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಅತೃಪ್ತ ಶಾಸಕರಿಗೆ ಬಿಎಸ್‌ವೈ ಎಚ್ಚರಿಕೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ