ಆ್ಯಪ್ನಗರ

ಪ್ರವಾಹ ಸಂಕಷ್ಟ: ಸೂಕ್ತ ಪರಿಹಾರ ಕಲ್ಪಿಸಲು ಕ್ರಮ, ಬಿಎಸ್‌ವೈ ಭರವಸೆ

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಇದ್ದು ಜನರು ತತ್ತರಿಸಿದ್ದಾರೆ. ಪ್ರವಾಹ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂಬ ಭರವಸೆಯನ್ನು ಸಿಎಂ ಬಿಎಸ್‌ ಯಡಿಯೂರಪ್ಪ ನೀಡಿದ್ದಾರೆ. ಆದರೆ ಅದು ಈಡೇರುತ್ತಾ?

Vijaya Karnataka Web 22 Oct 2020, 2:14 pm
ಬೆಂಗಳೂರು: ಪ್ರವಾಹದಿಂದ ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕ ಸಂತ್ರಸ್ತರಿಗೆ ಸೂಕ್ತ ರೀತಿಯಲ್ಲಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
Vijaya Karnataka Web BS Yediyurappa


ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು ಈಗಾಗಲೇ ಕಲಬುರಗಿ ಸೇರಿದಂತೆ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಜೊತೆಗೂಡಿ ವೈಮಾನಿಕ ಸಮೀಕ್ಷೆ ನಡೆಸಿದ್ದೇನೆ. ಮೂರು ಜಿಲ್ಲೆಯ ಅಧಿಕಾರಿಗಳ ಜೊತೆ ಪ್ರವಾಹ ಪರಿಸ್ಥಿತಿ ಹಾಗೂ ಹಾನಿಯ ಕುರಿತಾಗಿ ಸಮಾಲೋಚನೆ ನಡೆಸಿದ್ದೇನೆ ಎಂದು ತಿಳಿಸಿದರು.

ನಿಮ್ಮ ಮಾತುಗಳೇ ಕಾಂಗ್ರೆಸ್ ಸಂಸ್ಕೃತಿಯನ್ನು ಬಿಂಬಿಸುತ್ತಿದೆ! ಸಿದ್ದುಗೆ ಬಿಜೆಪಿ ಗುದ್ದು

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಹೆಚ್ಚು ಪ್ರವಾಹ ಬಂದಿದೆ. ಹಾನಿಯ ಪ್ರಮಾಣವೂ ಅಧಿಕವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ನಾಶವಾಗಿದೆ. ಈ ಎಲ್ಲಾ ಸಂಗತಿಗಳನ್ನು ಕೇಂದ್ರಕ್ಕೆ ತಿಳಿಸಿದ್ದೇನೆ.

ಈ ನಿಟ್ಟಿನಲ್ಲಿ ಪ್ರವಾಹ ಸಂತ್ರಸ್ತರಿಗೆ ಹೆಚ್ಚು ನೆರವು ಕೊಡುವ ಅಗತ್ಯ ಇದೆ. ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಸಿಕೊಡುವುದು ಹಾಗೂ ಇನ್ನಿತರ ಪರಿಹಾರ ಕ್ರಮಗಳ ಕುರಿತಾಗಿ ಸರ್ಕಾರ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಿಕೊಡಲಿದೆ ಎಂಬ ಭರವಸೆ ನೀಡಿದರು.

ಪ್ರವಾಹ ಸಂತ್ರಸ್ತರಿಗೆ ಈಗಾಗಲೇ 10,000 ಕೊಡಲಾಗಿದೆ. ರಾಜ್ಯದಲ್ಲಿ ಹಣಕಾಸಿನ ಯಾವುದೇ ತೊಂದರೆ ಇಲ್ಲ. ಜನರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲಾ ರೀತಿಯ ಸೌಲಭ್ಯ ನೀಡಲಾಗುವುದು ಎಂದು ತಿಳಿಸಿದರು.

ಕಲಬುರಗಿ, ವಿಜಯಪುರ, ಯಾದಗಿರಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾನವಾಗಿದೆ. ಮಳೆ ಹಾಗೂ ಪ್ರವಾಹದಿಂದ ಭಾರೀ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಸಾವಿರಾರು ಜನರು ಮನೆ, ಮಠ ಕಳೆದುಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ