ಆ್ಯಪ್ನಗರ

ಕೊರೊನಾ ಕ್ವಾರಂಟೈನ್:ಕಾಲ ಕಳೆಯಲು ‘ಯಯಾತಿಯ’ ಮೊರೆ ಹೋದ ಬಿಎಸ್‌ವೈ

ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಈ ಸಂದರ್ಭದಲ್ಲಿ ಸಮಯ ಕಳೆಯಲು ವಿ.ಎಸ್ ಖಾಂಡೇಕರ್ ಅವರ ಯಯಾತಿ ಪುಸ್ತಕದ ಮೊರೆ ಹೋಗಿದ್ದಾರೆ. ಈ ಕುರಿತಾಗಿ ಟ್ವಿಟ್ಟರ್‌ನಲ್ಲಿ ಪುಸ್ತಕ ಓದುತ್ತಿರುವ ತಮ್ಮ ಫೋಟೋ ಹಂಚಿಕೊಂಡಿದ್ದಾರೆ.

Vijaya Karnataka Web 12 Jul 2020, 3:44 pm
ಬೆಂಗಳೂರು: ಸಿಎಂ ಬಿ.ಎಸ್‌ ಯಡಿಯೂರಪ್ಪ ಸದ್ಯ ಕೆಲವು ದಿನಗಳ ಕಾಲ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ . ತಮ್ಮ ಗೃಹ ಕಚೇರಿ ಹಾಗೂ ಸರ್ಕಾರಿ ನಿವಾಸದ ಸಿಬ್ಬಂದಿಯಲ್ಲಿ ಕೊರೊನಾ ಪಾಸಿಟಿವ್‌ ಕಂಡು ಬಂದ ಹಿನ್ನೆಲೆಯಲ್ಲಿ ಕಾವೇರಿ ನಿವಾಸದಲ್ಲಿ ಕ್ವಾರಂಟೈನ್‌ನಲ್ಲಿದ್ದಾರೆ. ಈ ಸಂದರ್ಭದಲ್ಲಿ ಕಾಲ ಕಳೆಯಲು ವಿ.ಎಸ್ ಖಾಂಡೇಕರ್ ಅವರ ಯಯಾತಿ ಪುಸ್ತಕದ ಮೊರೆ ಹೋಗಿದ್ದಾರೆ.
Vijaya Karnataka Web bsy book


ಭಾನುವಾರ ಬೆಳಗ್ಗೆ ಕೊರೊನಾ ಸಂಬಂಧಿಸಿದ ಸಭೆಗಳನ್ನು ನಡೆಸಿದ ಬಳಿಕ ಮಧ್ಯಾಹ್ಮದ ಹೊತ್ತಿನಲ್ಲಿ ಮರಾಠಿ ಲೇಖಕ ವಿ.ಎಸ್ ಖಾಂಡೇಕರ್ ಅವರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕಾದಂಬರಿ ಯಯಾತಿ ಕನ್ನಡಾನುವಾದ ಪುಸ್ತಕವನ್ನು ಕೈಗೆತ್ತಿಕೊಂಡಿದ್ದಾರೆ. ವಿ.ಎಂ.ಇನಾಂದಾರ್ ಅವರು ಈ ಪುಸ್ತಕವನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಪುಸ್ತಕ ಓದುತ್ತಿರುವ ಫೋಟೋವನ್ನು ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಕೋವಿಡ್‌ ತಪಾಸಣೆ ಫಲಿತಾಂಶ ವಿಳಂಬ, ಸರ್ಕಾರಕ್ಕೆ ಎಚ್‌ಡಿಕೆ ತರಾಟೆ


“ಬಿಡುವಿನ ವೇಳೆಯಲ್ಲಿ ನನಗೆ ಅತ್ಯಂತ ಪ್ರಿಯವಾದ ಕಾಲಕ್ಷೇಪವೆಂದರೆ ಓದುವುದು. ನೂರಾರು ಸಂಗತಿಗಳ ಬಗ್ಗೆ ತಿಳಿದಷ್ಟೂ ತಿಳಿಯಬಹುದಾದ ವಿಷಯಗಳಿವೆ, ಜ್ಞಾನಾರ್ಜನೆ ಎಂದೂ ಮುಗಿಯದ ಕಾಯಕ. ಇಂದಿನ ಭಾನುವಾರದ ಲಾಕ್ ಡೌನ್ ಮತ್ತು ಸ್ವ-ಕ್ವಾರಂಟೈನ್ ನಲ್ಲಿರುವ ವೇಳೆ ಸಿಕ್ಕ ಸ್ವಲ್ಪ ಬಿಡುವಿನ ಸಮಯವನ್ನು ಖಾಂಡೇಕರ್ ಅವರ ಯಯಾತಿಯ ಜೊತೆಗೆ ಕಳೆಯುತ್ತಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಸಂಡೇ ಲಾಕ್‌ಡೌನ್: ರಾಜ್ಯಾದ್ಯಂತ ಸಂಪೂರ್ಣ ಬಂದ್‌, ರಸ್ತೆಗಿಳಿದರೆ ಲಾಠಿ ಏಟು

ಸಿಎಂ ಗೃಹ ಕಚೇರಿ ಕೃಷ್ಣಾ ಹಾಗೂ ಸರ್ಕಾರಿ ನಿವಾಸ ಕಾವೇರಿಯ ಒಟ್ಟು 10 ಮಂದಿ ಸಿಬ್ಬಂದಿಯಲ್ಲಿ ಕೊರೊನಾ ಪಾಸಿಟಿವ್‌ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಮುಂಜಾಗರೂಕತಾ ಕ್ರಮವಾಗಿ ಸ್ವಯಂ ನಿರ್ಬಂಧಕ್ಕೆ ಒಳಗಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ