ಆ್ಯಪ್ನಗರ

ಕೋವಿಡ್ 19, ಮಳೆ ಅವಾಂತರ: ಜಿಲ್ಲಾಧಿಕಾರಿಗಳೊಂದಿಗೆ ಬಿಎಸ್‌ವೈ ವಿಡಿಯೋ ಸಂವಾದ

ಕೋವಿಡ್‌ 19 ನಿರ್ವಹಣೆ ಹಾಗೂ ಮಳೆಯ ಅವಾಂತರಗಳ ಕುರಿತಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಗುರುವಾರ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದರು. ಈ ಕುರಿತಾದ ವಿವರ ಇಲ್ಲಿದೆ.

Vijaya Karnataka 10 Sep 2020, 12:32 pm
ಬೆಂಗಳೂರು: ಕೋವಿಡ್‌ 19 ಹಾಗೂ ಮಳೆಯ ಅವಾಂತರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಗುರುವಾರ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.
Vijaya Karnataka Web bsy confarene


ಜಿಲ್ಲೆಗಳಲ್ಲಿ ಕೋವಿಡ್‌ ಪರಿಸ್ಥಿತಿ ಹಾಗೂ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

‘ಯೂರಿಯಾ ಕೊರತೆ ಇಲ್ಲ, ಆದರೆ ರೈತರಿಗೆ ತಲುಪಿಸುವಲ್ಲಿ‌ ವಿಫಲವಾಗಿದ್ದೇವೆ’: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಅಲ್ಲದೆ ಕೋವಿಡ್‌ ಪತ್ತೆ ಹಚ್ಚುವ ನಿಟ್ಟಿನಲ್ಲಿ ರ್ಯಾಪಿಡ್ ತಪಾಸಣೆಗಳನ್ನು ಹೆಚ್ಚಿಸುವಂತೆ ಸೂಚನೆಯನ್ನು ನೀಡಿದರು. ಇದೇ ವೇಳೆ ಮಳೆಯ ಅವಾಂತರಗಳ ಕುರಿತಾಗಿಯೂ ಮಾಹಿತಿ ಪಡೆದುಕೊಂಡರು.

ಕೆಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಹಲವು ಕಡೆಗಳಲ್ಲಿ ಸಮಸ್ಯೆ ಉಂಟಾಗಿದೆ. ಈ ಕುರಿತಾಗಿ ಜಿಲ್ಲಾಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಮಾಹಿತಿ ಪಡೆದುಕೊಂಡರು.

ಮಳೆ ಹಾನಿಗೆ ಸೂಕ್ತ ಪರಿಹಾರ ನೀಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ