ಆ್ಯಪ್ನಗರ

ಕಾವೇರಿ ತೊರೆಯುತ್ತಾರಾ ಬಿಎಸ್‌ವೈ! ಸಿಎಂ ಕೊಟ್ಟ ಸ್ಪಷ್ಟನೆ ಏನು?

ಇತ್ತೀಚೆಗಷ್ಟೇ ಕಾವೇರಿ ನಿವಾಸಕ್ಕೆ ವಾಸ್ತವ್ಯ ಬದಲಾಯಿಸಿದ್ದ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಮತ್ತೆ ತಮ್ಮ ಸ್ವಂತ ನಿವಾಸಕ್ಕೆ ತೆರಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಸಿಎಂ ಕಚೇರಿ ಸ್ಪಷ್ಟನೆ ನೀಡಿದೆ.

Vijaya Karnataka Web 9 Sep 2020, 10:57 am
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ಅಧಿಕೃತ ಸರ್ಕಾರಿ ನಿವಾಸ ಕಾವೇರಿ ತೊರೆಯುತ್ತಾರೆ ಎಂಬ ಸುದ್ದು ಹರಿದಾಡುತ್ತಿವೆ. ಕಾವೇರಿಯನ್ನು ತೊರೆದು ತಮ್ಮ ಸ್ವಂತ ನಿವಾಸಕ್ಕೆ ವಾಸ್ತವ್ಯ ಬದಲಾಯಿಸಲಿದ್ದಾರೆ ಎಂಬ ಸುದ್ದಿ ಸದ್ದು ಮಾಡಿತ್ತು. ಆದರೆ ಈ ಬಗ್ಗೆ ಸ್ವತಃ ಸಿಎಂ ಬಿಎಸ್‌ವೈ ಕಚೇರಿ ಅಧಿಕೃತ ಹೇಳಿಕೆಯನ್ನು ನೀಡಿದೆ.
Vijaya Karnataka Web BS Yediyurappa


ಈ ಹಿಂದೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ವಾಸವಾಗಿದ್ದರು. ಸಿಎಂ ಆಗಿದ್ದಾಗ ಕಾವೇರಿ ನಿವಾಸವನ್ನು ಪಡೆದುಕೊಂಡಿದ್ದ ಅವರು ಸಮ್ಮಿಶ್ರ ಸರ್ಕಾರದ ಅವಧಿಯಲ್ಲೂ ತೊರೆಯಲಿಲ್ಲ. ಸಮ್ಮಿಶ್ರ ಸರ್ಕಾರ ಪತನವಾಗಿ ಬಿಎಸ್‌ವೈ ಸರ್ಕಾರ ಅಧಿಕಾರಕ್ಕೆ ಬಂದಾಗಲೂ ಕಾವೇರಿ ತೊರೆಯಲು ಸಿದ್ದರಾಮಯ್ಯ ಸಿದ್ದರಿರಲಿಲ್ಲ.

ಮಂಡನೆಯಾಗಲಿರುವ 31 ಮಸೂದೆಗಳಲ್ಲಿ ಕೆಲವು ವಿವಾದಿತ! ಸದ್ದು, ಗದ್ದಲಕ್ಕೆ ಸಜ್ಜಾಗಿವೆ ವಿಪಕ್ಷ

ಈ ಕುರಿತಾಗಿ ಸ್ವೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಗೂ ಪತ್ರ ಬರೆದಿದ್ದರು. ಆದರೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಾವೇರಿಗೆ ವಾಸ್ತವ್ಯ ಬದಲಾಯಿಸಲು ಮುಂದಾದ ಕಾರಣಕ್ಕಾಗಿ ಈ ನಿವಾಸವನ್ನು ಸಿದ್ದರಾಮಯ್ಯ ಅನಿವಾರ್ಯವಾಗಿ ತೊರೆಯಬೇಕಾಯಿತು.

ಗೃಹ ಕಚೇರಿ ಕೃಷ್ಣಾಗೆ ತೆರಳಲು ಅನುಕೂಲವಾಗುವ ಹಿನ್ನೆಲೆಯಲ್ಲಿ ಬಿ.ಎಸ್‌ ಯಡಿಯೂರಪ್ಪ ಕಾವೇರಿಗೆ ಶಿಫ್ಟಾಗಿದ್ದಾರೆ. ಆದರೆ ಇದೀಗ ಮತ್ತೆ ತಮ್ಮ ಸ್ವಂತ ನಿವಾಸಕ್ಕೆ ವಾಸ್ತವ್ಯ ಬದಲಾಯಿಸುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ ಇದನ್ನು ಸಿಎಂ ಕಚೇರಿ ನಿರಾಕರಣೆ ಮಾಡಿದೆ.

ಈ ಸುದ್ದಿ ಸತ್ಯಕ್ಕೆ ದೂರವಾಗಿದ್ದು ಮುಖ್ಯಮಂತ್ರಿಗಳು ಅಧಿಕೃತ ನಿವಾಸ ಕಾವೇರಿ ಯನ್ನು ಬದಲಾಯಿಸಿ ಸ್ವಂತ ಮನೆಗೆ ಹೋಗುವ ಯಾವ ಉದ್ದೇಶವು ಹೊಂದಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ