ಆ್ಯಪ್ನಗರ

ದೋಸ್ತಿ ಸರಕಾರಕ್ಕೆ ಬಹುಮತ ಇಲ್ಲ, ಕುಮಾರಸ್ವಾಮಿ ರಾಜೀನಾಮೆ ನೀಡಲಿ, ಇಲ್ಲದಿದರೆ ಉಗ್ರ ಹೋರಾಟ: ಬಿಎಸ್‌ವೈ

ರಾಜ್ಯ ರಾಜಕೀಯ ಹೈಡ್ರಾಮಾ ಕ್ಲೈಮ್ಯಾಕ್ಸ್‌ ಹಂತ ತಲುಪುವ ನಿರೀಕ್ಷೆ ಇದೆ. ಕಾಂಗ್ರೆಸ್‌-ಜೆಡಿಎಸ್‌ ಶಾಸಕರು ಅಲ್ಲದೇ ಪಕ್ಷೇತರ ಶಾಸಕರಿಬ್ಬರು ಕೂಡ ರಾಜೀನಾಮೆ ನೀಡಿದ್ದರಿಂದ ಸರಕಾರ ಅಲ್ಪಮತಕ್ಕೆ ಕುಸಿದಿದೆ. ಕುಮಾರಸ್ವಾಮಿ ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದೆ.

Vijaya Karnataka Web 8 Jul 2019, 6:38 pm
ಬೆಂಗಳೂರು: ಸಮ್ಮಿಶ್ರ ಸರಕಾರದ 14 ಶಾಸಕರು ರಾಜೀನಾಮೆ ನೀಡಿದ್ದಾರೆ. ಸರಕಾರ ಈಗ ಅಲ್ಪಮತಕ್ಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೂಡಲೇ ರಾಜೀನಾಮೆ ನೀಡಬೇಕು. ವಿಧಾನಸಭೆ ವಿಸರ್ಜಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಆಗ್ರಹಿಸಿದ್ದಾರೆ.
Vijaya Karnataka Web ಯಡಿಯೂರಪ್ಪ
ಯಡಿಯೂರಪ್ಪ


ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಮುಖ್ಯ ಕಚೇರಿಯ ಮುಂಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸುವುದಕ್ಕೂ ಮುನ್ನ ಯಡಿಯೂರಪ್ಪ ಮಾತನಾಡಿದರು.

ಮೈತ್ರಿ ಪಕ್ಷದ 13 ಶಾಸಕರು ಶನಿವಾರ ರಾಜೀನಾಮೆ ನೀಡಿದ್ದಾರೆ. ಸೋಮವಾರ ಮತ್ತೊಬ್ಬ ಶಾಸಕರು ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಸರಕಾರ ಅಲ್ಪಮತಕ್ಕೆ ಕುಸಿದಿದೆ. ತಾಂತ್ರಿಕವಾಗಿ ಸರಕಾರ ಬಹುಮತ ಕಳೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದರು.

ಸರಕಾರ ಬಹುಮತ ಕಳೆದುಕೊಂಡಿದೆ. ಅಧಿಕಾರದಲ್ಲಿ ಮುಂದುವರಿಯಲು ಎಚ್‌ಡಿ ಕುಮಾರಸ್ವಾಮಿ ನೈತಿಕತೆ ಇಲ್ಲ. ಕೂಡಲೇ ರಾಜೀನಾಮೆ ನೀಡಿ ಹೊರ ನಡೆಯಲಿ ಎಂದು ಬಿಎಸ್‌ ಯಡಿಯೂರಪ್ಪ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ