ಆ್ಯಪ್ನಗರ

ಚಾರ್ಮಾಡಿ ಘಾಟ್ ಸಂಚಾರ ಪುನಾರಂಭ: ಲಘು ವಾಹನಗಳಿಗೆ ಮಾತ್ರ ಎಂಟ್ರಿ

ಭಾರೀ ಮಳೆಯಿಂದ ಭೂ ಕುಸಿತವುಂಟಾಗಿ ಬಂದ್ ಆಗಿದ್ದ ಚಾರ್ಮಾಡಿ ಘಾಟ್, ಸಂಚಾರಕ್ಕೆ ಮುಕ್ತವಾಗಿದೆ. ಇದೀಗ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹಗಲಿನ ವೇಳೆ ಮಾತ್ರ ಸಂಚರಿಸಬಹುದಾಗಿದ್ದು, ದುರಸ್ತಿ ಕಾರ್ಯ ಭರದಿಂದ ಸಾಗಿದೆ.

Vijaya Karnataka Web 15 Sep 2019, 10:59 am
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ರಸ್ತೆ ಭಾನುವಾರದಿಂದ ಸಂಚಾರಕ್ಕೆ ಮುಕ್ತವಾಗಿದೆ. ಇದೀಗ ಕೇವಲ ಲಘು ವಾಹನ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ನೀಡಿದ್ದಾರೆ. ಅದೂ ಕೂಡಾ ಬೆಳಗ್ಗೆ 6 ಗಂಟೆಯಿಂದ ಸಂಜೆ 7ರವರೆಗೆ ಮಾತ್ರ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
Vijaya Karnataka Web charmadi ghat


ಕಳೆದ ತಿಂಗಳು ಸುರಿದ ಮಹಾಮಳೆಯಿಂದಾಗಿ ಗುಡ್ಡ ಕುಸಿದು, ಹಲವೆಡೆ ರಸ್ತೆಗಳು ಕೊಚ್ಚಿ ಹೋಗಿದ್ದವು. ಕಳೆದ ಆಗಸ್ಟ್ 9 ರಿಂದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಬಂದ್ ಆಗಿತ್ತು. ಹೀಗಾಗಿ ಚಿಕ್ಕಮಗಳೂರು-ದಕ್ಷಿಣ ಕನ್ನಡ ಸಂಪರ್ಕ ಕಡಿತವಾಗಿತ್ತು.

ಇದೀಗ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಿರೋದ್ರಿಂದ ಪ್ರಯಾಣಿಕರು ಕೊಂಚ ನಿರಾಳರಾಗಿದ್ದಾರೆ. ದುರಸ್ತಿ ಕಾರ್ಯ ಭರದಿಂದ ನಡೆಯುತ್ತಿದೆ.

ಚಾರ್ಮಾಡಿ ಘಾಟ್‌ ಪ್ರಯಾಣ ಭಯಾನಕ ಹಾಗೂ ರೋಚಕ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ