ಆ್ಯಪ್ನಗರ

ಸಂಸದರು, ಶಾಸಕರನ್ನು ಹೊರಗಿಟ್ಟು ಚಿಂಚೋಳಿ ಅಭಿವೃದ್ಧಿಗೆ ಮುಂದಾದ ಸರಕಾರ

ಕಲಬುರ್ಗಿ ಲೋಕಸಭೆ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಸೋಲಿಗೆ ಪ್ರತಿಕಾರ ತೀರಿಸಲು ಮುಂದಾಗಿರುವ ರಾಜ್ಯ ಸರಕಾರ ಸಂಸದರು ಹಾಗೂ ಶಾಸಕರನ್ನು ಹೊರಗಿಟ್ಟು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯ ಆರಂಭಿಸಿದೆ.

Vijaya Karnataka 11 Jun 2019, 5:00 am
ಬೆಂಗಳೂರು : ಕಲಬುರ್ಗಿ ಲೋಕಸಭೆ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಸೋಲಿಗೆ ಪ್ರತಿಕಾರ ತೀರಿಸಲು ಮುಂದಾಗಿರುವ ರಾಜ್ಯ ಸರಕಾರ ಸಂಸದರು ಹಾಗೂ ಶಾಸಕರನ್ನು ಹೊರಗಿಟ್ಟು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯ ಆರಂಭಿಸಿದೆ.
Vijaya Karnataka Web chincholi development with out mp mla
ಸಂಸದರು, ಶಾಸಕರನ್ನು ಹೊರಗಿಟ್ಟು ಚಿಂಚೋಳಿ ಅಭಿವೃದ್ಧಿಗೆ ಮುಂದಾದ ಸರಕಾರ


ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ನೇರ ಉಸ್ತುವಾರಿಯಲ್ಲಿ ಯೋಜನೆ ರೂಪಿಸುವಂತೆ 11 ಅಂಶಗಳ ಆದೇಶ ಹೊರಡಿಸಲಾಗಿದೆ.

ಕಾಂಗ್ರೆಸ್‌ ತ್ಯಜಿಸಿ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭೆಗೆ ಆಯ್ಕೆಯಾದ ಡಾ.ಉಮೇಶ್‌ ಜಾಧವ್‌ ಹಾಗೂ ಅವರ ಪುತ್ರ ಚಿಂಚೋಳಿ ಕ್ಷೇತ್ರದ ಶಾಸಕ ಡಾ.ಅವಿನಾಶ್‌ ಜಾಧವ್‌ ಅವರನ್ನು ಹೊರಗಿಟ್ಟು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರಕಾರ ಮುಂದಾಗಿದೆ. ಈ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುವಾಗ ಸಿಎಂ ಕುಮಾರಸ್ವಾಮಿ ನೀಡಿದ್ದ ಭರವಸೆ ಪ್ರಕಾರ ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟ ಜಾತಿ, ಪಂಗಡದ ಉಪಯೋಜನೆ ಅನ್ವಯ 30 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ ನಡೆಸಲು ನಿರ್ಧರಿಸಿದೆ.

30 ಕೋಟಿ ರೂ. ಪೈಕಿ 10 ಕೋಟಿ ರೂ.ಚಿಂಚೋಳಿ ಪಟ್ಟಣಕ್ಕೆ ಹಾಗೂ 20 ಕೋಟಿ ರೂ.ನ್ನು ಗ್ರಾಮೀಣ ಪ್ರದೇಶದಲ್ಲಿ ಖರ್ಚು ಮಾಡಲಾಗುತ್ತದೆ. ಆದರೆ ಸಮಾಜ ಕಲ್ಯಾಣ ಸಚಿವರ ಸೂಚನೆ ಪ್ರಕಾರವೇ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಆದೇಶದಲ್ಲಿ ಸ್ಪಷ್ಟವಾಗಿ ಸೂಚಿಸಲಾಗಿದ್ದು, ಸ್ಥಳೀಯ ಶಾಸಕರು ಹಾಗೂ ಸಂಸದರ ವಿಚಾರವನ್ನು ಆದೇಶದಲ್ಲಿ ಎಲ್ಲಿಯೂ ಉಲ್ಲೇಖಿಸಿಲ್ಲ. ಈ ಮೂಲಕ ಚುನಾವಣೆಯ ಸೋಲಿಗೆ ತಿರುಗೇಟು ನೀಡುವ ಜತೆಗೆ ಚಿಂಚೋಳಿಯಲ್ಲಿ ಅಭಿವೃದ್ಧಿ ಕಾರ್ಯಕ್ಕೆ ವೇಗ ನೀಡಲು ನಿರ್ಧರಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ