ಬೆಂಗಳೂರು: ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಚಿಂತಾಮಣಿ ಕ್ಷೇತ್ರದ ಶಾಸಕ ಎಂ. ಕೃಷ್ಣಾರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶುಕ್ರವಾರ ಬೆಳಗ್ಗೆ ವಿಧಾನಸಭೆ ಕಲಾಪ ಸಮಾವೇಶಗೊಂಡಾಗ, ಸಭಾಧ್ಯಕ್ಷ ರಮೇಶ್ಕುಮಾರ್ ಉಪಸಭಾಧ್ಯಕ್ಷರ ಚುನಾವಣೆ ವಿಷಯವನ್ನು ಕೈಗೆತ್ತಿಕೊಂಡರು.
ಉಪಸಭಾಧ್ಯಕ್ಷ ಸ್ಥಾನಕ್ಕೆ ಎಂ. ಕೃಷ್ಣಾರೆಡ್ಡಿ ಹೆಸರನ್ನು ಜೆಡಿಎಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಸೂಚಿಸಿದರು, ಅದಕ್ಕೆ ಕೆ.ಗೋಪಾಲಯ್ಯ ಅನುಮೋದಿಸಿದರು. ನಂತರ ಧ್ವನಿ ಮತದ ಮೂಲಕ ಕೃಷ್ಣಾರೆಡ್ಡಿ ಆಯ್ಕೆಯಾಗಿರುವುದನ್ನು ಸಭಾಧ್ಯಕ್ಷರು ಪ್ರಕಟಿಸಿದರು.
ಬಳಿಕ ಸಭಾನಾಯಕರು ಆದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಕೃಷ್ಣಾರೆಡ್ಡಿಯವರನ್ನು ಉಪಾಧ್ಯಕ್ಷರ ಪೀಠಕ್ಕೆ ಕರೆತಂದರು.
ಎಂ. ಕೃಷ್ಣಾರೆಡ್ಡಿ ವಿಧಾನಸಭೆ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದಕ್ಕೆ ಸಭಾಧ್ಯಕ್ಷ ರಮೇಶ್ಕುಮಾರ್, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದರು.
ತಮ್ಮನ್ನು ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ಪಕ್ಷಗಳ ಶಾಸಕರಿಗೂ ಕೃಷ್ಣಾರೆಡ್ಡಿ ಅಭಿನಂದನೆ ಸಲ್ಲಿಸಿದರು.
ಶುಕ್ರವಾರ ಬೆಳಗ್ಗೆ ವಿಧಾನಸಭೆ ಕಲಾಪ ಸಮಾವೇಶಗೊಂಡಾಗ, ಸಭಾಧ್ಯಕ್ಷ ರಮೇಶ್ಕುಮಾರ್ ಉಪಸಭಾಧ್ಯಕ್ಷರ ಚುನಾವಣೆ ವಿಷಯವನ್ನು ಕೈಗೆತ್ತಿಕೊಂಡರು.
ಉಪಸಭಾಧ್ಯಕ್ಷ ಸ್ಥಾನಕ್ಕೆ ಎಂ. ಕೃಷ್ಣಾರೆಡ್ಡಿ ಹೆಸರನ್ನು ಜೆಡಿಎಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಸೂಚಿಸಿದರು, ಅದಕ್ಕೆ ಕೆ.ಗೋಪಾಲಯ್ಯ ಅನುಮೋದಿಸಿದರು. ನಂತರ ಧ್ವನಿ ಮತದ ಮೂಲಕ ಕೃಷ್ಣಾರೆಡ್ಡಿ ಆಯ್ಕೆಯಾಗಿರುವುದನ್ನು ಸಭಾಧ್ಯಕ್ಷರು ಪ್ರಕಟಿಸಿದರು.
ಬಳಿಕ ಸಭಾನಾಯಕರು ಆದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಕೃಷ್ಣಾರೆಡ್ಡಿಯವರನ್ನು ಉಪಾಧ್ಯಕ್ಷರ ಪೀಠಕ್ಕೆ ಕರೆತಂದರು.
ಎಂ. ಕೃಷ್ಣಾರೆಡ್ಡಿ ವಿಧಾನಸಭೆ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದಕ್ಕೆ ಸಭಾಧ್ಯಕ್ಷ ರಮೇಶ್ಕುಮಾರ್, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದರು.
ತಮ್ಮನ್ನು ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ಪಕ್ಷಗಳ ಶಾಸಕರಿಗೂ ಕೃಷ್ಣಾರೆಡ್ಡಿ ಅಭಿನಂದನೆ ಸಲ್ಲಿಸಿದರು.