ಆ್ಯಪ್ನಗರ

ರಾಜ್ಯದಲ್ಲೂ ಎನ್‌ಆರ್‌ಸಿ ಭಯ -ದಾಖಲೆ ಸಂಗ್ರಹಿಸಿಟ್ಟುಕೊಳ್ಳುವಂತೆ ಮುಸ್ಲಿಮರಿಗೆ ವಕ್ಫ್ ಇಲಾಖೆ ಸುತ್ತೋಲೆ

ಎನ್‌ಆರ್‌ಸಿ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ 2019 ಜಾರಿ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ವಕ್ಫ್ ಇಲಾಖೆ ಮುಸ್ಲಿಂ ಸಮುದಾಯದ ಜನರು ದಾಖಲೆಗಳನ್ನು ಇಟ್ಟುಕೊಳ್ಳುವಂತೆ ಹಾಗೂ ದಾಖಲೆಯಲ್ಲಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳುವಂತೆ ಸುತ್ತೋಲೆ ಹೊರಡಿಸಿದೆ.

Vijaya Karnataka Web 13 Dec 2019, 5:17 pm
ಬೆಂಗಳೂರು: ರಾಷ್ಟ್ರೀಯ ಪೌರತ್ವ ನೋಂದಣಿ ( ಎನ್‌ಆರ್‌ಸಿ ) ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ 2019 ಜಾರಿ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದಲ್ಲಿ ಆತಂಕ ಮನೆಮಾಡಿದ್ದು ಈ ನಡುವೆ ದಾಖಲೆಗಳನ್ನು ಸಂಗ್ರಹ ಮಾಡಿಟ್ಟುಕೊಳ್ಳುವಂತೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಸುತ್ತೋಲೆ ಹೊರಡಿಸಿದೆ. 2021 ರಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಜನಗಣತಿ ಆರಂಭವಾಗಲಿರುವುದರಿಂದ ಈಗಲೇ ಅಗತ್ಯ ದಾಖಲೆಗಳನ್ನು ಕ್ರೋಡಿಕರಿಸಿಟ್ಟುಕೊಳ್ಳುವಂತೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
Vijaya Karnataka Web citizenship amendment bill and nrc karnataka wakf board issued circular to muslims
ರಾಜ್ಯದಲ್ಲೂ ಎನ್‌ಆರ್‌ಸಿ ಭಯ -ದಾಖಲೆ ಸಂಗ್ರಹಿಸಿಟ್ಟುಕೊಳ್ಳುವಂತೆ ಮುಸ್ಲಿಮರಿಗೆ ವಕ್ಫ್ ಇಲಾಖೆ ಸುತ್ತೋಲೆ


ರಾಷ್ಟ್ರೀಯ ಮಟ್ಟದಲ್ಲಿ ಎನ್‌ಆರ್‌ಸಿ ಜಾರಿಗೊಳಿಸುವ ಚಿಂತನೆಯನ್ನು ಕೇಂದ್ರ ಸರಕಾರ ನಡೆಸುತ್ತಿದ್ದು ಕೆಲವು ಮುಸ್ಲಿಂ ಕುಟುಂಬದಲ್ಲಿ ಸೂಕ್ತ ದಾಖಲೆಯ ಕೊರತೆ ಇದೆ ಎಂಬುವುದು ಸಂಘ ಸಂಸ್ಥೆಗಳು ನಡೆಸಿರುವ ಸಮೀಕ್ಷೆಯಲ್ಲಿ ತಿಳಿದುಬಂದಿದೆ. ಈ ನಿಟ್ಟಿನಲ್ಲಿ ಅಗತ್ಯವಿರಬೇಕಾದ ದಾಖಲೆಗಳಾದ ಆಧಾರ್ ಕಾರ್ಡ್‌, ಪಾನ್ ಕಾರ್ಡ್, ಪಾಸ್ ಪೋರ್ಟ್ ಹಾಗೂ ಇತರ ದಾಖಲೆಗಳನ್ನು ಇಟ್ಟುಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಈ ವಿಚಾರವಾಗಿ ಮುಸ್ಲಿಂ ಸಮುದಾಯದ ಸಾಮಾಜಿಕ ಸಂಘ ಸಂಸ್ಥೆಗಳು ಮಸೀದಿ, ಮದರಸಾಗಳಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಬೇಕು ಹಾಗೂ ವಕ್ಫ್ ಇಲಾಖೆಗೆ ಸೇರಿದ ಶಿಕ್ಷಣ ಸಂಸ್ಥೆಗಳು ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಅರಿವು ಮೂಡಿಸುವ ಮೂಲಕ ಮೂರು ತಿಂಗಳ ಒಳಗಾಗಿ ದಾಖಲೆ ಪತ್ರಗಳನ್ನು ಸಂಗ್ರಹಿಸಿಟ್ಟುಕೊಳ್ಳುವಂತೆ ಸೂಚಿಸಲಾಗಿದೆ.


ಪೌರತ್ವ ವಿಧೇಯಕ ವಿರುದ್ಧ ಸಿಡಿದೆದ್ದ ಈಶಾನ್ಯ ಭಾರತ; ದೇಶಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

ಅಲ್ಲದೆ ದಾಖಲೆಗಳಲ್ಲಿ ಹೆಸರುಗಳ ಕಾಗುಣಿತ ದೋಷಗಳ ಕುರಿತಾಗಿಯೂ ಎಚ್ಚರಿಕೆ ವಹಿಸಿಕೊಂಡು ಸರಿಪಡಿಸಿಕೊಳ್ಳುವಂತೆ ಸುತ್ತೂಲೆಯಲ್ಲಿ ಉಲ್ಲೇಖಿಸಲಾಗಿದೆ. ಇದಕ್ಕಾಗಿ ಕೆಲವೊಂದು ಮಾದರಿ ಅರ್ಜಿಗಳನ್ನು ಲಗತ್ತಿಸಲಾಗಿದೆ.

ಕರುನಾಡಲ್ಲೂ ಎನ್‌ಆರ್‌ಸಿ ಢವಢವ! 'ರಾಜ್ಯಾದ್ಯಂತ ವಿದೇಶಿಗರ ಹುಡುಕಾಟ': ಗೃಹ ಸಚಿವ ಬೊಮ್ಮಾಯಿ

ಈ ಕುರಿತಾಗಿ ವಿಜಯ ಕರ್ನಾಟಕ ಜೊತೆಗೆ ಮಾತನಾಡಿದ, ಕರ್ನಾಟಕ ವಕ್ಫ್ ಬೋರ್ಡ್ ಆಡಳಿತಾಧಿಕಾರಿ ಎ.ಬಿ ಇಬ್ರಾಹಿಂ, ವಕ್ಫ್ ಇಲಾಖೆ ಮುಸ್ಲಿಂ ಸಮುದಾಯದ ಜನರಿಗೆ ದಾಖಲೆಗಳನ್ನು ಇಟ್ಟುಕೊಳ್ಳಲು ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಸುತ್ತೂಲೆಯನ್ನು ಹೊರಡಿಸಲಾಗಿದೆ. 2021 ರಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಜನಗಣತಿ ಸಮೀಕ್ಷೆಗೂ ದಾಖಲೆಗಳ ಅಗತ್ಯವಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಮತ್ತಿತರ ದಾಖಲೆಗಳನ್ನು ಸಂಗ್ರಹಿಸಲು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ” ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ