ನಿಮ್ಮಿಂದಲೇ ಎಲ್ಲ ಹಾಳಾಗ್ತಿರೋದು: ಮಾಧ್ಯಮಗಳ ಮೇಲೆ ಸಿದ್ದರಾಮಯ್ಯ ಕಿಡಿ
ಮಾಧ್ಯಮಗಳೇ ಒಡಕು ಸೃಷ್ಟಿಸುತ್ತಿವೆ; ಕೆಲವೇ ಶಾಸಕರು ತಮ್ಮ ಆಪ್ತರು ಎಂದು ಬಿಂಬಿಸುತ್ತಿರುವ ಮಾಧ್ಯಮಗಳಿಂದಲೇ ಈ ಬಿಕ್ಕಟ್ಟು ಸೃಷ್ಟಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ.
Vijaya Karnataka Web 11 Jul 2019, 9:49 am
ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟು ಉಲ್ಬಣಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಾಧ್ಯಮಗಳ ಮೇಲೆ ಕಿಡಿ ಕಾರಿದ್ದಾರೆ. ಮಾಧ್ಯಮಗಳು ಕೆಲವೇ ಶಾಸಕರನ್ನು ತಮ್ಮ ಆಪ್ತರು ಎಂದು ಬಿಂಬಿಸುವ ಮೂಲಕ ಪಕ್ಷದಲ್ಲಿ ಒಡಕು ಮೂಡಿಸಲು ಹವಣಿಸುತ್ತಿವೆ ಎಂಬ ಅರ್ಥದಲ್ಲಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಇದರಿಂದ ತಮಗೆ ನೋವಾಗಿದೆ ಎಂದು ಹೇಳಿಕೊಂಡಿದ್ದಾರೆ.
ರಾಜೀನಾಮೆ ನೀಡಿರುವ ಶಾಸಕರು ಮಾತ್ರವಲ್ಲ, ಕಾಂಗ್ರೆಸ್ನ ಎಲ್ಲ 78 ಶಾಸಕರೂ ನನಗೆ ಆಪ್ತರಾಗಿದ್ದಾರೆ. ಅವರು ನಮ್ಮ ಪಕ್ಷದ ಬಹಳಷ್ಟು ನಾಯಕರಿಗೂ ಆಪ್ತರಾಗಿದ್ದಾರೆ. ಮಾಧ್ಯಮಗಳು ಸೆಲೆಕ್ಟಿವ್ ಆಗಿ ಈ ಶಾಸಕರು ನನ್ನ ಆಪ್ತರು ಎಂದು ಹೇಳುತ್ತಿರುವುದು ಸರಿ ಅಲ್ಲ. ಇದರಿಂದ ನನ್ನ ಮನಸ್ಸಿಗೆ ನೋವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.
ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಇನ್ನೂ ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದು ಒಟ್ಟು ಸದಸ್ಯ ಬಲ 100ಕ್ಕೆ ಕುಸಿದಿದೆ. ಕಳೆದ 5 ದಿನಗಳಿಂದ ರಾಜ್ಯದಲ್ಲಿ ತಲೆದೋರಿರುವ ರಾಜಕೀಯ ಬಿಕ್ಕಟ್ಟು ಮತ್ತಷ್ಟು ಉಲ್ಬಣಿಸಿದೆ.
ಒಟ್ಟು 16 ಶಾಸಕರು (ಕಾಂಗ್ರೆಸ್ನ 13 ಮತ್ತು ಜೆಡಿಎಸ್ನ 3) ಈ ವರೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇಬ್ಬರು ಪಕ್ಷೇತರರು ಈಗಾಗಲೇ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸರಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದು, ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ.
ಎಲ್ಲ 16 ಶಾಸಕರ ರಾಜೀನಾಮೆಗಳನ್ನೂ ಸ್ಪೀಕರ್ ಅಂಗೀಕರಿಸಿದರೆ ಸದನದ ಒಟ್ಟು ಬಲ 208ಕ್ಕೆ ಕುಸಿಯುತ್ತದೆ. ಆಗ ಬಹುಮತಕ್ಕೆ ಅಗತ್ಯವಿರುವ ಮ್ಯಾಜಿಕ್ ಸಂಖ್ಯೆ 113ರಿಂದ 105ಕ್ಕೆ ಕುಸಿಯುತ್ತದೆ. ಅಂತಹ ಸನ್ನಿವೇಶದಲ್ಲಿ 105 ಸಂಖ್ಯಾಬಲವಿರುವ ಬಿಜೆಪಿ ಸರಕಾರ ರಚನೆಗೆ ಹಕ್ಕು ಮಂಡಿಸುವುದು ಸುಗಮವಾಗುತ್ತದೆ.
ಇಬ್ಬರು ಕಾಂಗ್ರೆಸ್ ಶಾಸಕರಾದ ಎಂಟಿಬಿ ನಾಗರಾಜ್ ಮತ್ತು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಕೆ. ಸುಧಾಕರ್ ನೀಡಿರುವ ರಾಜೀನಾಮೆ ಸರಕಾರವನ್ನು ಮತ್ತಷ್ಟು ಬಿಕ್ಕಟ್ಟಿಗೆ ತಳ್ಳಿದೆ.
ರಾಜಕಾರಣವೇ ಬೇಸರವಾಗಿದೆ. ರಾಜಕೀಯದಿಂದ ನಿವೃತ್ತಿಯಾಗಬೇಕೆಂದು ಬಯಸಿದ್ದೇನೆ ಎಂದು ಶಾಸಕ ಎಂಟಿಬಿ ನಾಗರಾಜ್ ಟಿವಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ರಾಜೀನಾಮೆ ನೀಡಿರುವ ಶಾಸಕರು ಮಾತ್ರವಲ್ಲ, ಕಾಂಗ್ರೆಸ್ನ ಎಲ್ಲ 78 ಶಾಸಕರೂ ನನಗೆ ಆಪ್ತರಾಗಿದ್ದಾರೆ. ಅವರು ನಮ್ಮ ಪಕ್ಷದ ಬಹಳಷ್ಟು ನಾಯಕರಿಗೂ ಆಪ್ತರಾಗಿದ್ದಾರೆ. ಮಾಧ್ಯಮಗಳು ಸೆಲೆಕ್ಟಿವ್ ಆಗಿ ಈ ಶಾಸಕರು ನನ್ನ ಆಪ್ತರು ಎಂದು ಹೇಳುತ್ತಿರುವುದು ಸರಿ ಅಲ್ಲ. ಇದರಿಂದ ನನ್ನ ಮನಸ್ಸಿಗೆ ನೋವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.
ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಇನ್ನೂ ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದು ಒಟ್ಟು ಸದಸ್ಯ ಬಲ 100ಕ್ಕೆ ಕುಸಿದಿದೆ. ಕಳೆದ 5 ದಿನಗಳಿಂದ ರಾಜ್ಯದಲ್ಲಿ ತಲೆದೋರಿರುವ ರಾಜಕೀಯ ಬಿಕ್ಕಟ್ಟು ಮತ್ತಷ್ಟು ಉಲ್ಬಣಿಸಿದೆ.
ಒಟ್ಟು 16 ಶಾಸಕರು (ಕಾಂಗ್ರೆಸ್ನ 13 ಮತ್ತು ಜೆಡಿಎಸ್ನ 3) ಈ ವರೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇಬ್ಬರು ಪಕ್ಷೇತರರು ಈಗಾಗಲೇ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸರಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದು, ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ.
ಎಲ್ಲ 16 ಶಾಸಕರ ರಾಜೀನಾಮೆಗಳನ್ನೂ ಸ್ಪೀಕರ್ ಅಂಗೀಕರಿಸಿದರೆ ಸದನದ ಒಟ್ಟು ಬಲ 208ಕ್ಕೆ ಕುಸಿಯುತ್ತದೆ. ಆಗ ಬಹುಮತಕ್ಕೆ ಅಗತ್ಯವಿರುವ ಮ್ಯಾಜಿಕ್ ಸಂಖ್ಯೆ 113ರಿಂದ 105ಕ್ಕೆ ಕುಸಿಯುತ್ತದೆ. ಅಂತಹ ಸನ್ನಿವೇಶದಲ್ಲಿ 105 ಸಂಖ್ಯಾಬಲವಿರುವ ಬಿಜೆಪಿ ಸರಕಾರ ರಚನೆಗೆ ಹಕ್ಕು ಮಂಡಿಸುವುದು ಸುಗಮವಾಗುತ್ತದೆ.
ಇಬ್ಬರು ಕಾಂಗ್ರೆಸ್ ಶಾಸಕರಾದ ಎಂಟಿಬಿ ನಾಗರಾಜ್ ಮತ್ತು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಕೆ. ಸುಧಾಕರ್ ನೀಡಿರುವ ರಾಜೀನಾಮೆ ಸರಕಾರವನ್ನು ಮತ್ತಷ್ಟು ಬಿಕ್ಕಟ್ಟಿಗೆ ತಳ್ಳಿದೆ.
ರಾಜಕಾರಣವೇ ಬೇಸರವಾಗಿದೆ. ರಾಜಕೀಯದಿಂದ ನಿವೃತ್ತಿಯಾಗಬೇಕೆಂದು ಬಯಸಿದ್ದೇನೆ ಎಂದು ಶಾಸಕ ಎಂಟಿಬಿ ನಾಗರಾಜ್ ಟಿವಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.