ಆ್ಯಪ್ನಗರ

ಪ್ರತಿಪಕ್ಷಗಳ ಟೀಕೆ ಮೆಟ್ಟಿನಿಂತ ಸಿಎಂ ಬಿ.ಎಸ್‌.ಯಡಿಯೂರಪ್ಪ

ಪ್ರವಾಹ ಪೀಡಿತ ಜಿಲ್ಲೆಗಳಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು

Vijaya Karnataka 9 Aug 2019, 7:35 am
ಬೆಂಗಳೂರು: ಏಕ ವ್ಯಕ್ತಿ ಸರಕಾರ ಎಂಬ ಪ್ರತಿಪಕ್ಷಗಳಿಂದ ಟೀಕೆಗೆ ಒಳಗಾಗಿದ್ದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕಳೆದ 24 ಗಂಟೆಗಳಿಂದ ಪ್ರವಾಹ ಪೀಡಿತರ ಸಮಸ್ಯೆಗಳನ್ನು ಆಲಿಸುವುದರ ಜತೆಗೆ ಪರಿಹಾರ ಕಾರ್ಯಗಳನ್ನು ಖುದ್ದು ವೀಕ್ಷಿಸುವ ಮೂಲಕ ಸಂತ್ರಸ್ತರಲ್ಲಿ ಧೈರ್ಯ ಹಾಗೂ ವಿಶ್ವಾಸ ತುಂಬುವಲ್ಲಿ ಯಶಸ್ವಿಯಾಗಿದ್ದಾರೆ.
Vijaya Karnataka Web bsy


ಪಕ್ಷದ ವರಿಷ್ಠರ ಸೂಚನೆ ಮೇರೆಗೆ ದಿಲ್ಲಿಯಿಂದ ಬೆಂಗಳೂರಿಗೆ ವಾಪಸಾಗಿ ಬುಧವಾರ ಸಂಜೆಯೇ ಬೆಳಗಾವಿ ತಲುಪುತ್ತಿದ್ದಂತೆ ಜಿಲ್ಲಾಧಿಕಾರಿಯೂ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಂದ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಕುರಿತು ಮಾಹಿತಿ ಪಡೆದ ಸಿಎಂ ಬುಧವಾರ ರಾತ್ರಿಯೇ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ ಅಹವಾಲು ಆಲಿಸಿದರು.

ತಡರಾತ್ರಿವರೆಗೂ ಜಿಲ್ಲೆಯ ವಿವಿಧ ತಾಲೂಕುಗಳ ಪರಿಸ್ಥಿತಿ ಕುರಿತು ಮಾಹಿತಿ ಪಡೆದು ತುರ್ತಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡಿದರು. ಅಧಿಕಾರಿಗಳಿಗೆ 24 ಗಂಟೆಯೂ ಕೆಲಸ ಮಾಡುವಂತೆ ತಾಕೀತು ಮಾಡುವ ಮೂಲಕ ರಕ್ಷಣೆ ಹಾಗೂ ಪರಿಹಾರ ಕೆಲಸದಲ್ಲಿ ವಿಳಂಬವಾಗದಂತೆ ಎಚ್ಚರವಹಿಸಬೇಕೆಂದು ಸೂಚಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ