ಆ್ಯಪ್ನಗರ

ಬೊಮ್ಮಾಯಿಗೆ ಸಿಗದ ಅಮಿತ್‌ ಶಾ, ಜೆಪಿ ನಡ್ಡಾ ಭೇಟಿ ಅವಕಾಶ! ಮತ್ತಷ್ಟು ಕಗ್ಗಂಟಾದ ಸಂಪುಟ ಸರ್ಕಸ್!

ಕರ್ನಾಟಕದ ಸಂಪುಟ ಸರ್ಜರಿಯ ಕಸರತ್ತು ಮುಂದುವರಿದಿದ್ದು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅವಕಾಶ ಸಿಕ್ಕಿಲ್ಲ. ಈ ಹಿನ್ನೆಲೆ ಬರಿಕೈಯಲ್ಲಿ ಸಿಎಂ ದಿಲ್ಲಿಯಿಂದ ರಾಜ್ಯಕ್ಕೆ ವಾಪಸ್‌ ಆಗುತ್ತಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳ ಆಸೆಯೂ ಕಮರಿದೆ.

Reported byಇರ್ಷಾದ್ ಉಪ್ಪಿನಂಗಡಿ | Edited byಅವಿನಾಶ ವಗರನಾಳ | Vijaya Karnataka Web 10 May 2022, 5:03 pm

ಹೈಲೈಟ್ಸ್‌:


  • ಬಸವರಾಜ ಬೊಮ್ಮಾಯಿಗೆ ಸಿಗದ ಅಮಿತ್‌ ಶಾ, ಜೆಪಿ ನಡ್ಡಾ ಭೇಟಿ ಅವಕಾಶ
  • ಮತ್ತಷ್ಟು ಕಗ್ಗಂಟಾದ ಕರ್ನಾಟಕದ ಸಂಪುಟ ವಿಸ್ತರಣೆ\ಪುನಾರಚನೆ ಸರ್ಕಸ್‌
  • ದಾವೋಸ್‌ ಶೃಂಗ ಸಭೆ ಬಳಿಕವೇ ರಾಜ್ಯದ ಸಂಪುಟಕ್ಕೆ ಸರ್ಜರಿ ಸಾಧ್ಯತೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Basavaraj Bommai
ಬೆಂಗಳೂರು: ಸಂಪುಟ ವಿಸ್ತರಣೆ/ ಪುನಾರಚನೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆ ಚರ್ಚೆ ಮಾಡುವ ಸಿಎಂ ಬಸವರಾಜ ಬೊಮ್ಮಾಯಿ ನಿರೀಕ್ಷೆ ಹುಸಿಯಾಗಿದೆ. ಈ ಮೂಲಕ ಸಂಪುಟ ಸರ್ಜರಿ ಮತ್ತಷ್ಟು ಕಗ್ಗಂಟಾಗಿದ್ದು, ಹೈಕಮಾಂಡ್‌ ನಡೆ ಕುತೂಹಲ ಕೆರಳಿಸಿದೆ.
‘ಇನ್ವೆಸ್ಟ್‌ ಕರ್ನಾಟಕ’ ಸಂಬಂಧ ವಿವಿಧ ದೇಶಗಳ ರಾಯಭಾರಿ ಹಾಗೂ ಹೈ ಕಮಿಷನರ್ ಗಳನ್ನು ಭೇಟಿಗೆ ಮಂಗಳವಾರ ದೆಹಲಿಗೆ ತೆರಳಿದ್ದ ಬೊಮ್ಮಾಯಿ ಹೈಕಮಾಂಡ್‌ ಭೇಟಿ ಮಾಡಿ ಸಂಪುಟ ವಿಸ್ತರಣೆ ಚರ್ಚೆ ನಡೆಸುವ ಉದ್ದೇಶ ಹೊಂದಿದ್ದರು. ಆದರೆ, ಅಮಿತ್ ಶಾ ಹಾಗೂ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ.

ಮಂಗಳವಾರ ನಿಗದಿತ ಕಾರ್ಯಕ್ರಮ ಮುಗಿಸಿ ಅಮಿತ್ ಶಾ ಹಾಗೂ ಜೆಪಿ ನಡ್ಡಾ ಜೊತೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತಾಗಿ ಚರ್ಚೆ ಮಾಡುವುದು ಸಿಎಂ ಉದ್ದೇಶವಾಗಿತ್ತು. ಈ ನಿಟ್ಟಿನಲ್ಲಿ ಸಿಎಂ ದೆಹಲಿ ಪ್ರವಾಸ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಸಂಪುಟಕ್ಕೆ ಸೇರ್ಪಡೆಯಾಗಲು ಪ್ರಯತ್ನ ನಡೆಸುತ್ತಿರುವ ಆಕಾಂಕ್ಷಿಗಳಲ್ಲೂ ನಿರೀಕ್ಷೆ ಗರಿಗೆದರಿತ್ತು. ಆದರೆ, ವರಿಷ್ಠರ ಭೇಟಿ ಸಾಧ್ಯವಾಗದ ಕಾರಣದಿಂದ ಸಂಪುಟ ಸರ್ಜರಿಯ ನಿರೀಕ್ಷೆ ಮತ್ತೊಮ್ಮೆ ಹುಸಿಯಾಗಿದೆ.

ಮಂಗಳವಾರ ದಿಲ್ಲಿಗೆ ಬಸವರಾಜ ಬೊಮ್ಮಾಯಿ; ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಜತೆ ಚರ್ಚೆ?
ಈ ಕುರಿತಾಗಿ ದೆಹಲಿಯಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿ “ಕ್ಯಾಬಿನೆಟ್ ಕುರಿತಾಗಿ ಚರ್ಚೆ ಮಾಡುವ ಉದ್ದೇಶ ಇತ್ತು. ಆದರೆ, ಅಮಿತ್ ಶಾ ಹಾಗೂ ಜೆಪಿ ನಡ್ಡಾ ಭೇಟಿ ಆಗಿಲ್ಲ. ಹೀಗಾಗಿ ವಾಪಸ್ ಹೋಗುತ್ತಿದ್ದೇನೆ” ಎಂದು ತಿಳಿಸಿದರು.

3 ದಿನಗಳಲ್ಲಿ ಸಂಪುಟ ಸರ್ಜರಿ : ನಾಯಕರೊಂದಿಗೆ ಚರ್ಚಿಸಿ ಮಾಹಿತಿ ನೀಡುತ್ತೇನೆ ಎಂದು ಅಮಿತ್‌ ಶಾ ಹೇಳಿದ್ದಾರೆ : ಬೊಮ್ಮಾಯಿ
ಹೈಕಮಾಂಡ್‌ ಭೇಟಿ ಸಾಧ್ಯವಾಗದ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ ಆಗುವ ಸಾಧ್ಯತೆ ಇದೆ. ಆದರೆ, ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗಲಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭವಿಷ್ಯ ನುಡಿದಿದ್ದರು. ಆದರೆ, ಇದೀಗ ವರಿಷ್ಠರು ಆಸಕ್ತಿ ತೋರಿಸದ ಕಾರಣ ಸಂಪುಟ ಸರ್ಕಸ್ ಮತ್ತಷ್ಟು ಕಗ್ಗಂಟಾಗಿದೆ. ಇನ್ನೇನು ಸಿಎಂ ದಾವೋಸ್ ಶೃಂಗ ಸಭೆಗೆ ಭಾಗವಹಿಸಲು ತೆರಳಲಿದ್ದಾರೆ. ಪರಿಣಾಮ ಇನ್ನೇನಿದ್ದರೂ ಸಂಪುಟ ವಿಸ್ತರಣೆ ಸಿಎಂ ಬಸವರಾಜ ಬೊಮ್ಮಾಯಿ ಪ್ರವಾಸ ಮುಗಿಸಿ ವಾಪಸ್‌ ಬಂದ ಬಳಿಕವಷ್ಟೇ ನಡೆಯುವ ಸಾಧ್ಯತೆ ಇದೆ.

ಅಮಿತ್ ಶಾ ಭೇಟಿ ಬಳಿಕ ತಣ್ಣಗಾದ ಸಂಪುಟ ಸರ್ಜರಿ ಕುತೂಹಲ: ಮೇ 10ರೊಳಗೆ ಸಂಪುಟ ವಿಸ್ತರಣೆ?
ಕ್ಯಾಬಿನೆಟ್‌ನಲ್ಲಿ 5 ಸ್ಥಾನಗಳು ಖಾಲಿ!
ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಒಂದು ವರ್ಷವಷ್ಟೇ ಬಾಕಿ ಇದೆ. ಸಚಿವ ಸಂಪುಟದಲ್ಲಿ ಒಟ್ಟು ಐದು ಸ್ಥಾನಗಳು ಖಾಲಿ ಇವೆ. ಸಂಪುಟ ವಿಸ್ತರಣೆಯಾದರೆ 5 ಸ್ಥಾನಗಳನ್ನು ಭರ್ತಿ ಮಾಡುವ ಸಾಧ್ಯತೆ ಇದೆ. ಆದರೆ, ಹೈಕಮಾಂಡ್‌ ತಲೆಯಲ್ಲಿ ಸಂಪುಟ ಪುನಾರಚನೆ ಮಾಡಿ ಒಂದಿಷ್ಟು ಹಿರಿಯ ನಾಯಕರಿಗೆ ಪಕ್ಷ ಸಂಘಟನೆಯ ಕೆಲಸ ನೀಡಿ ಹೊಸ ಮುಖಗಳಿಗೆ ಆದ್ಯತೆ ನೀಡಬೇಕೆಂಬುದು ಇದೆ ಎಂದು ಹೇಳಲಾಗುತ್ತಿದೆ. ಅದಲ್ಲದೇ ಚುನಾವಣಾ ವರ್ಷ ಆಗಿರುವುದರಿಂದ ಎಲ್ಲ ವರ್ಗಗಳಿಗೂ, ಎಲ್ಲ ಪ್ರದೇಶಕ್ಕೂ ಪ್ರಾತಿನಿಧ್ಯ ನೀಡಬೇಕೆಂಬ ಚಿಂತನೆ ಇದೆ ಎನ್ನಲಾಗಿದೆ.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ