ಮೈಷುಗರ್ ಖಾಸಗೀಕರಣದ ಪ್ರಸ್ತಾಪ ಸದ್ಯಕ್ಕಿಲ್ಲ: ಬೊಮ್ಮಾಯಿ ಭರವಸೆಗೆ ರೈತರ ಹರ್ಷ!
ಮೂರು ತಿಂಗಳಲ್ಲಿ ಮೈಷುಗರ್ ಪುನಶ್ಚೇತನದ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಕಬ್ಬಿನ ಉಪ ಉತ್ಪನ್ನಗಳನ್ನು ತಯಾರಿಸಲು ಆದ್ಯತೆ ನೀಡಲಾಗುತ್ತದೆ. ಕೂಡಲೆ ದಕ್ಷ ಅಧಿಕಾರಿಯನ್ನು ಎಂಡಿಯಾಗಿ ನೇಮಕ ಮಾಡಲು ತೀರ್ಮಾನ ಕೈಗೊಳ್ಳಲಾಗುವುದು ಹಾಗೂ ಅಗತ್ಯ ಯಂತ್ರೋಪಕರಣಗಳನ್ನು ಸರಿಪಡಿಸಲು ಈಗಿನಿಂದಲೇ ಕ್ರಮ ಕೈಗೊಳ್ಳಲಾಗುವುದು ಎಂದರು. ಮೈಷುಗರ್ ಖಾಸಗಿಕರಣ ಮಾಡುವ ಪ್ರಸ್ತಾಪ ಸದ್ಯಕ್ಕೆ ವಾಪಸ್ ಪಡೆಯುತ್ತೇವೆ. ಅಷ್ಟೇ ಅಲ್ಲದೆ ಕಾರ್ಖಾನೆಗೆ ಅಗತ್ಯ ಹಣಕಾಸು ನೆರವು ನೀಡಲಾಗುವುದು ಎಂದು ಸಿಎಂ ತಿಳಿಸಿದರು.
Vijaya Karnataka Web 18 Oct 2021, 3:23 pm
ಬೆಂಗಳೂರು: ಮಂಡ್ಯ ಜಿಲ್ಲೆಯ ಮೈಷುಗರ್ ಕಾರ್ಖಾನೆಯನ್ನು ಖಾಸಗೀಕರಣ ಮಾಡುವ ಪ್ರಸ್ತಾಪ ಸದ್ಯಕ್ಕಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಮಂಡ್ಯದ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರ ನಿಯೋಗದ ಜೊತೆ ನಡೆಸಿದ ಸಭೆಯಲ್ಲಿ ಎರಡು ವರ್ಷಗಳ ಕಾಲ ಮೈಷುಗರ್ ಕಾರ್ಖಾನೆಯನ್ನು ಸರ್ಕಾರ ನಡೆಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಭರವಸೆ ನೀಡಿದರು. ಸಭೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಮೂರು ತಿಂಗಳಲ್ಲಿ ಮೈಷುಗರ್ ಪುನಶ್ಚೇತನದ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಕಬ್ಬಿನ ಉಪ ಉತ್ಪನ್ನಗಳನ್ನು ತಯಾರಿಸಲು ಆದ್ಯತೆ ನೀಡಲಾಗುತ್ತದೆ. ಕೂಡಲೆ ದಕ್ಷ ಅಧಿಕಾರಿಯನ್ನು ಎಂಡಿಯಾಗಿ ನೇಮಕ ಮಾಡಲು ತೀರ್ಮಾನ ಕೈಗೊಳ್ಳಲಾಗುವುದು ಹಾಗೂ ಅಗತ್ಯ ಯಂತ್ರೋಪಕರಣಗಳನ್ನು ಸರಿಪಡಿಸಲು ಈಗಿನಿಂದಲೇ ಕ್ರಮ ಕೈಗೊಳ್ಳಲಾಗುವುದು ಎಂದರು. ಮೈಷುಗರ್ ಖಾಸಗಿಕರಣ ಮಾಡುವ ಪ್ರಸ್ತಾಪ ಸದ್ಯಕ್ಕೆ ವಾಪಸ್ ಪಡೆಯುತ್ತೇವೆ. ಅಷ್ಟೇ ಅಲ್ಲದೆ ಕಾರ್ಖಾನೆಗೆ ಅಗತ್ಯ ಹಣಕಾಸು ನೆರವು ನೀಡಲಾಗುವುದು ಎಂದು ತಿಳಿಸಿದರು.
ಸಿಎಂ ನಿರ್ಧಾರಕ್ಕೆ ರೈತ, ಜನ ಪ್ರತಿನಿಧಿಗಳ ನಿಯೋಗ ಹರ್ಷ
ಮಂಡ್ಯ ಮೈಷುಗರ್ ಕಾರ್ಖಾನೆಯನ್ನು ಎರಡು ವರ್ಷಗಳ ಕಾಲ ಸರ್ಕಾರಿ ಸ್ವಾಮ್ಯದಲ್ಲಿ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿರುವುದಕ್ಕೆ ಸಭೆಯಲ್ಲಿ ಭಾಗಿಯಾಗ ಜನ ಪ್ರತಿನಿಧಿಗಳು ಹಾಗೂ ರೈತ ಸಂಘಟನೆಗಳ ಮುಖಂಡರು ಸಂತಸ ವ್ಯಕ್ತಪಡಿಸಿದ್ದಾರೆ. ಮೈಷುಗರ್ ಕಾರ್ಖಾನೆಯನ್ನು ಸರ್ಕಾರವೇ ಪ್ರಾರಂಭ ಮಾಡಲು ನಿರ್ಧರಿಸಿದೆ. ಈ ಕಾರಣಕ್ಕೆ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇವೆ. ಪಕ್ಷಾತೀತವಾಗಿ ಆರಂಭ ಮಾಡಲು ಸಹಕರಿಸುತ್ತೇವೆ ಎಂದು ಶಾಸಕ ಡಿ.ಸಿ ತಮ್ಮಣ್ಣ ಹೇಳಿದರು.
ಶಾಸಕ ಡಾ. ಕೆ ಅನ್ನದಾನಿ ಮಾತನಾಡಿ, ಮಂಡ್ಯ ಜಿಲ್ಲೆ ರೈತರು ಒಂದು ತಿಂಗಳಿಂದ ಹೋರಾಟ ಮಾಡಿದ್ದೆವು. ಸಿಎಂ ಬೊಮ್ಮಾಯಿ ಸರ್ಕಾರದ ಸ್ವಾಮ್ಯದಲ್ಲೇ ನಡೆಸೋದಾಗಿ ಬರವಸೆ ನೀಡಿದ್ದಾರೆ. ಈ ಮೂಲಕ ನಮಗೆ ಸಿಹಿ ನೀಡಿದ್ದಾರೆ. ಖಾಸಗಿ ನೀಡಬಾರದು ಅಂತ ಒಂದು ದಿನ ಪಾದಯಾತ್ರೆ ನಡೆಸಿದ್ದೆ. ಆ ಹೋರಾಟಕ್ಕೆ ಸ್ಪಂದಿಸಿ, ಸಿಎಂ ಸರ್ಕಾರಿ ಸ್ವಾಮ್ಯದಲ್ಲೇ ನಡೆಸೋದಾಗಿ ಭರವಸೆ ನೀಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ರೈತ ಸಂಘಟನೆಗಳ ಮುಖಂಡ ಬಡಗಲಪುರ ನಾಗೇಂದ್ರ ಮಾತನಾಡಿ, ಸರ್ಕಾರವೇ ಕಾರ್ಖಾನೆ ನಡೆಸಲು ತೀರ್ಮಾನ ಮಾಡಿದ್ದು, ಇದಕ್ಕಾಗಿ ರೈತರ ಪರವಾಗಿ ಸಿಎಂಗೆ ಅಭಿನಂದನೆ ಸಲ್ಲಿಸುತ್ತೇನೆ. ಎರಡು ವರ್ಷ ಸರ್ಕಾರವೇ ನಡೆಸಲು ತೀರ್ಮಾನ ಮಾಡಿದೆ. ಎರಡು ವರ್ಷದ ಬಳಿಕ ನೋಡಿಕೊಂಡು ಮುಂದೆ ಮತ್ತೆ ಚರ್ಚೆ ಮಾಡೋಣ ಎಂದಿದ್ದಾರೆ. ನಮ್ಮ ಬೇಡಿಕೆಗೆ ಸರ್ಕಾರ ಸೂಕ್ತವಾಗಿ ಸ್ಪಂದಿಸಿದೆ. ಹೀಗಾಗಿ ನಮ್ಮ ಹೋರಾಟವನ್ನು ಕೈಬಿಡಲು ಮಂಡ್ಯಗೆ ಹೋಗಿ ತೀರ್ಮಾನ ಮಾಡ್ತೇವೆ ಎಂದರು.
ಕಾರ್ಖಾನೆ ಪುನಶ್ಚೇತನಕ್ಕೆ ತಕ್ಷಣವೇ ತಜ್ಞರ ಸಮಿತಿ ನೇಮಕ
ಕಾರ್ಖಾನೆ ಪುನಶ್ಚೇತನಕ್ಕೆ ತಕ್ಷಣವೇ ತಜ್ಞರ ಸಮಿತಿ ನೇಮಕ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ತಜ್ಞರ ಸಮಿತಿ ಮೂರು ತಿಂಗಳಲ್ಲಿ ವರದಿ ನೀಡಲಿದೆ. ಕಾರ್ಖಾನೆ ಪುನಶ್ಚೇತನಕ್ಕೆ ಬೇಕಾದ ಸಿದ್ದತೆ ಕೈಗೊಳ್ಳುವುದರ ಜೊತೆಗೆ ಮುಂದಿನ ವರ್ಷದಿಂದ(ಮುಂದಿನ ಹಂಗಾಮು) ಕಬ್ಬು ನುರಿಸಲು ಬೇಕಾದ ಎಲ್ಲ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ವಾಸ್ತವ ಸಮಸ್ಯೆಯನ್ನು ಸಭೆಯ ಮುಂದಿಟ್ಟಿದ್ದೇನೆ: ಸುಮಲತಾ ಅಂಬರೀಶ್ಮಂಡ್ಯ ಮೈಷುಗರ್ ಕಾರ್ಖಾನೆಯ ವಾಸ್ತವ ಸಮಸ್ಯೆಯನ್ನು ಇವತ್ತಿನ ಸಭೆಯಲ್ಲಿ ಸಿಎಂ ಮುಂದಿಟ್ಟಿದ್ದೇವೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ರೈತರಿಗೆ ಸಮಸ್ಯೆ ಆಗದಂತೆ ನಿರ್ಧಾರ ಕೈಗೊಳ್ಳಿ ಅಂತ ಸಭೆಯಲ್ಲಿ ಹೇಳಿದೆ. ಒಟ್ಟಿನಲ್ಲಿ ಕಾರ್ಖಾನೆ ಪುನಾರಂಭ ಆಗಬೇಕು. ಆದಷ್ಟು ಬೇಗ ಆರಂಭ ಆಗಬೇಕು. ಯಾವ ಮಾದರಿಯಲ್ಲಿ ಆರಂಭ ಆಗಬೇಕು ಅಂತ ಸರ್ಕಾರ ನಿರ್ಧರಿಸಲಿ ಅಂತ ಹೇಳಿದ್ದೇನೆ ಎಂದು ತಿಳಿಸಿದರು.
ವಿಧಾನಸೌಧದಲ್ಲಿ ಸೋಮವಾರ ಮಂಡ್ಯದ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರ ನಿಯೋಗದ ಜೊತೆ ನಡೆಸಿದ ಸಭೆಯಲ್ಲಿ ಎರಡು ವರ್ಷಗಳ ಕಾಲ ಮೈಷುಗರ್ ಕಾರ್ಖಾನೆಯನ್ನು ಸರ್ಕಾರ ನಡೆಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಭರವಸೆ ನೀಡಿದರು. ಸಭೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಮೂರು ತಿಂಗಳಲ್ಲಿ ಮೈಷುಗರ್ ಪುನಶ್ಚೇತನದ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಕಬ್ಬಿನ ಉಪ ಉತ್ಪನ್ನಗಳನ್ನು ತಯಾರಿಸಲು ಆದ್ಯತೆ ನೀಡಲಾಗುತ್ತದೆ. ಕೂಡಲೆ ದಕ್ಷ ಅಧಿಕಾರಿಯನ್ನು ಎಂಡಿಯಾಗಿ ನೇಮಕ ಮಾಡಲು ತೀರ್ಮಾನ ಕೈಗೊಳ್ಳಲಾಗುವುದು ಹಾಗೂ ಅಗತ್ಯ ಯಂತ್ರೋಪಕರಣಗಳನ್ನು ಸರಿಪಡಿಸಲು ಈಗಿನಿಂದಲೇ ಕ್ರಮ ಕೈಗೊಳ್ಳಲಾಗುವುದು ಎಂದರು. ಮೈಷುಗರ್ ಖಾಸಗಿಕರಣ ಮಾಡುವ ಪ್ರಸ್ತಾಪ ಸದ್ಯಕ್ಕೆ ವಾಪಸ್ ಪಡೆಯುತ್ತೇವೆ. ಅಷ್ಟೇ ಅಲ್ಲದೆ ಕಾರ್ಖಾನೆಗೆ ಅಗತ್ಯ ಹಣಕಾಸು ನೆರವು ನೀಡಲಾಗುವುದು ಎಂದು ತಿಳಿಸಿದರು.
ಸಿಎಂ ನಿರ್ಧಾರಕ್ಕೆ ರೈತ, ಜನ ಪ್ರತಿನಿಧಿಗಳ ನಿಯೋಗ ಹರ್ಷ
ಮಂಡ್ಯ ಮೈಷುಗರ್ ಕಾರ್ಖಾನೆಯನ್ನು ಎರಡು ವರ್ಷಗಳ ಕಾಲ ಸರ್ಕಾರಿ ಸ್ವಾಮ್ಯದಲ್ಲಿ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿರುವುದಕ್ಕೆ ಸಭೆಯಲ್ಲಿ ಭಾಗಿಯಾಗ ಜನ ಪ್ರತಿನಿಧಿಗಳು ಹಾಗೂ ರೈತ ಸಂಘಟನೆಗಳ ಮುಖಂಡರು ಸಂತಸ ವ್ಯಕ್ತಪಡಿಸಿದ್ದಾರೆ. ಮೈಷುಗರ್ ಕಾರ್ಖಾನೆಯನ್ನು ಸರ್ಕಾರವೇ ಪ್ರಾರಂಭ ಮಾಡಲು ನಿರ್ಧರಿಸಿದೆ. ಈ ಕಾರಣಕ್ಕೆ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇವೆ. ಪಕ್ಷಾತೀತವಾಗಿ ಆರಂಭ ಮಾಡಲು ಸಹಕರಿಸುತ್ತೇವೆ ಎಂದು ಶಾಸಕ ಡಿ.ಸಿ ತಮ್ಮಣ್ಣ ಹೇಳಿದರು.
ಶಾಸಕ ಡಾ. ಕೆ ಅನ್ನದಾನಿ ಮಾತನಾಡಿ, ಮಂಡ್ಯ ಜಿಲ್ಲೆ ರೈತರು ಒಂದು ತಿಂಗಳಿಂದ ಹೋರಾಟ ಮಾಡಿದ್ದೆವು. ಸಿಎಂ ಬೊಮ್ಮಾಯಿ ಸರ್ಕಾರದ ಸ್ವಾಮ್ಯದಲ್ಲೇ ನಡೆಸೋದಾಗಿ ಬರವಸೆ ನೀಡಿದ್ದಾರೆ. ಈ ಮೂಲಕ ನಮಗೆ ಸಿಹಿ ನೀಡಿದ್ದಾರೆ. ಖಾಸಗಿ ನೀಡಬಾರದು ಅಂತ ಒಂದು ದಿನ ಪಾದಯಾತ್ರೆ ನಡೆಸಿದ್ದೆ. ಆ ಹೋರಾಟಕ್ಕೆ ಸ್ಪಂದಿಸಿ, ಸಿಎಂ ಸರ್ಕಾರಿ ಸ್ವಾಮ್ಯದಲ್ಲೇ ನಡೆಸೋದಾಗಿ ಭರವಸೆ ನೀಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ರೈತ ಸಂಘಟನೆಗಳ ಮುಖಂಡ ಬಡಗಲಪುರ ನಾಗೇಂದ್ರ ಮಾತನಾಡಿ, ಸರ್ಕಾರವೇ ಕಾರ್ಖಾನೆ ನಡೆಸಲು ತೀರ್ಮಾನ ಮಾಡಿದ್ದು, ಇದಕ್ಕಾಗಿ ರೈತರ ಪರವಾಗಿ ಸಿಎಂಗೆ ಅಭಿನಂದನೆ ಸಲ್ಲಿಸುತ್ತೇನೆ. ಎರಡು ವರ್ಷ ಸರ್ಕಾರವೇ ನಡೆಸಲು ತೀರ್ಮಾನ ಮಾಡಿದೆ. ಎರಡು ವರ್ಷದ ಬಳಿಕ ನೋಡಿಕೊಂಡು ಮುಂದೆ ಮತ್ತೆ ಚರ್ಚೆ ಮಾಡೋಣ ಎಂದಿದ್ದಾರೆ. ನಮ್ಮ ಬೇಡಿಕೆಗೆ ಸರ್ಕಾರ ಸೂಕ್ತವಾಗಿ ಸ್ಪಂದಿಸಿದೆ. ಹೀಗಾಗಿ ನಮ್ಮ ಹೋರಾಟವನ್ನು ಕೈಬಿಡಲು ಮಂಡ್ಯಗೆ ಹೋಗಿ ತೀರ್ಮಾನ ಮಾಡ್ತೇವೆ ಎಂದರು.
ಕಾರ್ಖಾನೆ ಪುನಶ್ಚೇತನಕ್ಕೆ ತಕ್ಷಣವೇ ತಜ್ಞರ ಸಮಿತಿ ನೇಮಕ
ಕಾರ್ಖಾನೆ ಪುನಶ್ಚೇತನಕ್ಕೆ ತಕ್ಷಣವೇ ತಜ್ಞರ ಸಮಿತಿ ನೇಮಕ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ತಜ್ಞರ ಸಮಿತಿ ಮೂರು ತಿಂಗಳಲ್ಲಿ ವರದಿ ನೀಡಲಿದೆ. ಕಾರ್ಖಾನೆ ಪುನಶ್ಚೇತನಕ್ಕೆ ಬೇಕಾದ ಸಿದ್ದತೆ ಕೈಗೊಳ್ಳುವುದರ ಜೊತೆಗೆ ಮುಂದಿನ ವರ್ಷದಿಂದ(ಮುಂದಿನ ಹಂಗಾಮು) ಕಬ್ಬು ನುರಿಸಲು ಬೇಕಾದ ಎಲ್ಲ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ವಾಸ್ತವ ಸಮಸ್ಯೆಯನ್ನು ಸಭೆಯ ಮುಂದಿಟ್ಟಿದ್ದೇನೆ: ಸುಮಲತಾ ಅಂಬರೀಶ್ಮಂಡ್ಯ ಮೈಷುಗರ್ ಕಾರ್ಖಾನೆಯ ವಾಸ್ತವ ಸಮಸ್ಯೆಯನ್ನು ಇವತ್ತಿನ ಸಭೆಯಲ್ಲಿ ಸಿಎಂ ಮುಂದಿಟ್ಟಿದ್ದೇವೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ರೈತರಿಗೆ ಸಮಸ್ಯೆ ಆಗದಂತೆ ನಿರ್ಧಾರ ಕೈಗೊಳ್ಳಿ ಅಂತ ಸಭೆಯಲ್ಲಿ ಹೇಳಿದೆ. ಒಟ್ಟಿನಲ್ಲಿ ಕಾರ್ಖಾನೆ ಪುನಾರಂಭ ಆಗಬೇಕು. ಆದಷ್ಟು ಬೇಗ ಆರಂಭ ಆಗಬೇಕು. ಯಾವ ಮಾದರಿಯಲ್ಲಿ ಆರಂಭ ಆಗಬೇಕು ಅಂತ ಸರ್ಕಾರ ನಿರ್ಧರಿಸಲಿ ಅಂತ ಹೇಳಿದ್ದೇನೆ ಎಂದು ತಿಳಿಸಿದರು.