ಆ್ಯಪ್ನಗರ

ಮಾಧುಸ್ವಾಮಿ ಮಾಡಿದ ಡ್ಯಾಮೇಜ್‌ ಕಂಟ್ರೋಲ್‌ಗೆ ಸಿಎಂ ಯತ್ನ, ಕುರುಬರ ಕ್ಷಮೆ ಕೇಳಿದ ಬಿಎಸ್‌ವೈ‌

ಸಚಿವ ಮಾಧುಸ್ವಾಮಿ ಅವರು ಕುರುಬ ಸಮುದಾಯದ ಸ್ವಾಮೀಜಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಸಿಎಂ ಬಿಎಸ್‌ ಯಡಿಯೂರಪ್ಪ.

Vijaya Karnataka Web 20 Nov 2019, 11:42 am
ಬೆಂಗಳೂರು: ಚಿಕ್ಕನಾಯಕನಹಳ್ಳಿ ಕಾರ್ಯಕ್ರಮದಲ್ಲಿ ನಡೆದ ಘಟನೆಗೆ ನಾನು ಕ್ಷಮೆ ಕೇಳುತ್ತೇನೆ. ಸಚಿವ ಮಾಧುಸ್ವಾಮಿ ಕೂಡ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ನಾನು ಕೂಡ ಕ್ಷಮೆ ಕೇಳುತ್ತೇನೆ. ಈ ವಿಚಾರದಲ್ಲಿ ಗೊಂದಲ ಬೇಡ. ಈ ವಿಚಾರವನ್ನು ಮುಂದುವರೆಸುವುದು ಬೇಡ ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ನಡೆಸಿದರು.
Vijaya Karnataka Web BSY


ಸಚಿವ ಜೆಸಿ ಮಾಧುಸ್ವಾಮಿ ಅವರು ಕುರುಬ ಸಮಾಜದ ಹೊಸದುರ್ಗ ಶಾಖಾಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಅವರನ್ನು ಅವಾಚ್ಯ ಶಬ್ಧ ಹಾಗೂ ಏಕವಚನದಿಂದ ನಿಂದಿಸಿದ ವಿಚಾರಕ್ಕೆ ಸಂಬಂಧಿಸಿ ಕುರುಬ ಸಂಘಟನೆಗಳು ಭಾರಿ ಆಕ್ರೋಶ ವ್ಯಕ್ತ ಪಡಿಸಿದ್ದವು.

ಲೋಕ ಸಮರದಲ್ಲಿ‘ಸ್ವಾಭಿಮಾನದ’ ಜತೆಗಿದ್ದವರ ಕೈ ಹಿಡೀತಾರಾ ಸಂಸದೆ ! ಕೆ.ಆರ್ ಪೇಟೆಯಲ್ಲಿ ಸುಮಲತಾ ನಿಲುವೇನು?

ಕುರುಬ ಸ್ವಾಮೀಜಿ ಅವರ ವಿರುದ್ಧ ಅವಾಚ್ಯ ಶಬ್ಧ ಬಳಸಿರುವುದಕ್ಕೆ ಖಂಡನೆ ವ್ಯಕ್ತ ಪಡಿಸಿ ಪ್ರತಿಭಟನೆಯೂ ನಡೆದಿತ್ತು. ಸ್ವಾಮೀಜಿಗೆ ಏಕವಚನದ ಮಾತನಾಡಿರುವುದು ಕುರುಬ ಸಮುದಾಯಕ್ಕೆ ಮಾಡಿರುವ ಅಪಮಾನ. ಸಚಿವರು ಕುರುಬ ಸಮುದಾಯದ ಕ್ಷಮೆ ಕೇಳಬೇಕು. ಅವಾಚ್ಯ ಹೇಳಿಕೆ ನೀಡಿದ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು. ಸಚಿವರು ಕ್ಷಮೆ ಕೇಳದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಶಿವಮೊಗ್ಗದಲ್ಲಿ ಶ್ರೀ ಭಕ್ತ ಕನಕದಾಸ ಕುರುಬರ ಸಂಘ ಎಚ್ಚರಿಕೆ ನೀಡಿತ್ತು.

ಚುನಾವಣಾ ಆಯೋಗಕ್ಕೆ ರಮೇಶ್‌ ಜಾರಕಿಹೊಳಿ ಸುಳ್ಳು ಮಾಹಿತಿ?

ಕುರುಬ ಸಮುದಾಯದ ಆಕ್ರೋಶವನ್ನು ಮನಗಂಡ ಬಿಎಸ್‌ವೈ ಡ್ಯಾಮೇಜ್‌ ಕಂಟ್ರೋಲ್‌ಗೆ ಯತ್ನಿಸಿದ್ದಾರೆ. ಶತಾಯಗತಾಯ ಉಪ ಚುನಾವಣೆಯಲ್ಲಿ 12 ಸ್ಥಾನ ಗೆಲ್ಲಲೇ ಬೇಕು ಎಂದು ಶ್ರಮಿಸುತ್ತಿರುವ ಬಿಎಸ್‌ವೈ, ಮಾಧುಸ್ವಾಮಿ ವಿವಾದಾತ್ಮಕ ಹೇಳಿಕೆ ಚುನಾವಣೆ ಮೇಲೆ ಪರಿಣಾಮ ಬೀರುತ್ತದೆ ಎಂಬ ಕಾರಣಕ್ಕೆ ಕ್ಷಮೆಯೊಂದಿಗೆ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ನಡೆಸಿದ್ದಾರೆ.

ಎಚ್‌ಡಿಕೆಯ ಅಚ್ಚರಿ ನಡೆಗೆ ಬಿಜೆಪಿ ಶಾಕ್‌!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ