ಆ್ಯಪ್ನಗರ

2021 ಕ್ಕೆ ಎಲೆಕ್ಟ್ರಾನಿಕ್ ಸಿಟಿಗೆ ಮೆಟ್ರೋ ಸಂಚಾರ ಕಲ್ಪಿಸುವ ಗುರಿ - ಸಿಎಂ ಬಿಎಸ್‌ವೈ

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ. ಅಶ್ವಥನಾರಾಯಣ್ ಹಾಗೂ ಸಚಿವರಾದ ಆರ್.ಅಶೋಕ್ ಉಪಸ್ಥಿತರಿದ್ದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 2021 ಕ್ಕೆ ಎಲೆಕ್ಟ್ರಾನಿಕ್ ಸಿಟಿಗೆ ಮೆಟ್ರೋ ಸಂಚಾರ ಕಲ್ಪಿಸುವ ಗುರಿ ಇದೆ ಎಂದಿದ್ದಾರೆ.

Vijaya Karnataka Web 8 Sep 2019, 4:24 pm
ಬೆಂಗಳೂರು: 2021 ಕ್ಕೆ ಎಲೆಕ್ಟ್ರಾನಿಕ್ ಸಿಟಿಗೆ ಮೆಟ್ರೋ ಸಂಚಾರ ಕಲ್ಪಿಸುವ ಗುರಿ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ಬೆಂಗಳೂರು ನಗರ ಪ್ರದಕ್ಷಿಣೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೆಟ್ರೋ ಎರಡನೇ ಹಂತದ ಕಾಮಗಾರಿಗಳಿಗೆ ವೇಗ ನೀಡುವ ಮೂಲಕ 2021 ರೊಳಗೆ ವೈಟ್ ಫೀಲ್ಡ್ ಮೆಟ್ರೋ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
Vijaya Karnataka Web cm city rounds


ಸಂಚಾರ ದಟ್ಟಣೆ ಹೆಚ್ಚಾಗಿರುವ ಕಡೆಗಳಲ್ಲಿ ಪರ್ಯಾಯ ರಸ್ತೆಗಳ ಅಭಿವೃದ್ಧಿ ಮಾಡಲು ಯೋಜನೆ ರೂಪಿಸಲಾಗಿದ್ದು, ಹೆಬ್ಬಾಳದ ಮೇಲ್ಸೇತುವೆಗೆ ಐದು ಲೇನ್ ಸೇರ್ಪಡೆ ಕುರಿತು ಅಧ್ಯಯನ ನಡೀತಿದೆ. ಸಿಲ್ಕ್ ಬೋರ್ಡ್ನಿಂದ ಹೆಬ್ಬಾಳ ದವರೆಗೆ ಔಟರ್ ರಿಂಗ್ ರೋಡ್ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯನ್ನು ಮುಂದಿನ 2 ತಿಂಗಳಲ್ಲಿ ಮುಗಿಸಲು ಸೂಚಿಸಿರುವೆ ಎಂದಿದ್ದಾರೆ.

ಬೆಂಗಳೂರು ನಗರದ ಅಭಿವೃದ್ಧಿಗೆ ಯಾವುದೇ ಹಣಕಾಸಿನ ಕೊರತೆ ಇಲ್ಲ. ಬೆಳ್ಳಂದೂರು ಕೆರೆ ಅಭಿವೃದ್ಧಿಗೆ 200 ಕೋಟಿ ರೂಪಾಯಿ ಅನುದಾನ ನೀಡಿ ಸಮಗ್ರ ಅಭಿವೃದ್ಧಿ ಮಾಡಲಾಗುತ್ತದೆ. ನಿರಂತರ ಅಭಿವೃದ್ದಿ ಕಾರ್ಯಗಳ ಮೂಲಕ ಬೆಂಗಳೂರನ್ನು ವಿಶ್ವದರ್ಜೆ ನಗರಕ್ಕೇರಿಸುವುದು ನಮ್ಮ ಸರಕಾರದ ಗುರಿ ಎಂದರು. ಇದೇ ವೇಳೆ ನಗರದ ಅಭಿವೃದ್ಧಿ ಹೆಸರಲ್ಲಿ ಭ್ರಷ್ಟಾಚಾರ ನಡೀತಿದ್ದು, ಇದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಪ್ರವಾಹ ಸಂತ್ರಸ್ತರ ಗೋಳು ಕೇಳದೆ ಬೆಂಗಳೂರು ಸುತ್ತಾಟ!: ಸಿಎಂಗೆ ಕುಮಾರಸ್ವಾಮಿ ಚಾಟಿ

ಕುಮಾರಸ್ವಾಮಿ ಟ್ವೀಟ್ ಆರೋಪಕ್ಕೆ ಸಿಎಂ ಪ್ರತಿಕ್ರಿಯಿಸಲು ನಕಾರ

ಸಿಎಂ ನಗರ ಪರಿವೀಕ್ಷಣೆ ಕುರಿತಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮಾಡಿರುವ ಟ್ವೀಟ್ ಆರೋಪಕ್ಕೆ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಸಲು ನಿರಾಕರಿಸಿದ್ದಾರೆ. ಮುಖ್ಯಮಂತ್ರಿ ಹಾಗೂ ಅವರ ಮಂತ್ರಿಗಳು ನೆರೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಬೀದಿಗೆ ಬಿದ್ದಿರುವ ಬಡ ಕುಟುಂಬಗಳೊಂದಿಗೆ ಕುಳಿತು ಪರಿಹಾರ ಕಾರ್ಯಗಳ ಪರಿಶೀಲನೆ ಮಾಡಬೇಕಾದ ಈ ಸಂದರ್ಭದಲ್ಲಿ ಬೆಂಗಳೂರು ನಗರ ಪರಿವೀಕ್ಷಣೆ ಎಂಬ ನಾಟಕವನ್ನಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದರು. ಈ ಆರೋಪಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿಎಂ, ನಾನು ಇದರ ಬಗ್ಗೆ ಪ್ರತಿಕ್ರಿಯೆ ಕೊಡೋದಿಲ್ಲ.ಇದಕ್ಕೆ ಪ್ರತಿಕ್ರಿಯೆ ಕೊಡಬಾರದೆಂದು ನಿರ್ಧರಿಸಿರುವೆ ಎಂದರು. ಇನ್ನೆರಡು ದಿನಗಳಲ್ಲಿ ಉತ್ತರ ಕನ್ನಡದ ಕಾರವಾರ ಜಿಲ್ಲೆಗೆ ಭೇಟಿ ನೀಡಲಿದ್ದೇನೆ. ಬೇರೆ ಅಭಿವೃದ್ಧಿ ಕೆಲಸ ನಿಂತರೂ ಪರವಾಗಿಲ್ಲ. ನೆರೆ ಪೀಡಿತರ ಪುನರ್ವಸತಿ ಕಾರ್ಯಕ್ಕೆ ಸರಕಾರ ಆದ್ಯತೆ ನೀಡಿದೆ. ಪುನರ್ವಸತಿಗೆ ಕೇಂದ್ರದ ತಂಡ ಪ್ರವಾಹ ಸ್ಥಿತಿ ಅಧ್ಯಯನ ಮಾಡಿ ಹೋಗಿದೆ. ಶೀಘ್ರದಲ್ಲೇ ಕೇಂದ್ರದಿಂದ ಪರಿಹಾರ ಬರುವ ನಿರೀಕ್ಷೆ ಇದ್ದು , ಐಟಿ ಕಂಪನಿಗಳಿಂದ ನೆರೆ ಪರಿಹಾರಕ್ಕೆ ನೆರವು ನೀಡುವಂತೆ ಮನವಿ ಮಾಡಲಾಗಿದೆ ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ