ಆ್ಯಪ್ನಗರ

ಅಭಿವೃದ್ಧಿ ಆಗ್ತಿಲ್ಲ ಎಂದು ಟೀಕೆ ಮಾಡುವವರಿಗೆ ಅಂಕಿ ಅಂಶಗಳೇ ಉತ್ತರ ಕೊಡ್ತವೆ: ಸಿಎಂ ಬಿಎಸ್‌ವೈ

'ಎಲ್ಲಾ ಇಲಾಖೆಯಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದೇವೆ. ಪ್ರಧಾನಿ ಮೋದಿಯವರ ಆಶೀರ್ವಾದದಿಂದ ಹತ್ತು ಹಲವು ಅಭಿವೃದ್ಧಿ ಕೆಲಸ ಮಾಡ್ತಿದ್ದೇವೆ. ಇವತ್ತಿಂದ ಎಲ್ಲಾ ರಿಲೀಫ್ ಕೊಟ್ಟಿದ್ದೇವೆ' - ಮುಖ್ಯಮಂತ್ರಿ ಯಡಿಯೂರಪ್ಪ

Authored byಇರ್ಷಾದ್ ಉಪ್ಪಿನಂಗಡಿ | Vijaya Karnataka Web 21 Jun 2021, 3:54 pm

ಹೈಲೈಟ್ಸ್‌:

  • ರೈತರಿಗೆ, ಸ್ತ್ರೀ ಶಕ್ತಿ ಗುಂಪುಗಳಿಗೆ ಸಾಲ ನೀಡಿದ್ದೇವೆ
  • ನಮ್ಮದು ರೈತಪರ ಸರ್ಕಾರ ಅನ್ನೋದು ಎಲ್ಲರಿಗೂ ಗೊತ್ತಿದೆ
  • ಆರೋಗ್ಯ, ಶಿಕ್ಷಣ, ಕೃಷಿ ನಮ್ಮ ಆದ್ಯತೆ: ಸಿಎಂ ಯಡಿಯೂರಪ್ಪ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web BS Yediyurappa
ಬೆಂಗಳೂರು: ಅಭಿವೃದ್ಧಿ ಆಗುತ್ತಿಲ್ಲ ಎಂದು ಟೀಕೆ ಮಾಡುವವರಿಗೆ ಅಂಕಿ ಅಂಶಗಳೇ ಉತ್ತರ ಕೊಡುತ್ತಿವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ವಿಧಾನಸೌಧದಲ್ಲಿ ಸೋಮವಾರ ಮಾತನಾಡಿದ ಅವರು, ರೈತರಿಗೆ, ಸ್ತ್ರೀ ಶಕ್ತಿ ಗುಂಪುಗಳಿಗೆ ಸಾಲ ನೀಡಿದ್ದೇವೆ. ನಮ್ಮದು ರೈತ ಪರ ಸರ್ಕಾರ ಅನ್ನುವುದು ತಮ್ಮೆಲ್ಲರಿಗೂ ಗೊತ್ತಿದೆ.‌ ರೈತರು, ಆರೋಗ್ಯ, ಶಿಕ್ಷಣ ನಮ್ಮ ಸರ್ಕಾರದ ಆದ್ಯತೆ ಎಂದು ತಿಳಿಸಿದರು.

ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ 4.62 ಕೋಟಿ ಮೊತ್ತದ ಆಹಾರ ಕಿಟ್, ವೈದ್ಯಕೀಯ ಪರಿಕರಗಳನ್ನ ನೀಡಿದ್ದಾರೆ.
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 58 ಕೋಟಿ ನೆರವು ನೀಡಲಾಗಿದೆ. ಈ ವರ್ಷ 25.67 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರಲ್ಲಿ 19,370 ಕೋಟಿ ಸಾಲ ನೀಡೋದು ಸಂತೋಷದ ವಿಷಯ. ಅಭಿವೃದ್ಧಿ ಆಗ್ತಿಲ್ಲ ಎಂದು ಟೀಕೆ ಮಾಡ್ತಿರೋರಿಗೆ ಅಂಕಿ ಅಂಶಗಳೇ ಉತ್ತರ ಕೊಡುತ್ತಿವೆ ಎಂದು ಸಿಎಂ ಹೇಳಿದರು.

ಕರ್ನಾಟಕ ಆರ್ಥಿಕ ಪ್ಯಾಕೇಜ್‌: ಆಹಾರ ವಿಚಾರದಲ್ಲಿ ಭರಪೂರ ನೆರವು, ಸಾಲ ಮರು ಪಾವತಿಗೂ ದಿನಾಂಕ ವಿಸ್ತರಣೆ!
ಇದೊಂದೇ ಇಲಾಖೆಯಲ್ಲ, ಎಲ್ಲಾ ಇಲಾಖೆಯಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದೇವೆ. ಪ್ರಧಾನಿ ಮೋದಿಯವರ ಆಶೀರ್ವಾದದಿಂದ ಹತ್ತು ಹಲವು ಅಭಿವೃದ್ಧಿ ಕೆಲಸ ಮಾಡ್ತಿದ್ದೇವೆ. ಇವತ್ತಿಂದ ಎಲ್ಲಾ ರಿಲೀಫ್ ಕೊಟ್ಟಿದ್ದೇವೆ. ಹಾಗಂತ ಕೋವಿಡ್ ಹೋಗಿದೆ ಅಂದುಕೊಳ್ಳೋದು ಬೇಡ. ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಯ್ದುಕೊಂಡು ಕೋವಿಡ್ ಓಡಿಸಲು ಸಹಕರಿಸಬೇಕು ಎಂದು ಸಿಎಂ ಮನವಿ ಮಾಡಿಕೊಂಡರು.‌
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ