ಆ್ಯಪ್ನಗರ

ಹಸಿರು ಪಟಾಕಿ ಬಳಸಿ, ಸರಳ ದೀಪಾವಳಿ ಆಚರಿಸಿ: ರಾಜ್ಯದ ಜನತೆಗೆ ಯಡಿಯೂರಪ್ಪ ಮನವಿ

ಕೊರೊನಾ ಕಾರಣದಿಂದ ಈ ಬಾರಿಯ ದೀಪಾವಳಿಯನ್ನು ಹಸಿರು ಪಟಾಕಿಯೊಂದಿಗೆ ಆಚರಿಸಿ ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ರಾಜ್ಯದ ಜನತೆಗೆ ಮನವಿ ಮಾಡಿದ್ದು, ಸರಳವಾಗಿ, ಅರ್ಥಗರ್ಭಿತವಾಗಿ, ಭಕ್ತಿಪೂರ್ವಕವಾಗಿ ಹಬ್ಬ ಆಚರಿಸಿ ಎಂದು ಕರೆ ನೀಡಿದ್ದಾರೆ.

Vijaya Karnataka Web 6 Nov 2020, 8:46 pm
ಬೆಂಗಳೂರು: ಕೊರೊನಾ ಪರಿಸ್ಥಿತಿಯಿಂದ ಈ ಬಾರಿಯ ದೀಪಾವಳಿಗೆ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ಸರಕಾರ ನಿಷೇಧಿಸಿ ಶುಕ್ರವಾರ ಆದೇಶ ಹೊರಡಿಸಿತ್ತು. ಆದರೆ, ಈಗ ನಿರ್ಧಾರದಲ್ಲಿ ಸಣ್ಣ ಮಾರ್ಪಾಡು ಮಾಡಿರುವ ಸರಕಾರ ಹಸಿರು ಪಟಾಕಿ ಬಳಕೆಗೆ ಅನುಮತಿ ನೀಡಿದೆ. ಈ ಬಗ್ಗೆ ರಾಜ್ಯದ ಜನತೆಗೆ ಮನವಿ ಮಾಡಿರುವ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹಸಿರು ಪಟಾಕಿ ಬಳಸಿ, ಸರಳ ದೀಪಾವಳಿ ಆಚರಿಸಿ ಎಂದು ಕರೆ ನೀಡಿದ್ದಾರೆ.
Vijaya Karnataka Web BSY
ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ


ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೊರೊನಾ ವೈರಸ್‌ ನಿಯಂತ್ರಣಕ್ಕೆ ರಾಜ್ಯ ಸರಕಾರ ಇಲ್ಲಿಯವರೆಗೂ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಇಂತಹ ಸಮಯದಲ್ಲಿ ಸಾರ್ವಜನಿಕರ ಹಾಗೂ ಮಕ್ಕಳ ಆರೋಗ್ಯದ ಹಿತದೃಷ್ಠಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಬಾರಿಯ ದೀಪಾವಳಿಯನ್ನು ಹಸಿರು ಪಟಾಕಿಯೊಂದಿಗೆ ಆಚರಿಸಿ ಎಂದು ಹೇಳಿರುವ ಸಿಎಂ ಬಿಎಸ್‌ವೈ, ಸರಳವಾಗಿ, ಅರ್ಥಗರ್ಭಿತವಾಗಿ, ಭಕ್ತಿಪೂರ್ವಕವಾಗಿ ಹಬ್ಬ ಆಚರಿಸುವುದು ಸೂಕ್ತ ಎಂದು ಮುಂಚಿತವಾಗಿಯೇ ರಾಜ್ಯದ ಜನತೆಗೆ ದೀಪಾವಳಿಯ ಶುಭಾಶಯಗಳನ್ನು ಬಿಎಸ್‌ ಯಡಿಯೂರಪ್ಪ ಕೋರಿದ್ದಾರೆ.

ದೀಪಾವಳಿಗಿಲ್ಲ ಪಟಾಕಿ ಸದ್ದು! ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧಾರ

ಹಸಿರು ಪಟಾಕಿ ಎಂದರೇನು..?
ಕಳೆದ ವರ್ಷ ಸಿಎಸ್‌ಐಆರ್‌ ಮತ್ತು ಎನ್‌ಇಆರ್‌ಐ ವಿಜ್ಞಾನಿಗಳು ಹಸಿರು ಪಟಾಕಿಗಳನ್ನು ಅಭಿವೃದ್ಧಿಪಡಿಸಿದ್ದರು. ಶೇ.30ಕ್ಕಿಂತ ಕಡಿಮೆ ವಾಯುಮಾಲಿನ್ಯಕಾರಕ ಅಂಶಗಳನ್ನು ಹೊಂದಿರುವ ಹಾಗೂ ಸಾಮಾನ್ಯ ಪಟಾಕಿಗಳಿಗಿಂತ ಕಡಿಮೆ ಶಬ್ಧ ಮಾಡುವ ಪಟಾಕಿಗಳನ್ನು ಹಸಿರು ಪಟಾಕಿ ಎಂದು ಕರೆಯಲಾಗುತ್ತಿದೆ.

ರಾಜ್ಯದಲ್ಲಿ ಪಟಾಕಿ ನಿಷೇಧ ಓಕೆ.. ಆದ್ರೆ, ದೀಪಾವಳಿ ಹೊತ್ತಲ್ಲಿ ಕಡೇ ಕ್ಷಣದ ನಿರ್ಧಾರ ಏಕೆ..?

ಲಿಥಿಯಂ ಮತ್ತು ಆರ್ಸೆನಿಕ್, ಬೇರಿಯಮ್ ಮತ್ತು ಸೀಸದಂತಹ ನಿಷೇಧಿತ ರಾಸಾಯನಿಕಗಳನ್ನು ಈ ಹಸಿರು ಪಟಾಕಿಗಳು ಹೊಂದಿರುವುದಿಲ್ಲ. ಪಟಾಕಿ ಸಿಡಿದಾಗ ಧೂಳು ಬರುವುದಿಲ್ಲ ಎನ್ನಲಾಗಿದೆ. ಕಳೆದ ವರ್ಷ ಆರೋಗ್ಯ ಸಚಿವ ಡಾ.ಹರ್ಷವರ್ಧನ್‌ ಈ ಪಟಾಕಿಗಳನ್ನು ಬಿಡುಗಡೆಮಾಡಿದ್ದರು. ಆದರೆ, ಈ ಬಾರಿ ದಿಲ್ಲಿಯಲ್ಲಿ ಹಸಿರು ಪಟಾಕಿಗಳನ್ನು ಕೂಡ ನಿಷೇಧಿಸುವಂತೆ ರಾಷ್ಟ್ರೀಯ ಹಸಿರು ಪ್ರಾಧಿಕಾರ ಆಗ್ರಹಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ