ಆ್ಯಪ್ನಗರ

ಬಳ್ಳಾರಿ ಘಟನೆಗೆ ಸಿಎಂ ವಿಷಾದ: ಸೋಂಕಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ ಎಂದು ಬಿಎಸ್‌ವೈ ಮನವಿ

ಬಳ್ಳಾರಿಯಲ್ಲಿ ಕೊರೊನಾ ಸೋಂಕಿತರ ಅಂತ್ಯ ಸಂಸ್ಕಾರವನ್ನು ಅಮಾನವೀಯ ರೀತಿಯಲ್ಲಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಿಎಸ್‌ ಯಡಿಯೂರಪ್ಪ ಆರೋಗ್ಯ ಸಿಬ್ಬಂದಿಗೆ ಮಾನವೀಯತೆಯಿಂದ ನಡೆದುಕೊಳ್ಳೋಣ. ಮಾನವೀಯತೆಗಿಂತ ದೊಡ್ಡ ಧರ್ಮ ಯಾವುದೂ ಇಲ್ಲ ಎಂದು ಹೇಳಿದ್ದಾರೆ.

Vijaya Karnataka Web 30 Jun 2020, 9:37 pm
ಬೆಂಗಳೂರು: ಬಳ್ಳಾರಿಯಲ್ಲಿ ಕೊರೊನಾ ವೈರಸ್ ಸೋಂಕಿತರ ಅಂತ್ಯ ಸಂಸ್ಕಾರವನ್ನು ಅಮಾನವೀಯ ರೀತಿಯಲ್ಲಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಸಿಬ್ಬಂದಿಯ ನಡವಳಿಕೆ ಅಮಾನವೀಯ ಹಾಗೂ ತೀವ್ರ ನೋವಿನ ಸಂಗತಿ ಎಂದು ವಿಷಾದಿಸಿದ್ದಾರೆ.
Vijaya Karnataka Web cm bs yediyurappa requesting health workers to show humanity to coronavirus patients
ಬಳ್ಳಾರಿ ಘಟನೆಗೆ ಸಿಎಂ ವಿಷಾದ: ಸೋಂಕಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ ಎಂದು ಬಿಎಸ್‌ವೈ ಮನವಿ


ಈ ಬಗ್ಗೆ ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಳ್ಳಾರಿಯಲ್ಲಿ ಕೊರೊನಾ ಸೋಂಕಿತರ ಅಂತ್ಯ ಸಂಸ್ಕಾರದ ಸಂದರ್ಭದಲ್ಲಿ ಸಿಬ್ಬಂದಿ ನಡವಳಿಕೆ ಅತ್ಯಂತ ಅಮಾನವೀಯ ಹಾಗೂ ತೀವ್ರ ನೋವಿನ ಸಂಗತಿ ಎಂದಿದ್ದು, ಕೊರೊನಾ ಸೋಂಕಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ ಎಂದು ಸಿಬ್ಬಂದಿಗೆ ಮನವಿ ಮಾಡಿದ್ದಾರೆ.


ಸೋಂಕಿತರ ಅಂತ್ಯ ಸಂಸ್ಕಾರವನ್ನು ಗೌರವದಿಂದ ನೆರವೇರಿಸಿ ಎಂದು ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿಗೆ ವಿನಂತಿಸುತ್ತೇನೆ. ಎಲ್ಲರೂ ಮಾನವೀಯತೆಯಿಂದ ನಡೆದುಕೊಳ್ಳೋಣ, ಮಾನವೀಯತೆಗಿಂತ ದೊಡ್ಡ ಧರ್ಮ ಯಾವುದೂ ಇಲ್ಲ ಎಂಬುದನ್ನು ಅರಿಯೋಣ ಎಂದು ಸಿಎಂ ಟ್ವೀಟ್‌ ಮಾಡಿದ್ದಾರೆ.

ಇನ್ನು, ಘಟನೆಗೆ ಸಂಬಂಧಿಸಿದದಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಿದ್ದಾರೆ. ಜಿಲ್ಲಾಡಳಿತವೂ ಕೂಡ ಕ್ಷಮೆಯಾಚಿಸಿದೆ. ಸೋಮವಾರ ಒಂದೇ ದಿನ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 8 ಜನ‌ ಮೃತಪಟ್ಟಿದ್ದರು. ಹೆಚ್ಚು ಜನ ಸಾವನ್ನಪ್ಪಿದ್ದರಿಂದ ಒಂದೇ ಜಾಗದಲ್ಲಿ ಶವ ಸಂಸ್ಕಾರ ನಡೆಸಲು ಆರೋಗ್ಯ ಇಲಾಖೆ ಸೂಚಿಸಿತ್ತು.

ಬಳ್ಳಾರಿಯ ಹೊರವಲಯದಲ್ಲಿ ಶವ ಸಂಸ್ಕಾರ ಮಾಡಲು ಜಾಗ ನಿಗದಿಪಡಿಸಲಾಗಿತ್ತು. ಆದರೆ, ಒಂದೇ ಗುಂಡಿಗೆ ಹೆಣಗಳನ್ನು ಹಾಕಲಾಗಿತ್ತು. ಈ ರೀತಿ ಶವಸಂಸ್ಕಾರ ಮಾಡಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ರಾಷ್ಟ್ರೀಯ ಮಾಧ್ಯಮಗಳಲ್ಲೂ ಕೂಡ ಈ ಘಟನೆ ಸುದ್ದಿಯಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ