ಆ್ಯಪ್ನಗರ

ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ವಿಚಾರ: ದಿಲ್ಲಿಗೆ ತೆರಳಿ ಸಮಾಲೋಚನೆ ಬಳಿಕ ನಿರ್ಧಾರ ಎಂದ ಸಿಎಂ ಯಡಿಯೂರಪ್ಪ

ಲಿಂಗಾಯತ ಸಮುದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ -2 ಪಟ್ಟಿಗೆ ಸೇರ್ಪಡೆಗೊಳಿಸುವ ಬಗ್ಗೆ ವಿಶೇಷ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಮಾರ್ಮಿಕವಾಗಿ ನುಡಿದಿದ್ದಾರೆ. ಈ ಬಗ್ಗೆ ದಿಲ್ಲಿಗೆ ತೆರಳಿ ಚರ್ಚೆ ನಡೆಸಿದ ನಂತರ ತಿರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

Vijaya Karnataka Web 27 Nov 2020, 11:16 am
ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ. ವಿಧಾನಸೌಧದ ಬಳಿ ಮಾತನಾಡಿದ ಸಿಎಂ ಬಿಎಸ್‌ವೈ, ವೀರಶೈವ ಲಿಂಗಾಯತ ಸಮುದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ -2 ಪಟ್ಟಿಗೆ ಸೇರ್ಪಡೆ ಸಂಬಂಧ ದಿಲ್ಲಿಗೆ ಹೋಗಿ ಸಮಾಲೋಚನೆ ನಡೆಸಿದ ಬಳಿಕ ನಿರ್ಧಾರ ಕೈಗೊಳ್ಳುತ್ತೇವೆ.
Vijaya Karnataka Web Karnataka CM BS Yediyurappa
Karnataka CM BS Yediyurappa


ಸಚಿವ ಸಂಪುಟದ ಇನ್ನಿತರ ಸಹದ್ಯೋಗಿಗಳ ಅಭಿಪ್ರಾಯವು ಇದೇ ಆಗಿದೆ ಎಂದಿದ್ದಾರೆ. ದಿಲ್ಲಿಗೆ ಹೋಗಿ ಚರ್ಚೆ ನಡೆಸುತ್ತೇವೆ. ನಂತರ ತಿರ್ಮಾನವನ್ನು ತೆಗೆದುಕೊಳ್ಳುತ್ತೇವೆ. ಅದು ವಿಶೇಷ ತಿರ್ಮಾನವಾಗಿರಲಿದೆ ಎಂದು ಮಾರ್ಮಿಕವಾಗಿ ನುಡಿದಿರುವ ಬಿಎಸ್‌ ಯಡಿಯೂರಪ್ಪ, ಇದಕ್ಕೆ ಬೇಕಾದ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದಿದ್ದಾರೆ.

ವೀರಶೈವ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ನಿರ್ಧಾರದ ಬಗ್ಗೆ ಸಮಿತಿ ಬೇಕು ಎನ್ನುವುದಾದರೆ ಮುಂದಿನ ದಿನಗಳಲ್ಲಿ ನೋಡುತ್ತೇವೆ ಎಂದಿದ್ದಾರೆ. ವೀರಶೈವ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಹಲವು ವರ್ಷಗಳಿಂದ ಬೇಡಿಕೆಯನ್ನು ಆ ಸಮುದಾಯದ ಮುಖಂಡರು ಮಾಡುತ್ತಿದ್ದಾರೆ. ಹಲವು ಸ್ವಾಮೀಜಿಗಳು ಪ್ರತಿಭಟನೆ ಕೂಡ ನಡೆಸಿದ್ದರು.

ಸುಧಾಮೂರ್ತಿಗೆ ಲಾಲ್‌ ಬಹದ್ದೂರ್‌ಶಾಸ್ತ್ರಿ ರಾಷ್ಟ್ರೀಯ ಪ್ರಶಸ್ತಿ: ಪ್ರಶಸ್ತಿಯ ಮೊತ್ತ ಸಶಸ್ತ್ರ ಪಡೆಗಳಿಗೆ ಸಮರ್ಪಣೆ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ