ಆ್ಯಪ್ನಗರ

15 ದಿನಕ್ಕೊಮ್ಮೆ ಸಿಎಂ ಬೆಂಗಳೂರು ರೌಂಡ್‌

ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಭಾನುವಾರ ಸತತ ಮೂರೂವರೆ ಗಂಟೆ ನಗರ ಪ್ರದಕ್ಷಿಣೆ ಮಾಡಿ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿದರು.

Vijaya Karnataka 9 Sep 2019, 5:00 am
ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಭಾನುವಾರ ಸತತ ಮೂರೂವರೆ ಗಂಟೆ ನಗರ ಪ್ರದಕ್ಷಿಣೆ ಮಾಡಿ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿದರು.
Vijaya Karnataka Web 0809-2-2-KSG_01 (17)


ಇನ್ನು ಮುಂದೆ ಪ್ರತಿ 15 ದಿನಗಳಿಗೊಮ್ಮೆ ನಗರದಲ್ಲಿ ಸಂಚರಿಸಿ ಸಮಸ್ಯೆ ಆಲಿಸುವುದರ ಜತೆಗೆ ಅಭಿವೃದ್ಧಿ ಯೋಜನೆಗಳಿಗೆ ವೇಗ ನೀಡಲಾಗುವುದು ಎಂದು ಸಿಎಂ ಹೇಳಿದರು. ಐಟಿ-ಬಿಟಿ ಕಂಪನಿಗಳು ಹೆಚ್ಚಿರುವ ಮಾರತಹಳ್ಳಿ ರಿಂಗ್‌ ರಸ್ತೆ, ಬೆಳಂದೂರು, ಕೆ.ಆರ್‌.ಪುರ, ಸಿಲ್ಕ್‌ಬೋರ್ಡ್‌ ಜಂಕ್ಷನ್‌ ಮೊದಲಾದ ಕಡೆ ಸಿಎಂ ಸಂಚರಿಸಿದರು. ಟ್ರಾಫಿಕ್‌ ಜಾಮ್‌ನಿಂದ ಉದ್ಯೋಗಿಗಳು ಕಚೇರಿಗೆ ಬರುವುದು ತಡವಾಗುತ್ತಿದೆ. ಇದರಿಂದ ವಾರ್ಷಿಕ 30 ಸಾವಿರ ಕೋಟಿ ರೂ. ನಷ್ಟವಾಗುತ್ತಿದೆ. ಟ್ರಾಫಿಕ್‌ ಜಾಮ್‌ ಕಡಿಮೆ ಮಾಡಲು ಸರಕಾರ ಸೂಕ್ತ ಯೋಜನೆ ಕೈಗೊಳ್ಳಬೇಕು ಎಂದು ಖಾಸಗಿ ಕಂಪನಿಗಳ ಸಂಘದ ಪದಾಧಿಕಾರಿಗಳು ಸಿಎಂಗೆ ಮನವಿ ಸಲ್ಲಿಸಿದರು. ಪರ್ಯಾಯ ವ್ಯವಸ್ಥೆ ಮಾಡುವುದಾಗಿ ಸಿಎಂ ಭರವಸೆ ನೀಡಿದರು.

ಎಲೆಕ್ಟ್ರಾನಿಕ್‌ ಸಿಟಿಗೆ 2021ರೊಳಗೆ ಮೆಟ್ರೊ ರೈಲು ಮಾರ್ಗ ಪೂರ್ಣಗೊಳಿಸುವುದಾಗಿ ಸಿಎಂ ತಿಳಿಸಿದರು. ಏರ್‌ಪೋರ್ಟ್‌ಗೆ ಸಂಪರ್ಕ ಕಲ್ಪಿಸುವ ಹೆಬ್ಬಾಳ ಜಂಕ್ಷನ್‌ನಲ್ಲಿ ಟ್ರಾಫಿಕ್‌ ಜಾಮ್‌ ತಗ್ಗಿಸಲು ಐದು ಲೇನ್‌ ನಿರ್ಮಾಣ ಮಾಡಲು ಡಿಪಿಆರ್‌ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ವೈಟ್‌ ಟಾಪಿಂಗ್‌ ಕಾಮಗಾರಿಗೆ ಪ್ರತಿ ಕಿ.ಮೀಗೆ ಹಿಂದಿನ ಸರಕಾರದಲ್ಲಿ 10-12 ಕೋಟಿ ರೂ. ವೆಚ್ಚ ಮಾಡಲಾಗುತ್ತಿತ್ತು. ನಾನು ಅದನ್ನು ಕೇವಲ 4.5 ಕೋಟಿ ರೂ. ವೆಚ್ಚದಲ್ಲಿ ಮಾಡಿ ತೋರಿಸುವುದಾಗಿ ಸಿಎಂ ಇದೇ ಸಂದರ್ಭದಲ್ಲಿ ಹೇಳಿದರು. ನಗರ ಪ್ರದಕ್ಷಣೆಯಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ, ಸಚಿವ ಆರ್‌.ಅಶೋಕ್‌, ಮೇಯರ್‌ ಗಂಗಾಂಬಿಕೆ ಹಾಗೂ ಅಧಿಕಾರಿಗಳು ಸಿಎಂ ಜೊತೆಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ