ಆ್ಯಪ್ನಗರ

ಪತಿ ಕಳೆದುಕೊಂಡ ಮಹಿಳೆಗೆ ಧೈರ್ಯ ತುಂಬಿದ ಸಿಎಂ ಕುಮಾರಸ್ವಾಮಿ

ಪತಿಯನ್ನು ಕಳೆದುಕೊಂಡು ಅತಂತ್ರವಾಗಿರುವ ಮಹಿಳೆಯೊಬ್ಬರಿಗೆ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ನೆರವು ನೀಡಿ ಸ್ಥೈರ್ಯ ತುಂಬಿದ ಮಾನವೀಯ ಘಟನೆ ಸೋಮವಾರ ನಡೆಯಿತು.

Vijaya Karnataka 2 Oct 2018, 9:34 am
ಬೆಂಗಳೂರು: ಪತಿಯನ್ನು ಕಳೆದುಕೊಂಡು ಅತಂತ್ರವಾಗಿರುವ ಮಹಿಳೆಯೊಬ್ಬರಿಗೆ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ನೆರವು ನೀಡಿ ಸ್ಥೈರ್ಯ ತುಂಬಿದ ಮಾನವೀಯ ಘಟನೆ ಸೋಮವಾರ ನಡೆಯಿತು.
Vijaya Karnataka Web k


ಚನ್ನಪಟ್ಟಣ ತಾಲೂಕಿನ ಗೃಹಿಣಿ ಶಿಲ್ಪಶ್ರೀ ಅವರು ಸಿಎಂ ಗೃಹ ಕಚೇರಿ 'ಕೃಷ್ಣಾ' ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ತಮ್ಮ ಸಂಕಷ್ಟವನ್ನು ಮನದಟ್ಟು ಮಾಡಿಕೊಟ್ಟರು. ''ಕಾರು ಚಾಲಕರಾಗಿದ್ದ ಪತಿ ನಾಗರಾಜು ಕಳೆದ ಆ.27 ರಂದು ಶಿವಮೊಗ್ಗಕ್ಕೆ ಬಾಡಿಗೆಗೆಂದು ತೆರಳಿದ್ದವರು ನಾಪತ್ತೆಯಾಗಿದ್ದರು. ಅವರು ಕೊಲೆಯಾಗಿರುವ ಸೆ.6 ರಂದು ಪೊಲೀಸರು ಮಾಹಿತಿ ನೀಡಿದರು. ಕುಟುಂಬದ ಆಸರೆಯಾಗಿದ್ದ ಪತಿ ಕಳೆದುಕೊಂಡು ಎರಡು ಮಕ್ಕಳ ವಿದ್ಯಾಭ್ಯಾಸ ಮತ್ತು ನಿರ್ವಹಣೆ ಮಾಡುವುದು ಹೇಗೆಂದು ದಿಕ್ಕು ತೋಚದಂತಾಗಿದೆ'' ಎಂದು ಶಿಲ್ಪಶ್ರೀ ಅಳಲು ತೋಡಿಕೊಂಡರು.

ಮಹಿಳೆಗೆ ಸಿಎಂ ಎರಡು ಲಕ್ಷ ರೂ. ಆರ್ಥಿಕ ನೆರವು ನೀಡಿದರು ಮತ್ತು ರಾಮನಗರ ಜಿಲ್ಲಾಧಿಕಾರಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಶಿಲ್ಪಶ್ರೀ ಅವರ ಇಬ್ಬರು ಮಕ್ಕಳಿಗೂ ವಸತಿ ಶಾಲೆಯಲ್ಲಿ ಪ್ರವೇಶ ದೊರಕಿಸಿಕೊಡುವಂತೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಬಾಲಕ ರೋಹಿತ್‌ ಎಂಬಾತನಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಲು ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ರೂ. ಚೆಕ್‌ ಅನ್ನು ಬಾಲಕನ ಪೋಷಕರಿಗೆ ಸಿಎಂ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ