ಮಾತೆ ಮಹಾದೇವಿ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ: ಸಿಎಂ ಸಂತಾಪ
ಲಿಂಗಾಯತ ತತ್ವ ಪ್ರಚಾರದ ನಿಟ್ಟಿನಲ್ಲಿ ಅಸಂಖ್ಯಾತ ಕೃತಿಗಳನ್ನು ರಚಿಸಿದ ಮಾತೆ ಮಹಾದೇವಿ ಅವರು ಸಮಾಜವನ್ನು ಒಂದುಗೂಡಿಸುವುದರಲ್ಲಿ ನಿರತರಾಗಿದ್ದರು ಎಂದು ಅವರು ಸ್ಮರಿಸಿದ್ದಾರೆ.
Vijaya Karnataka Web 14 Mar 2019, 6:50 pm
ಬೆಂಗಳೂರು: ಐದು ದಶಕಗಳಿಗಿಂತಲೂ ಹೆಚ್ಚು ಕಾಲ ಲಿಂಗಾಯತ ಧರ್ಮ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಮಾತೆ ಮಹಾದೇವಿ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಲಿಂಗಾಯತ ತತ್ವ ಪ್ರಚಾರದ ನಿಟ್ಟಿನಲ್ಲಿ ಅಸಂಖ್ಯಾತ ಕೃತಿಗಳನ್ನು ರಚಿಸಿದ ಮಾತೆ ಮಹಾದೇವಿ ಅವರು ಸಮಾಜವನ್ನು ಒಂದುಗೂಡಿಸುವುದರಲ್ಲಿ ನಿರತರಾಗಿದ್ದರು ಎಂದು ಅವರು ಸ್ಮರಿಸಿದ್ದಾರೆ.
ಕೂಡಲಸಂಗಮದ ಬಸವ ಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಭಕ್ತವರ್ಗಕ್ಕೆ ಆ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.
ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಒಂದು ವಾರದಿಂದ ಮಾತೆ ಮಹಾದೇವಿ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ಉಸಿರಾಟದ ಸಮಸ್ಯೆ ಮತ್ತು ಶ್ವಾಸಕೋಶದ ಸೋಂಕಿನಿಂದ ಮಾತೆ ಮಹಾದೇವಿ ಬಳಲುತ್ತಿದ್ದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ತೀವ್ರ ಉಸಿರಾಟದ ಸಮಸ್ಯೆ ಮತ್ತು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮಾತೆ ಮಹಾದೇವಿ, ಕಳೆದ ಒಂದು ವಾರದಿಂದ ನಗರದ ಮಣಿಪಾಲ್ ಆಸ್ಪತ್ರೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ 4.45ರ ಸುಮಾರಿಗೆ ಲಿಂಗೈಕ್ಯರಾಗಿದ್ದಾರೆ.
ಲಿಂಗಾಯತ ತತ್ವ ಪ್ರಚಾರದ ನಿಟ್ಟಿನಲ್ಲಿ ಅಸಂಖ್ಯಾತ ಕೃತಿಗಳನ್ನು ರಚಿಸಿದ ಮಾತೆ ಮಹಾದೇವಿ ಅವರು ಸಮಾಜವನ್ನು ಒಂದುಗೂಡಿಸುವುದರಲ್ಲಿ ನಿರತರಾಗಿದ್ದರು ಎಂದು ಅವರು ಸ್ಮರಿಸಿದ್ದಾರೆ.
ಕೂಡಲಸಂಗಮದ ಬಸವ ಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಭಕ್ತವರ್ಗಕ್ಕೆ ಆ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.
ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಒಂದು ವಾರದಿಂದ ಮಾತೆ ಮಹಾದೇವಿ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ಉಸಿರಾಟದ ಸಮಸ್ಯೆ ಮತ್ತು ಶ್ವಾಸಕೋಶದ ಸೋಂಕಿನಿಂದ ಮಾತೆ ಮಹಾದೇವಿ ಬಳಲುತ್ತಿದ್ದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ತೀವ್ರ ಉಸಿರಾಟದ ಸಮಸ್ಯೆ ಮತ್ತು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮಾತೆ ಮಹಾದೇವಿ, ಕಳೆದ ಒಂದು ವಾರದಿಂದ ನಗರದ ಮಣಿಪಾಲ್ ಆಸ್ಪತ್ರೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ 4.45ರ ಸುಮಾರಿಗೆ ಲಿಂಗೈಕ್ಯರಾಗಿದ್ದಾರೆ.